Andolana originals

ಪುನರಾರಂಭಗೊಂಡ ‘ಹಾಯ್ ಬೆಂಗಳೂರು’!

ಪತ್ರಕರ್ತ, ಬರಹಗಾರ, ರವಿ ಬೆಳಗೆರೆಯವರ ನಿಧನದ ನಂತರ ಸ್ಥಗಿತಗೊಂಡಿದ್ದ ಕನ್ನಡ ಪ್ರಸಿದ್ಧ ವಾರ ಪತ್ರಿಕೆ ‘ಹಾಯ್ ಬೆಂಗಳೂರು’ ಪುನರಾರಂಭಗೊಂಡಿರುವುದು ಸಂತಸದ ವಿಚಾರ, ಒಂದು ಕಾಲದಲ್ಲಿ ರಾಜ್ಯದಲ್ಲೇ ಅತ್ಯಂತ ಜನಪ್ರಿಯ ವಾರ ಪತ್ರಿಕೆ ಅನಿಸಿಕೊಂಡಿದ್ದ ‘ಹಾಯ್ ಬೆಂಗಳೂರು’ ಪತ್ರಿಕೆಯು ರವಿ ಬೆಳಗೆರೆಯವರ ಪುತ್ರಿ ಭಾವನ ಬೆಳಗೆರೆಯವರ ಸಾರಥ್ಯದಲ್ಲಿ ಈಗ ಹೊರಬರುತ್ತಿದೆ. ರವಿ ಬೆಳಗೆರೆಯವರು ತಮ್ಮ ತೀಕ್ಷವಾದ ಬರವಣಿಗೆ, ಯಾವುದಕ್ಕೂ ರಾಜಿಯಾಗದೆ ನೇರ ಬರವಣಿಗೆಗಳ ಮೂಲಕ ಸಮಾಜವನು ಎಚ್ಚರಿಸುತ್ತಿದ್ದರು. ಅಲ್ಲದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿಕೊಡಬೇಕು ಎಂಬ ನಿಲುವನ್ನು ಪತ್ರಿಕೆ ಹೊಂದಿತ್ತು ಎಂದರೂ ತಪ್ಪಾಗಲಾರದು. ಇದರಿಂದಾಗಿಯೇ ಅಂದು ರಾಜ್ಯದಲ್ಲಿ ಬಹುದೊಡ್ಡ ಓದುಗ ಬಳಗವನ್ನೇ ಸಂಪಾದಿಸಿತ್ತು. ‘ದೈತ್ಯ ಬರಹಗಾರ’ ಎಂದು ಅನಿಸಿಕೊಳ್ಳುತ್ತಿದ್ದ ಹಾಗೂ ‘ಹಿಮಾಲಯನ್ ಬ್ಲಂಡರ್’ ಸೇರಿದಂತೆ ಅನೇಕ ಪುಸ್ತಕಗಳನ್ನು ರಚಿಸಿರುವ ರವಿ ಬೆಳಗೆರೆಯವರಂತೆಯೇ ಭಾವನ ಬೆಳಗೆರೆಯವರೂ ಈ ಪ್ರತಿಕೆಯನ್ನು ಮುನ್ನಡೆಸಿಕೊಂಡು ಹೋಗಲಿ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

9 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago