Andolana originals

ನೋಂದಣಿ ಶುಲ್ಕ ಹೆಚ್ಚಳ; ಆಸ್ತಿ ಖರೀದಿಗೆ ಹಿನ್ನಡೆ

ಎಚ್.ಎಸ್.ದಿನೇಶ್ ಕುಮಾರ್

ರಿಯಲ್ ಎಸ್ಟೇಟ್ ಉದ್ಯಮಕ್ಕೂ ಬೀಳಲಿದೆ ಭಾರೀ ಹೊಡೆತ

ಸ್ವಾಧೀನ, ಭೋಗ್ಯ ಪತ್ರ, ಸ್ಥಿರಾಸ್ತಿ ಶುದ್ಧ ಕ್ರಯ ಪತ್ರಕ್ಕೂ ಈ ಶುಲ್ಕ ಅನ್ವಯ

ಮೈಸೂರು: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಆಸ್ತಿ ನೋಂದಣಿ ಶುಲ್ಕವನ್ನು ದುಪ್ಪಟ್ಟು ಮಾಡಿದ್ದು, ಸೋಮವಾರದಿಂದಲೇ ಪರಿಷ್ಕತ ಆಸ್ತಿ ನೋಂದಣಿ ಶುಲ್ಕ ಜಾರಿಗೆ ಬರಲಿದೆ.

ಪೆಟ್ರೋಲ್, ಹಾಲು, ಬಸ್ ಪ್ರಯಾಣ ದರ, ವಿದ್ಯುತ್, ನೀರು ದರ ಹೆಚ್ಚಳದ ಬೆನ್ನಲ್ಲೇ ಇದೀಗ ಆಸ್ತಿಗಳ ನೋಂದಣಿ ಶುಲ್ಕವನ್ನು ಹೆಚ್ಚಳ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಆ ಮೂಲಕ ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಇದೀಗ ಆಸ್ತಿ ನೋಂದಣಿ ಶುಲ್ಕ ಶೇ.೧ರಿಂದ ಶೇ.೨ರಷ್ಟು ಏರಿಕೆ ಮಾಡಲಾಗಿದ್ದು, ಇದರಿಂದಾಗಿ ಬಡವರು ಹಾಗೂ ಮಧ್ಯಮ ವರ್ಗದವರು ಇನ್ನು ಮುಂದೆ ಆಸ್ತಿ ಖರೀದಿಸುವ ಸಂಬಂಧ ಒಮ್ಮೆ ಯೋಚಿಸುವಂತಾಗಿದೆ.

ರಾಜ್ಯದಲ್ಲಿ ಈವರೆಗೂ ನಿವೇಶನ, ಭೂಮಿ, ಫ್ಲ್ಯಾಟ್, ಮನೆ ಸೇರಿದಂತೆ ಸ್ಥಿರಾಸ್ತಿ ಖರೀದಿ ವೇಳೆ ಶೇ.೧ರಷ್ಟು ನೋಂದಣಿ ಶುಲ್ಕ ಹಾಗೂ ಶೇ.೫.೬ರಷ್ಟು ಮುದ್ರಾಂಕ ಶುಲ್ಕ ಸೇರಿ ಶೇ.೬.೬ ರಷ್ಟು ಶುಲ್ಕ ಇತ್ತು. ಆದರೆ ಈಗ ಏರಿಕೆಯಿಂದ ಒಟ್ಟು ಶೇ.೭.೬ರಷ್ಟು ಶುಲ್ಕ ಪಾವತಿಸಬೇಕಿದೆ. ಸ್ವಾಧಿನ, ಭೋಗ್ಯ ಪತ್ರ, ಸ್ಥಿರಾಸ್ತಿ ಶುದ್ಧ ಕ್ರಯ ಪತ್ರ ಸೇರಿದಂತೆ ವಿವಿಧ ಆಸ್ತಿ ಖರೀದಿ ನೋಂದಣಿಗೆ ಈ ಶುಲ್ಕ ಅನ್ವಯವಾಗಲಿದೆ.

ಸರ್ಕಾರದ ಈ ನಿರ್ಧಾರದಿಂದಾಗಿ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಹೊಡೆತ ಬಿದ್ದಂತಾಗಿದೆ. ನಗರದಾದ್ಯಂತ ಭೂಮಿಯ ಬೆಲೆ ಗಗನಕ್ಕೇರಿದೆ. ಬಡವರು ಹಾಗೂ ಮಧ್ಯಮ ವರ್ಗದವರು ಭೂಮಿ ಖರೀದಿಯ ಬಗ್ಗೆ ಚಿಂತಿಸಲೂ ಆಗದಷ್ಟು ದರಗಳು ಹೆಚ್ಚಳವಾಗಿವೆ.

