ಪತ್ರಕರ್ತ, ಬರಹಗಾರ, ರವಿ ಬೆಳಗೆರೆಯವರ ನಿಧನದ ನಂತರ ಸ್ಥಗಿತಗೊಂಡಿದ್ದ ಕನ್ನಡ ಪ್ರಸಿದ್ಧ ವಾರ ಪತ್ರಿಕೆ ‘ಹಾಯ್ ಬೆಂಗಳೂರು’ ಪುನರಾರಂಭಗೊಂಡಿರುವುದು ಸಂತಸದ ವಿಚಾರ, ಒಂದು ಕಾಲದಲ್ಲಿ ರಾಜ್ಯದಲ್ಲೇ ಅತ್ಯಂತ ಜನಪ್ರಿಯ ವಾರ ಪತ್ರಿಕೆ ಅನಿಸಿಕೊಂಡಿದ್ದ ‘ಹಾಯ್ ಬೆಂಗಳೂರು’ ಪತ್ರಿಕೆಯು ರವಿ ಬೆಳಗೆರೆಯವರ ಪುತ್ರಿ ಭಾವನ ಬೆಳಗೆರೆಯವರ ಸಾರಥ್ಯದಲ್ಲಿ ಈಗ ಹೊರಬರುತ್ತಿದೆ. ರವಿ ಬೆಳಗೆರೆಯವರು ತಮ್ಮ ತೀಕ್ಷವಾದ ಬರವಣಿಗೆ, ಯಾವುದಕ್ಕೂ ರಾಜಿಯಾಗದೆ ನೇರ ಬರವಣಿಗೆಗಳ ಮೂಲಕ ಸಮಾಜವನು ಎಚ್ಚರಿಸುತ್ತಿದ್ದರು. ಅಲ್ಲದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿಕೊಡಬೇಕು ಎಂಬ ನಿಲುವನ್ನು ಪತ್ರಿಕೆ ಹೊಂದಿತ್ತು ಎಂದರೂ ತಪ್ಪಾಗಲಾರದು. ಇದರಿಂದಾಗಿಯೇ ಅಂದು ರಾಜ್ಯದಲ್ಲಿ ಬಹುದೊಡ್ಡ ಓದುಗ ಬಳಗವನ್ನೇ ಸಂಪಾದಿಸಿತ್ತು. ‘ದೈತ್ಯ ಬರಹಗಾರ’ ಎಂದು ಅನಿಸಿಕೊಳ್ಳುತ್ತಿದ್ದ ಹಾಗೂ ‘ಹಿಮಾಲಯನ್ ಬ್ಲಂಡರ್’ ಸೇರಿದಂತೆ ಅನೇಕ ಪುಸ್ತಕಗಳನ್ನು ರಚಿಸಿರುವ ರವಿ ಬೆಳಗೆರೆಯವರಂತೆಯೇ ಭಾವನ ಬೆಳಗೆರೆಯವರೂ ಈ ಪ್ರತಿಕೆಯನ್ನು ಮುನ್ನಡೆಸಿಕೊಂಡು ಹೋಗಲಿ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು.
ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ…
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…
ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…
ಬೆಂಗಳೂರು: ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರ ರೀತಿಯಲ್ಲಿ ನನಗೂ ಆಕಾಂಕ್ಷೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್…
ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಅಕ್ರಮ ಶೆಡ್ ತೆರವಿನ ಹಿನ್ನೆಲೆಯಲ್ಲಿ ಮನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿರಾಶ್ರಿತರಿಗೆ ನಾಳೆಯೇ ಜಿಬಿಎ,…