Mysore
29
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಓದುಗರ ಪತ್ರ: ಬಸ್ ತಂಗುದಾಣ ದುರಸ್ತಿಗೊಳಿಸಿ

dgp murder case

ನಂಜನಗೂಡು-ತಿ.ನರಸೀಪುರ ಮಾರ್ಗದಲ್ಲಿರುವ ಮುಳ್ಳೂರು ಗ್ರಾಮದ ಗೇಟ್ ಬಳಿ ಇರುವ ಬಸ್ ತಂಗುದಾಣವು ನಿರ್ವಹಣೆಯ ಕೊರತೆಯಿಂದಾಗಿ ಹದಗೆಟ್ಟು ಹೋಗಿದ್ದು, ಸಾರ್ವಜನಿಕರ ಉಪಯೋಗದಿಂದ ದೂರಾಗಿದೆ.

ಈ ತಂಗುದಾಣವನ್ನು ನಿರ್ಮಿಸಿ ಅನೇಕ ವರ್ಷಗಳೇ ಕಳೆದುಹೋಗಿದ್ದು, 3-4 ವರ್ಷಗಳ ಹಿಂದಷ್ಟೇ ಸುಣ್ಣ ಬಣ್ಣ ಬಳಿದು ದುರಸ್ತಿಗೊಳಿಸಲಾಗಿತ್ತು. ಆದರೆ ದುರಸ್ತಿಗೊಂಡ ಬಳಿಕವೂ ಸಂಬಂಧಪಟ್ಟವರು ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಬಸ್ ತಂಗುದಾಣ ಮತ್ತೆ ಹಾಳಾಗಿದೆ. ಇದರ ಗೋಡೆಗಳು ಬಿರುಕುಬಿಟ್ಟಿದ್ದು, ಕುಸಿದು ಬೀಳುವ ಆತಂಕ ಸೃಷ್ಟಿಯಾಗಿದೆ. ಇನ್ನು ತಂಗುದಾಣದೊಳಗೆ ಗಿಡಗಂಟಿಗಳು ಬೆಳೆದುಕೊಂಡಿದ್ದು, ಮಳೆನೀರು ಜಿನುಗಿ ನಿಲ್ದಾಣ ಸಂಪೂರ್ಣ ಕೆಸರುಮಯವಾಗಿದೆ. ಅಲ್ಲದೆ ಕೆಲವರು ಅಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಿರುವುದಲ್ಲದೆ ಮದ್ಯದ ಬಾಟಲಿಗಳನ್ನೂ ಬೀಸಾಡುತ್ತಿದ್ದು, ದುರ್ವಾಸನೆ ಬೀರುತ್ತಿದೆ.

ತಂಗುದಾಣದ ಈ ಶೋಚನೀಯ ಪರಿಸ್ಥಿತಿಯಿಂದಾಗಿ ಪ್ರಯಾಣಿಕರು ಬಿಸಿಲು, ಮಳೆ ಎನ್ನದೆ ರಸ್ತೆ ಬದಿಯಲ್ಲಿಯೇ ನಿಂತು ಬಸ್‌ಗಾಗಿ ಕಾಯುವ ಸ್ಥಿತಿ ನಿರ್ಮಾಣವಾಗಿದ್ದು, ಸಂಬಂಧಪಟ್ಟವರು ಕೂಡಲೇ ಈ ಬಸ್ ತಂಗುದಾಣವನ್ನು ದುರಸ್ತಿಗೊಳಿಸಬೇಕಿದೆ.
-ಎನ್.ಆರ್.ಚೇತನ್ ನಂಜನಗೂಡು.

Tags:
error: Content is protected !!