ಓದುಗರ ಪತ್ರ
ನಂಜನಗೂಡು-ತಿ.ನರಸೀಪುರ ಮಾರ್ಗದಲ್ಲಿರುವ ಮುಳ್ಳೂರು ಗ್ರಾಮದ ಗೇಟ್ ಬಳಿ ಇರುವ ಬಸ್ ತಂಗುದಾಣವು ನಿರ್ವಹಣೆಯ ಕೊರತೆಯಿಂದಾಗಿ ಹದಗೆಟ್ಟು ಹೋಗಿದ್ದು, ಸಾರ್ವಜನಿಕರ ಉಪಯೋಗದಿಂದ ದೂರಾಗಿದೆ.
ಈ ತಂಗುದಾಣವನ್ನು ನಿರ್ಮಿಸಿ ಅನೇಕ ವರ್ಷಗಳೇ ಕಳೆದುಹೋಗಿದ್ದು, 3-4 ವರ್ಷಗಳ ಹಿಂದಷ್ಟೇ ಸುಣ್ಣ ಬಣ್ಣ ಬಳಿದು ದುರಸ್ತಿಗೊಳಿಸಲಾಗಿತ್ತು. ಆದರೆ ದುರಸ್ತಿಗೊಂಡ ಬಳಿಕವೂ ಸಂಬಂಧಪಟ್ಟವರು ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಬಸ್ ತಂಗುದಾಣ ಮತ್ತೆ ಹಾಳಾಗಿದೆ. ಇದರ ಗೋಡೆಗಳು ಬಿರುಕುಬಿಟ್ಟಿದ್ದು, ಕುಸಿದು ಬೀಳುವ ಆತಂಕ ಸೃಷ್ಟಿಯಾಗಿದೆ. ಇನ್ನು ತಂಗುದಾಣದೊಳಗೆ ಗಿಡಗಂಟಿಗಳು ಬೆಳೆದುಕೊಂಡಿದ್ದು, ಮಳೆನೀರು ಜಿನುಗಿ ನಿಲ್ದಾಣ ಸಂಪೂರ್ಣ ಕೆಸರುಮಯವಾಗಿದೆ. ಅಲ್ಲದೆ ಕೆಲವರು ಅಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಿರುವುದಲ್ಲದೆ ಮದ್ಯದ ಬಾಟಲಿಗಳನ್ನೂ ಬೀಸಾಡುತ್ತಿದ್ದು, ದುರ್ವಾಸನೆ ಬೀರುತ್ತಿದೆ.
ತಂಗುದಾಣದ ಈ ