Andolana originals

ರೈತರಿಂದ ಖರೀದಿಸುವ ಹಾಲಿನ ದರ ಕಡಿತ

ಹೈನುಗಾರಿಕೆಯನ್ನು ಅವಲಂಬಿಸಿರುವ ರೈತ ಕುಟುಂಬಗಳಿಗೆ ಹೊಡೆತ

ಮಂಜು ಕೋಟೆ
ಎಚ್. ಡಿ. ಕೋಟೆ: ಮೈಮುಲ್ ಆಡಳಿತ ಮಂಡಳಿಯವರು ರೈತರಿಂದ ಖರೀದಿ ಮಾಡುವ ಹಾಲಿನ ದರವನ್ನು ಕಡಿಮೆ ಮಾಡಿರುವುದರಿಂದ ರೈತರಿಗೆ ಹೊಡೆತ ಬಿದ್ದಿದೆ.

ಜಿಲ್ಲೆಯಲ್ಲಿ ಹೈನುಗಾರಿಕೆ ಮುಖಾಂತರ ರೈತರು ಆರ್ಥಿಕ ಬೆಳವಣಿಗೆ ಕಾಣುತ್ತಿರುವ ಇಂತಹ ಸಂದರ್ಭದಲ್ಲಿ ಪ್ರತಿ ಲೀಟರ್ ಹಾಲಿಗೆ ೨ ರೂ. ಗಳನ್ನು ಕಡಿತಗೊಳಿಸಿರುವುದು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಆಂಧ್ರಪ್ರದೇಶದ ತಿರುಪತಿಯ ಲಾಡು ಪ್ರಕರಣದಿಂದ ಕರ್ನಾಟಕದ ನಂದಿನಿ ಹಾಲು, ತುಪ್ಪ, ಬೆಣ್ಣೆ, ಮೊಸರು ಇನ್ನಿತರ ಪದಾರ್ಥಗಳಿಗೆ ಬೇಡಿಕೆ ಹೆಚ್ಚಾಗಿದೆ. ಇಂಥ ಸಂದರ್ಭದಲ್ಲಿ ರೈತರು ಡೇರಿಗಳಿಗೆ ನೀಡುವ ಹಾಲಿನ ದರ ಕಡಿತ ಮಾಡಿದ್ದು, ಪ್ರತಿಯೊಬ್ಬ ರೈತರಿಗೂ ಪ್ರತಿನಿತ್ಯ ೫೦ ರಿಂದ ೧೦೦ ರೂ. ವರೆಗೆ ಆದಾಯ ಕಡಿಮೆಯಾಗಿದೆ.

ಸರ್ಕಾರದಿಂದ ಪ್ರತಿ ಲೀಟರ್‌ಗೆ ನೀಡುತ್ತಿದ್ದ ಪ್ರೋತ್ಸಾಹ ಧನ ೫ ರೂ. ಗಳು ಕಳೆದ ೭ ತಿಂಗಳಿನಿಂದ ರೈತರಿಗೆ ಸೇರಿಲ್ಲ. ಈ ನಡುವೆ ಸಾವಿರಾರು ರೂ. ಖರ್ಚು ಮಾಡಿ, ಸಾಲ ಮಾಡಿ ಜಾನುವಾರುಗಳ ಸಾಕಣೆ ಮಾಡುತ್ತಾ ಹೈನುಗಾರಿಕೆ ನಡೆಸುತ್ತಿದ್ದಾರೆ. ಪ್ರತಿ ಲೀಟರ್ ಹಾಲನ್ನು ಹಸುವಿನಿಂದ ಪಡೆಯ ಬೇಕಾದರೆ ರೈತ ಕುಟುಂಬ ಬೆಳಿಗ್ಗೆಯಿಂದ ರಾತ್ರಿಯವರೆಗೆ ಕೆಲಸ ಮಾಡಬೇಕಾಗಿದೆ.

ಡೇರಿಗೆ ನೀಡುತ್ತಿದ್ದ ಪ್ರತಿ ಲೀಟರ್ ಹಾಲಿಗೆ ೩೩ ರೂ. ನಂತೆ ಮೈಮುಲ್ ೧೫ ದಿನಗಳಿಗೊಮ್ಮೆ ರೈತರ ಬ್ಯಾಂಕ್ ಖಾತೆಗೆ ಮೊತ್ತವನ್ನು ಜಮಾ ಮಾಡುತ್ತಿತ್ತು. ಈಗ ಪ್ರತಿ ಲೀಟರ್ ಹಾಲಿಗೆ ೨ ರೂ. ಕಡಿಮೆ ಮಾಡಿರುವುದರಿಂದ ಜಿಲ್ಲೆಯ ೯೬,೨೧೬ ರೈತರಿಗೆ ೯ ಲಕ್ಷ ಲೀಟರ್ ಹಾಲಿಗೆ ಬೆಲೆ ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಬೇಸಿಗೆ ಬರುವುದರಿಂದ ಹೈನುಗಾರಿಕೆಯನ್ನು ಉಳಿಸಿಕೊಂಡು ಹಾಲು ಉತ್ಪಾದನೆ ಮಾಡುವುದು ಸವಾಲಿನ ಕೆಲಸವಾಗಲಿದೆ. ಆದ್ದರಿಂದ ರೈತರಿಂದ ಖರೀದಿ ಮಾಡುವ ಹಾಲಿನ ದರವನ್ನು ಹೆಚ್ಚು ಮಾಡಿದರೆ ಮಾತ್ರ ಹೈನುಗಾರಿಕೆ ಉಳಿಯಲು ಸಾಧ್ಯವಾಗಲಿದೆ ಎನ್ನುತ್ತಾರೆ ಹಾಲು ಉತ್ಪಾದಕರು.

ಒಂದು ತಿಂಗಳಿನಿಂದ ರೈತರಿಗೆ ಹಾಲು ಸರಬರಾಜು ಮಾಡಿರುವ ಹಣವನ್ನು ನೀಡಿಲ್ಲ. ಇದನ್ನು ಸರಿದೂಗಿಸಲು ಪ್ರತಿ ಲೀಟರ್‌ಗೆ ೨ ರೂ. ಗಳನ್ನು ಕಡಿಮೆ ಮಾಡಲಾಗಿದೆ. ಇದು ತಾತ್ಕಾಲಿಕವಾಗಿದೆ. ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರೈತರ ಹಾಲಿಗೆ ನೀಡುತ್ತಿರುವ ದರಕ್ಕಿಂತ ಅತಿ ಹೆಚ್ಚು ಬೆಲೆಯನ್ನು ನಾವು ನೀಡುತ್ತಿದ್ದೇವೆ. ಮೈಮುಲ್ ರೈತರ ಪರವಾಗಿ ಕೆಲಸ ಮಾಡುತ್ತಿದೆ. -ಚೆಲುವರಾಜು, ಮೈಮುಲ್ ಅಧ್ಯಕ್ಷರು

 

 

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

8 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

11 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

13 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

13 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

13 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

13 hours ago