Andolana originals

ಒಣಗಿದ ಅಪಾಯಕಾರಿ ಮರಗಳ ತೆರವು

ಕಾರ್ಯಾಚರಣೆ ಆರಂಭಿಸಿದ ನಗರಪಾಲಿಕೆ 

ಮೈಸೂರು: ನಗರದ ವಿವಿಧ ಬಡಾವಣೆಗಳಲ್ಲಿಒಣಗಿದ ಮರಗಳು ಹಾಗೂ ಅಪಾಯಕಾರಿ ರೆಂಬೆಗಳ ತೆರವಿಗೆ ಮಹಾ ನಗರಪಾಲಿಕೆಯ ತೋಟಗಾರಿಕೆ ವಿಭಾಗ ಕಾರ್ಯಾಚರಣೆ ಆರಂಭಿಸಿದೆ.

‘ಆಂದೋಲನ’ ದಿನಪತ್ರಿಕೆ ನಡೆಸಿದ ‘ಒಣ ಮರ ಜನರು ಹೈರಾಣ’ ಅಭಿಯಾನದಲ್ಲಿ ಫೆ.೨೬ ರಿಂದ ಮಾ.೩ರವರೆಗೆ ಒಣ ಮರಗಳು ಹಾಗೂ ರೆಂಬೆಗಳ ಬಗ್ಗೆ ಸಾರ್ವಜನಿಕರು ನೀಡಿರುವ ದೂರುಗಳು, ಅಭಿಪ್ರಾಯಗಳನ್ನು ಪ್ರಕಟಿಸಲಾಗಿತ್ತು. ಒಣಗಿದ ಅಪಾಯಕಾರಿ ಮರದ ಬೃಹತ್ ರೆಂಬೆಗಳನ್ನು ನಗರಪಾಲಿಕೆ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಅವರ ಮಾರ್ಗದರ್ಶನದಲ್ಲಿ ತೆರವುಗೊಳಿಸಲಾಗಿದೆ.

ರಾಜೀವನಗರದ ಮುಖ್ಯರಸ್ತೆಯಲ್ಲಿ ಸಂಪೂರ್ಣವಾಗಿ ಒಣಗಿ ನಿಂತಿದ್ದ ದೊಡ್ಡ ಮರದ ಬಗ್ಗೆ ಇಂದ್ರೇಶ್ ಎಂಬವರು ಪತ್ರಿಕೆಗೆ ಫೋಟೊ ಸಹಿತ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಆ ಮರದ ಎ ರೆಂಬೆಗಳನ್ನು ತೆರವು ಮಾಡಲಾಗಿದೆ.

ಪೂರ್ಣವಾಗಿ ತೆರವು ಮಾಡಲು ಅರಣ್ಯ ಇಲಾಖೆ ಇನ್ನೂ ಅನುಮತಿ ನೀಡಿಲ್ಲ. ಆದರೂ ಸಾರ್ವಜನಿಕರ ಹಿತದೃಷ್ಟಿಯಿಂದ ತೆರವು ಮಾಡಲಾಗಿದೆ ಎಂದು ಮೋಹನ್ ತಿಳಿಸಿದರು.

ನಗರದ ವಿವಿಧ ಬಡಾವಣೆಗಳು ಹಾಗೂ ಮುಖ್ಯ ರಸ್ತೆಗಳಲ್ಲಿ ಕಂಡು ಬಂದಿರುವ ಒಣಗಿದ ರೆಂಬೆಗಳನ್ನು ತೋಟಗಾರಿಕೆ ವಿಭಾಗದ ಸಿಬ್ಬಂದಿ ನಿರಂತರವಾಗಿ ಹುಡುಕಾಡಿ ಏಣಿ ಇರುವ ಜೀಪ್ ಸಹಾಯದಿಂದ ತೆರವು ಮಾಡುತ್ತಿzರೆ. ಬಿಸಿಲು ಹೆಚ್ಚಾಗುತ್ತಿರುವುದರಿಂದ ರೆಂಬೆಗಳು ಕೂಡ ಒಣಗಲು ಆರಂಭಿಸಿವೆ.

ಕೆಲವು ದೊಡ್ಡ ಮರಗಳಲ್ಲಿ ಅರ್ಧ ಮುರಿದಿರುವ ರೆಂಬೆಗಳೂ ಇವೆ. ಅವು ಸ್ವಲ್ಪ ಹಸಿರಾಗಿ ಕಂಡರೂ ಯಾವ ಗಳಿಗೆಯಲ್ಲಿ ಬೇಕಾದರೂ ಮುರಿದು ಬೀಳುವ ಸಾಧ್ಯತೆ ಇದೆ ಎಂದು ತೋಟಗಾರಿಕೆ ಸಿಬ್ಬಂದಿ ಹೇಳುತ್ತಾರೆ.

ನಗರದ ಕೆಲವು ಉದ್ಯಾನಗಳಲ್ಲಿ ದಟ್ಟವಾಗಿ ಬೆಳೆದಿರುವ ಮರಗಳಲ್ಲಿ ಬೇರೆ ಬೇರೆ ಕಾರಣಗಳಿಂದ ಮುರಿದಿರುವ ರೆಂಬೆಗಳ ಹುಡುಕಾಟ ನಡೆಸಿದ್ದಾರೆ.

ರಸ್ತೆ ಬದಿಯಲ್ಲಿ ಕಂಡುಬಂದ ಅಪಾಯಕಾರಿ ಹಾಗೂ ಒಣಗಿದ ಮರಗಳು ಹರಡಿಕೊಂಡಿರುವ ರೆಂಬೆಗಳನ್ನು ತೆರವು ಮಾಡಿದ್ದೇವೆ ಎಂದು ಹೇಳಿದರು.

” ‘ಆಂದೋಲನ’ ದಿನಪತ್ರಿಕೆ ವರದಿ ಆಧರಿಸಿ ಅರಣ್ಯ ಇಲಾಖೆಗೆ ಪತ್ರ ಬರೆದು ಅನುಮತಿ ಕೋರಿದ್ದೇವೆ. ಈವರೆಗೂ ನಮಗೆ ಅನುಮತಿ ಸಿಕ್ಕಿಲ್ಲ. ಆದರೂ ಯಾವಾಗ ಬೇಕಾದರೂ ಅಪಾಯ ಉಂಟು ಮಾಡುವ ಒಣಗಿರುವ ಮರಗಳ ರೆಂಬೆಗಳನ್ನು ತೆರವು ಮಾಡಿದ್ದೇವೆ. ಅಪಾಯದ ಅಂಚಿನಲ್ಲಿರುವ ಹಲವು ಹಸಿ ಮರಗಳನ್ನು ಅನುಮತಿ ಇಲ್ಲದ ಕಾರಣ, ಹಾಗೆಯೇ ಉಳಿಸಿದ್ದೇವೆ.”

 ಮೋಹನ್ ಗೌಡ, ಸಹಾಯಕ ಕಾರ್ಯಪಾಲಕ ಅಭಿಯಂತರರು, ಮಹಾನಗರ ಪಾಲಿಕೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಳೆಗಾಲ ಸಮೀಪಿಸುತ್ತಿದ್ದಂತೆ ಎಚ್ಚೆತ್ತ ಅರಮನೆ ಆಡಳಿತ ಮಂಡಳಿ: ಕೋಟೆ ದುರಸ್ತಿ ಕಾರ್ಯ ಪ್ರಗತಿಯಲ್ಲಿ

ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…

26 mins ago

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಸಮ್ಮತಿ: ಮಿತ್ರ ರಾಷ್ಟ್ರಗಳಿಗಷ್ಟೇ ಅನ್ವಯ

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್‌ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…

35 mins ago

ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ: ಆರ್.‌ಅಶೋಕ್‌

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

55 mins ago

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…

1 hour ago

ಪಾಕಿಸ್ತಾನದಲ್ಲಿ ಮಜೂದ್‌ ಅಜರ್‌ ಸಹೋದರ ಅನುಮಾನಾಸ್ಪದ ಸಾವು

ಇಸ್ಲಾಮಾಬಾದ್:‌ ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…

1 hour ago

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

2 hours ago