ಪತ್ರಕರ್ತ, ಬರಹಗಾರ, ರವಿ ಬೆಳಗೆರೆಯವರ ನಿಧನದ ನಂತರ ಸ್ಥಗಿತಗೊಂಡಿದ್ದ ಕನ್ನಡ ಪ್ರಸಿದ್ಧ ವಾರ ಪತ್ರಿಕೆ ‘ಹಾಯ್ ಬೆಂಗಳೂರು’ ಪುನರಾರಂಭಗೊಂಡಿರುವುದು ಸಂತಸದ ವಿಚಾರ, ಒಂದು ಕಾಲದಲ್ಲಿ ರಾಜ್ಯದಲ್ಲೇ ಅತ್ಯಂತ ಜನಪ್ರಿಯ ವಾರ ಪತ್ರಿಕೆ ಅನಿಸಿಕೊಂಡಿದ್ದ ‘ಹಾಯ್ ಬೆಂಗಳೂರು’ ಪತ್ರಿಕೆಯು ರವಿ ಬೆಳಗೆರೆಯವರ ಪುತ್ರಿ ಭಾವನ ಬೆಳಗೆರೆಯವರ ಸಾರಥ್ಯದಲ್ಲಿ ಈಗ ಹೊರಬರುತ್ತಿದೆ. ರವಿ ಬೆಳಗೆರೆಯವರು ತಮ್ಮ ತೀಕ್ಷವಾದ ಬರವಣಿಗೆ, ಯಾವುದಕ್ಕೂ ರಾಜಿಯಾಗದೆ ನೇರ ಬರವಣಿಗೆಗಳ ಮೂಲಕ ಸಮಾಜವನು ಎಚ್ಚರಿಸುತ್ತಿದ್ದರು. ಅಲ್ಲದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿಕೊಡಬೇಕು ಎಂಬ ನಿಲುವನ್ನು ಪತ್ರಿಕೆ ಹೊಂದಿತ್ತು ಎಂದರೂ ತಪ್ಪಾಗಲಾರದು. ಇದರಿಂದಾಗಿಯೇ ಅಂದು ರಾಜ್ಯದಲ್ಲಿ ಬಹುದೊಡ್ಡ ಓದುಗ ಬಳಗವನ್ನೇ ಸಂಪಾದಿಸಿತ್ತು. ‘ದೈತ್ಯ ಬರಹಗಾರ’ ಎಂದು ಅನಿಸಿಕೊಳ್ಳುತ್ತಿದ್ದ ಹಾಗೂ ‘ಹಿಮಾಲಯನ್ ಬ್ಲಂಡರ್’ ಸೇರಿದಂತೆ ಅನೇಕ ಪುಸ್ತಕಗಳನ್ನು ರಚಿಸಿರುವ ರವಿ ಬೆಳಗೆರೆಯವರಂತೆಯೇ ಭಾವನ ಬೆಳಗೆರೆಯವರೂ ಈ ಪ್ರತಿಕೆಯನ್ನು ಮುನ್ನಡೆಸಿಕೊಂಡು ಹೋಗಲಿ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು.
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…