Andolana originals

‘ಬಸ್ ನಿಲ್ದಾಣದ ಶೌಚಾಲಯವನ್ನು ಬೇಗ ದುರಸ್ತಿಗೊಳಿಸಿ’

ಮಹಾದೇಶ್ ಎಂ.ಗೌಡ

ಹನೂರು: ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದ ದುರಸ್ತಿ ಕಾರ್ಯವನ್ನು ಶೀಘ್ರವೇ ಪೂರ್ಣಗೊಳಿಸಿ ಸೇವೆಗೆ ಸಮರ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪಟ್ಟಣಕ್ಕೆ ವಿವಿಧ ಗ್ರಾಮಗಳಿಂದ ಆಗಮಿಸುವ ಸಾರ್ವಜನಿಕರು ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ಬರುವ ಕಾರ್ಮಿಕರಿಗಾಗಿ ೨೦೦೪ರಲ್ಲಿ ಶಾಸಕರಾಗಿದ್ದ ಪರಿಮಳ ನಾಗಪ್ಪ ಈ ಶೌಚಾಲಯವನ್ನು ನಿರ್ಮಾಣ ಮಾಡಿಸಿದ್ದರು. ಈ ಶೌಚಾಲಯ ನಿರ್ಮಿಸಿ ೨ ವರ್ಷಗಳಾಗಿರುವುದರಿಂದ ಮೂತ್ರ ವಿಸರ್ಜನೆಯ ತಡೆಗೋಡೆಗಳು ಶಿಥಿಲವಾಗಿದ್ದವು. ಶೌಚಾಲಯದ ಬಾಗಿಲುಗಳು, ನೀರಿನ ಪೈಪ್‌ಲೈನ್, ನಲ್ಲಿಗಳು ಕಿತ್ತು ಬಂದು ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಈ ಸಂಬಂಧ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು.

ನಂತರ ಎಚ್ಚೆತ್ತ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಈ ಶೌಚಾಲಯವನ್ನು ೫ ಲಕ್ಷ ರೂ.ವೆಚ್ಚದಲ್ಲಿ ದುರಸ್ತಿಗೊಳಿಸಲು ೨ ತಿಂಗಳ ಹಿಂದೆ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಿದ್ದರು. ಆದರೆ, ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಪಟ್ಟಣಕ್ಕೆ ಬರುವ ಸಾರ್ವಜನಿಕರು, ಅಂಗಡಿ ಮಾಲೀಕರು, ಕೂಲಿ ಕಾರ್ಮಿಕರು, ಬಸ್ ಚಾಲಕರು, ನಿರ್ವಾಹಕರು ಹಾಗೂ ಪ್ರಯಾಣಿಕರಿಗೆ ತೊಂದರೆಯಾಗಿದೆ. ಬಾಕಿ ಇರುವ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಶೌಚಾಲಯವನ್ನು ಬಳಕೆಗೆ ನೀಡುವಂತೆ ಮನವಿ ವಾಡಿದ್ದಾರೆ.

ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು, ಜಾತ್ರಾ ಮಹೋತ್ಸವ ಹಾಗೂ ಹಬ್ಬ ಹರಿದಿನಗಳಲ್ಲಿ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಪಟ್ಟಣದ ಮಾರ್ಗವಾಗಿ ತೆರಳುವ ವಾಹನ ಸವಾರರು ಶೌಚಾಲಯಕ್ಕೆ ಹೋಗಲು ಪರದಾಡ ಬೇಕಿದೆ. ಸಂಬಂಧಪಟ್ಟ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಽಗಳು ಶೌಚಾಲಯವನ್ನು ಶೀಘ್ರ ದುರಸ್ತಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಚಿಕ್ಕದಾಗಿದ್ದ ಶೌಚಾಲಯದ ಮಲದ ಗುಂಡಿಯನ್ನು ಈಗಾಗಲೇ ದೊಡ್ಡದಾಗಿ ನಿರ್ಮಿಸಲಾಗಿದೆ. ಇನ್ನು ಕೇವಲ ೨ ದಿನಗಳ ಕಾಮಗಾರಿ ಮಾತ್ರ ಬಾಕಿ ಇದೆ. ಇನ್ನು ಒಂದು ವಾರದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗು ವುದು ಎಂದು ಗುತ್ತಿಗೆದಾರ ಷಣ್ಮುಗ ಪತ್ರಿಕೆಗೆ ತಿಳಿಸಿದ್ದಾರೆ

” ಖಾಸಗಿ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯ ಮುಚ್ಚಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಗುತ್ತಿಗೆದಾರನಿಗೆ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಈಗಾಗಲೇ ಸೂಚಿಸಲಾಗಿದೆ.”

-ಮಹೇಶ್‌ಕುಮಾರ್, ಮುಖ್ಯಾಧಿಕಾರಿ, ಹನೂರು ಪಪಂ

” ಹನೂರು ತಾಲ್ಲೂಕು ಕೇಂದ್ರವಾಗಿರುವುದರಿಂದ ಪ್ರತಿನಿತ್ಯ ವಿವಿಧ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ಶೌಚಾಲಯ ಮುಚ್ಚಿರುವುದರಿಂದ ಮೂತ್ರ ವಿಸರ್ಜನೆಗೆ ತೊಂದರೆಯಾಗಿದೆ. ಇನ್ನು ಮಹಿಳೆಯರ ಪಾಡಂತೂ ಹೇಳತೀರದಾಗಿದೆ. ಸಂಬಂಧಪಟ್ಟವರು ಬೇಗ ಕ್ರಮ ವಹಿಸಬೇಕು.”

-ನಂಜಪ್ಪ , ಎಪಿಎಂಸಿ ಮಾಜಿ ಸದಸ್ಯ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

3 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

10 hours ago