Andolana originals

ಒಣಗಿದ ಅಪಾಯಕಾರಿ ಮರಗಳ ತೆರವು

ಕಾರ್ಯಾಚರಣೆ ಆರಂಭಿಸಿದ ನಗರಪಾಲಿಕೆ 

ಮೈಸೂರು: ನಗರದ ವಿವಿಧ ಬಡಾವಣೆಗಳಲ್ಲಿಒಣಗಿದ ಮರಗಳು ಹಾಗೂ ಅಪಾಯಕಾರಿ ರೆಂಬೆಗಳ ತೆರವಿಗೆ ಮಹಾ ನಗರಪಾಲಿಕೆಯ ತೋಟಗಾರಿಕೆ ವಿಭಾಗ ಕಾರ್ಯಾಚರಣೆ ಆರಂಭಿಸಿದೆ.

‘ಆಂದೋಲನ’ ದಿನಪತ್ರಿಕೆ ನಡೆಸಿದ ‘ಒಣ ಮರ ಜನರು ಹೈರಾಣ’ ಅಭಿಯಾನದಲ್ಲಿ ಫೆ.೨೬ ರಿಂದ ಮಾ.೩ರವರೆಗೆ ಒಣ ಮರಗಳು ಹಾಗೂ ರೆಂಬೆಗಳ ಬಗ್ಗೆ ಸಾರ್ವಜನಿಕರು ನೀಡಿರುವ ದೂರುಗಳು, ಅಭಿಪ್ರಾಯಗಳನ್ನು ಪ್ರಕಟಿಸಲಾಗಿತ್ತು. ಒಣಗಿದ ಅಪಾಯಕಾರಿ ಮರದ ಬೃಹತ್ ರೆಂಬೆಗಳನ್ನು ನಗರಪಾಲಿಕೆ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಅವರ ಮಾರ್ಗದರ್ಶನದಲ್ಲಿ ತೆರವುಗೊಳಿಸಲಾಗಿದೆ.

ರಾಜೀವನಗರದ ಮುಖ್ಯರಸ್ತೆಯಲ್ಲಿ ಸಂಪೂರ್ಣವಾಗಿ ಒಣಗಿ ನಿಂತಿದ್ದ ದೊಡ್ಡ ಮರದ ಬಗ್ಗೆ ಇಂದ್ರೇಶ್ ಎಂಬವರು ಪತ್ರಿಕೆಗೆ ಫೋಟೊ ಸಹಿತ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಆ ಮರದ ಎ ರೆಂಬೆಗಳನ್ನು ತೆರವು ಮಾಡಲಾಗಿದೆ.

ಪೂರ್ಣವಾಗಿ ತೆರವು ಮಾಡಲು ಅರಣ್ಯ ಇಲಾಖೆ ಇನ್ನೂ ಅನುಮತಿ ನೀಡಿಲ್ಲ. ಆದರೂ ಸಾರ್ವಜನಿಕರ ಹಿತದೃಷ್ಟಿಯಿಂದ ತೆರವು ಮಾಡಲಾಗಿದೆ ಎಂದು ಮೋಹನ್ ತಿಳಿಸಿದರು.

ನಗರದ ವಿವಿಧ ಬಡಾವಣೆಗಳು ಹಾಗೂ ಮುಖ್ಯ ರಸ್ತೆಗಳಲ್ಲಿ ಕಂಡು ಬಂದಿರುವ ಒಣಗಿದ ರೆಂಬೆಗಳನ್ನು ತೋಟಗಾರಿಕೆ ವಿಭಾಗದ ಸಿಬ್ಬಂದಿ ನಿರಂತರವಾಗಿ ಹುಡುಕಾಡಿ ಏಣಿ ಇರುವ ಜೀಪ್ ಸಹಾಯದಿಂದ ತೆರವು ಮಾಡುತ್ತಿzರೆ. ಬಿಸಿಲು ಹೆಚ್ಚಾಗುತ್ತಿರುವುದರಿಂದ ರೆಂಬೆಗಳು ಕೂಡ ಒಣಗಲು ಆರಂಭಿಸಿವೆ.

ಕೆಲವು ದೊಡ್ಡ ಮರಗಳಲ್ಲಿ ಅರ್ಧ ಮುರಿದಿರುವ ರೆಂಬೆಗಳೂ ಇವೆ. ಅವು ಸ್ವಲ್ಪ ಹಸಿರಾಗಿ ಕಂಡರೂ ಯಾವ ಗಳಿಗೆಯಲ್ಲಿ ಬೇಕಾದರೂ ಮುರಿದು ಬೀಳುವ ಸಾಧ್ಯತೆ ಇದೆ ಎಂದು ತೋಟಗಾರಿಕೆ ಸಿಬ್ಬಂದಿ ಹೇಳುತ್ತಾರೆ.

ನಗರದ ಕೆಲವು ಉದ್ಯಾನಗಳಲ್ಲಿ ದಟ್ಟವಾಗಿ ಬೆಳೆದಿರುವ ಮರಗಳಲ್ಲಿ ಬೇರೆ ಬೇರೆ ಕಾರಣಗಳಿಂದ ಮುರಿದಿರುವ ರೆಂಬೆಗಳ ಹುಡುಕಾಟ ನಡೆಸಿದ್ದಾರೆ.

ರಸ್ತೆ ಬದಿಯಲ್ಲಿ ಕಂಡುಬಂದ ಅಪಾಯಕಾರಿ ಹಾಗೂ ಒಣಗಿದ ಮರಗಳು ಹರಡಿಕೊಂಡಿರುವ ರೆಂಬೆಗಳನ್ನು ತೆರವು ಮಾಡಿದ್ದೇವೆ ಎಂದು ಹೇಳಿದರು.

” ‘ಆಂದೋಲನ’ ದಿನಪತ್ರಿಕೆ ವರದಿ ಆಧರಿಸಿ ಅರಣ್ಯ ಇಲಾಖೆಗೆ ಪತ್ರ ಬರೆದು ಅನುಮತಿ ಕೋರಿದ್ದೇವೆ. ಈವರೆಗೂ ನಮಗೆ ಅನುಮತಿ ಸಿಕ್ಕಿಲ್ಲ. ಆದರೂ ಯಾವಾಗ ಬೇಕಾದರೂ ಅಪಾಯ ಉಂಟು ಮಾಡುವ ಒಣಗಿರುವ ಮರಗಳ ರೆಂಬೆಗಳನ್ನು ತೆರವು ಮಾಡಿದ್ದೇವೆ. ಅಪಾಯದ ಅಂಚಿನಲ್ಲಿರುವ ಹಲವು ಹಸಿ ಮರಗಳನ್ನು ಅನುಮತಿ ಇಲ್ಲದ ಕಾರಣ, ಹಾಗೆಯೇ ಉಳಿಸಿದ್ದೇವೆ.”

 ಮೋಹನ್ ಗೌಡ, ಸಹಾಯಕ ಕಾರ್ಯಪಾಲಕ ಅಭಿಯಂತರರು, ಮಹಾನಗರ ಪಾಲಿಕೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

8 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

8 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

9 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

10 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

10 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

13 hours ago