ನಗರದ ಹೊರವಲಯಗಳಲ್ಲಿ ಸ್ವಲ್ಪಮಟ್ಟಿಗೆ ಭೂಮಿ ಬೆಲೆ ಕಡಿಮೆಯಿದೆ. ಭೂಮಿಯನ್ನು ಖರೀದಿಸುವವರು ಇದೀಗ ನೋಂದಣಿ ಶುಲ್ಕಕ್ಕೂ ಹೆಚ್ಚು ಹಣ ಹೊಂದಿಸುವ ಅನಿವಾರ್ಯತೆಗೆ ಸಿಲುಕಲಿದ್ದಾರೆ. ಬಡವರಿಗೆ ಅನುಕೂಲ ಮಾಡಿಕೊಡಬೇಕಾದ ಸರ್ಕಾರ, ಇದೀಗ ಶುಲ್ಕ ಹೆಚ್ಚಳದ ಮೂಲಕ ಬಡವರನ್ನು ಸಂಕಷ್ಟಕ್ಕೆ ದೂಡಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಶುಲ್ಕ ಹೆಚ್ಚಳದ ಕಾರಣ ರಿಯಲ್ ಎಸ್ಟೇಟ್ ಉದ್ಯಮಕ್ಕೂ ಹೊಡೆತ ಬೀಳುವಂತಾಗಿದೆ. ಮೈಸೂರು ನಗರವನ್ನು ಕೇಂದ್ರೀಕರಿಸಿದಲ್ಲಿ ಸುಮಾರು ೨೦ ಕಿ.ಮೀ. ವ್ಯಾಪ್ತಿಯಲ್ಲಿ ಖಾಸಗಿ ಬಡಾವಣೆಗಳು ನಿರ್ಮಾಣವಾಗಿವೆ. ಸಾವಿರಾರು ನಿವೇಶನಗಳು ಮಾರಾಟಕ್ಕೆ ಸಿದ್ಧವಾಗಿವೆ. ಇದೀಗ ಶುಲ್ಕ ಹೆಚ್ಚಳದಿಂದಾಗಿ ನಿವೇಶನ ಮಾರಾಟಕ್ಕೆ ಹಿನ್ನಡೆ ಉಂಟಾಗಲಿದೆ ಎನ್ನುತ್ತಾರೆ ರಿಯಲ್ ಎಸ್ಟೇಟ್ ಉದ್ಯಮಿಗಳು.

” ನಗರದಲ್ಲಿನ ಗೃಹ ನಿರ್ಮಾಣ ಸಹಕಾರ ಸಂಘಗಳಲ್ಲಿ, ಖಾಸಗಿ ಡೆವಲಪರ್‌ಗಳ ಬಳಿ ನಿವೇಶನಕ್ಕಾಗಿ ಜನರು ಹಲವಾರು ವರ್ಷಗಳಿಂದ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಮುಡಾ ಹಗರಣದ ನಂತರ ನಿವೇಶನಗಳ ಬಿಡುಗಡೆ ಆಗುತ್ತಿಲ್ಲ. ಖಾತೆ ಮಾಡಿಕೊಡುವುದನ್ನು ನಮೂನೆ ೯ ಮತ್ತು ೧೧ ನೀಡಲು ಆಯಾ ಪಂಚಾಯ್ತಿ ವ್ಯಾಪ್ತಿಗೆ ವಹಿಸಲಾಗಿದೆ. ಅಲ್ಲಿಯೂ ಕೆಲಸಗಳು ವೇಗ ಪಡೆದುಕೊಂಡಿಲ್ಲ. ಇಂತಹ ಸಂದರ್ಭದಲ್ಲಿ ನೋಂದಣಿ ಶುಲ್ಕ ಹೆಚ್ಚಳದ ಅವಶ್ಯಕತೆ ಇರಲಿಲ್ಲ. ಗ್ಯಾರಂಟಿ ಯೋಜನೆಗಳಿ ಗಾಗಿ ಸರ್ಕಾರ ಬೆಲೆಗಳನ್ನು ಹೆಚ್ಚಳ ಮಾಡುತ್ತಿದೆ.”

-ಎಸ್.ಎಂ.ಶಿವಪ್ರಕಾಶ್, ಎಸ್‌ಎಂಪಿ ಡೆವಲಪರ‍್ಸ್

” ಮೈಸೂರಿನಲ್ಲಿ ನಿವೇಶನಗಳ ಬೆಲೆ ಗಗನಕ್ಕೇರಿದೆ. ಬಡವರು ನಿವೇಶನ ಖರೀದಿ ಮಾಡಲು ಸಾಧ್ಯವೇ ಎನ್ನುವ ಮಟ್ಟಿಗೆ ಬೆಲೆಗಳು ಹೆಚ್ಚಳವಾಗಿದೆ. ಇಂತಹ ಸಂದರ್ಭದಲ್ಲಿ ನೋಂದಣಿ ಶುಲ್ಕ ಹೆಚ್ಚಳ ಮಾಡಿರುವುದು ಸರಿಯಲ್ಲ. ಈಗಾಗಲೇ ಮುದ್ರಾಂಕ ಮತ್ತು ನೋಂದಣಿ ಶುಲ್ಕ ಆಂಧ್ರ ಮತ್ತು ತೆಲಂಗಾಣಕ್ಕಿಂತ ನಮ್ಮ ರಾಜ್ಯದಲ್ಲಿ ಹೆಚ್ಚಿದೆ. ಹೀಗಾದಲ್ಲಿ ಜನರು ನಿವೇಶನ ಖರೀದಿಸುವುದು ಕಷ್ಟಕರವಾಗುತ್ತದೆ. ಯಾವುದೇ ಸರ್ಕಾರ ಬಡವರ ಪರ ನಿರ್ಧಾರ ಕೈಗೊಳ್ಳಬೇಕು. ಉಳ್ಳವರು ಈ ಬಗ್ಗೆ ಚಿಂತಿಸುವುದಿಲ್ಲ. ಸರ್ಕಾರ ಈ ಬಗ್ಗೆ ಆಲೋಚಿಸಬೇಕು.”

-ಎಂ.ಎಸ್.ಧನಂಜಯ,  ಪತ್ರ ಬರಹಗಾರರ ಸಂಘದ ರಾಜ್ಯ ಉಪಾಧ್ಯಕ್ಷ 

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

9 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago