Andolana originals

ಒಣಗಿದ ಅಪಾಯಕಾರಿ ಮರಗಳ ತೆರವು

ಕಾರ್ಯಾಚರಣೆ ಆರಂಭಿಸಿದ ನಗರಪಾಲಿಕೆ 

ಮೈಸೂರು: ನಗರದ ವಿವಿಧ ಬಡಾವಣೆಗಳಲ್ಲಿಒಣಗಿದ ಮರಗಳು ಹಾಗೂ ಅಪಾಯಕಾರಿ ರೆಂಬೆಗಳ ತೆರವಿಗೆ ಮಹಾ ನಗರಪಾಲಿಕೆಯ ತೋಟಗಾರಿಕೆ ವಿಭಾಗ ಕಾರ್ಯಾಚರಣೆ ಆರಂಭಿಸಿದೆ.

‘ಆಂದೋಲನ’ ದಿನಪತ್ರಿಕೆ ನಡೆಸಿದ ‘ಒಣ ಮರ ಜನರು ಹೈರಾಣ’ ಅಭಿಯಾನದಲ್ಲಿ ಫೆ.೨೬ ರಿಂದ ಮಾ.೩ರವರೆಗೆ ಒಣ ಮರಗಳು ಹಾಗೂ ರೆಂಬೆಗಳ ಬಗ್ಗೆ ಸಾರ್ವಜನಿಕರು ನೀಡಿರುವ ದೂರುಗಳು, ಅಭಿಪ್ರಾಯಗಳನ್ನು ಪ್ರಕಟಿಸಲಾಗಿತ್ತು. ಒಣಗಿದ ಅಪಾಯಕಾರಿ ಮರದ ಬೃಹತ್ ರೆಂಬೆಗಳನ್ನು ನಗರಪಾಲಿಕೆ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಅವರ ಮಾರ್ಗದರ್ಶನದಲ್ಲಿ ತೆರವುಗೊಳಿಸಲಾಗಿದೆ.

ರಾಜೀವನಗರದ ಮುಖ್ಯರಸ್ತೆಯಲ್ಲಿ ಸಂಪೂರ್ಣವಾಗಿ ಒಣಗಿ ನಿಂತಿದ್ದ ದೊಡ್ಡ ಮರದ ಬಗ್ಗೆ ಇಂದ್ರೇಶ್ ಎಂಬವರು ಪತ್ರಿಕೆಗೆ ಫೋಟೊ ಸಹಿತ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಆ ಮರದ ಎ ರೆಂಬೆಗಳನ್ನು ತೆರವು ಮಾಡಲಾಗಿದೆ.

ಪೂರ್ಣವಾಗಿ ತೆರವು ಮಾಡಲು ಅರಣ್ಯ ಇಲಾಖೆ ಇನ್ನೂ ಅನುಮತಿ ನೀಡಿಲ್ಲ. ಆದರೂ ಸಾರ್ವಜನಿಕರ ಹಿತದೃಷ್ಟಿಯಿಂದ ತೆರವು ಮಾಡಲಾಗಿದೆ ಎಂದು ಮೋಹನ್ ತಿಳಿಸಿದರು.

ನಗರದ ವಿವಿಧ ಬಡಾವಣೆಗಳು ಹಾಗೂ ಮುಖ್ಯ ರಸ್ತೆಗಳಲ್ಲಿ ಕಂಡು ಬಂದಿರುವ ಒಣಗಿದ ರೆಂಬೆಗಳನ್ನು ತೋಟಗಾರಿಕೆ ವಿಭಾಗದ ಸಿಬ್ಬಂದಿ ನಿರಂತರವಾಗಿ ಹುಡುಕಾಡಿ ಏಣಿ ಇರುವ ಜೀಪ್ ಸಹಾಯದಿಂದ ತೆರವು ಮಾಡುತ್ತಿzರೆ. ಬಿಸಿಲು ಹೆಚ್ಚಾಗುತ್ತಿರುವುದರಿಂದ ರೆಂಬೆಗಳು ಕೂಡ ಒಣಗಲು ಆರಂಭಿಸಿವೆ.

ಕೆಲವು ದೊಡ್ಡ ಮರಗಳಲ್ಲಿ ಅರ್ಧ ಮುರಿದಿರುವ ರೆಂಬೆಗಳೂ ಇವೆ. ಅವು ಸ್ವಲ್ಪ ಹಸಿರಾಗಿ ಕಂಡರೂ ಯಾವ ಗಳಿಗೆಯಲ್ಲಿ ಬೇಕಾದರೂ ಮುರಿದು ಬೀಳುವ ಸಾಧ್ಯತೆ ಇದೆ ಎಂದು ತೋಟಗಾರಿಕೆ ಸಿಬ್ಬಂದಿ ಹೇಳುತ್ತಾರೆ.

ನಗರದ ಕೆಲವು ಉದ್ಯಾನಗಳಲ್ಲಿ ದಟ್ಟವಾಗಿ ಬೆಳೆದಿರುವ ಮರಗಳಲ್ಲಿ ಬೇರೆ ಬೇರೆ ಕಾರಣಗಳಿಂದ ಮುರಿದಿರುವ ರೆಂಬೆಗಳ ಹುಡುಕಾಟ ನಡೆಸಿದ್ದಾರೆ.

ರಸ್ತೆ ಬದಿಯಲ್ಲಿ ಕಂಡುಬಂದ ಅಪಾಯಕಾರಿ ಹಾಗೂ ಒಣಗಿದ ಮರಗಳು ಹರಡಿಕೊಂಡಿರುವ ರೆಂಬೆಗಳನ್ನು ತೆರವು ಮಾಡಿದ್ದೇವೆ ಎಂದು ಹೇಳಿದರು.

” ‘ಆಂದೋಲನ’ ದಿನಪತ್ರಿಕೆ ವರದಿ ಆಧರಿಸಿ ಅರಣ್ಯ ಇಲಾಖೆಗೆ ಪತ್ರ ಬರೆದು ಅನುಮತಿ ಕೋರಿದ್ದೇವೆ. ಈವರೆಗೂ ನಮಗೆ ಅನುಮತಿ ಸಿಕ್ಕಿಲ್ಲ. ಆದರೂ ಯಾವಾಗ ಬೇಕಾದರೂ ಅಪಾಯ ಉಂಟು ಮಾಡುವ ಒಣಗಿರುವ ಮರಗಳ ರೆಂಬೆಗಳನ್ನು ತೆರವು ಮಾಡಿದ್ದೇವೆ. ಅಪಾಯದ ಅಂಚಿನಲ್ಲಿರುವ ಹಲವು ಹಸಿ ಮರಗಳನ್ನು ಅನುಮತಿ ಇಲ್ಲದ ಕಾರಣ, ಹಾಗೆಯೇ ಉಳಿಸಿದ್ದೇವೆ.”

 ಮೋಹನ್ ಗೌಡ, ಸಹಾಯಕ ಕಾರ್ಯಪಾಲಕ ಅಭಿಯಂತರರು, ಮಹಾನಗರ ಪಾಲಿಕೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ ; ಜೂನ್‌ 4 ಗುರುವಾರ

45 mins ago

ವಿಧಾನಪರಿಷತ್‌ ಚುನಾವಣೆ: ಹರಿಪ್ರಸಾದ್‌ ಸೇರಿ ನಾಲ್ವರಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್‌ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4…

13 hours ago

ನೂತನ ಸಿಎಂ ಡಿ.ಕೆ.ಶಿವಕುಮಾರ್‌ಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ…

13 hours ago

ಡಿಸಿಎಂ ಆಗಿ ಪರಮೇಶ್ವರ್‌ ಮತ್ತು 12 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಮಂದಿ ಶಾಸಕರು(ಓರ್ವ ಎಂಎಲ್‌ಸಿ…

14 hours ago

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು ರಾಜ್ಯದ 25ನೇ…

16 hours ago

ಸೋನಿಯಾ ಗಾಂಧಿ ನನ್ನ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುವೆ: ಡಿಕೆಶಿ

ಬೆಂಗಳೂರು: ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ…

17 hours ago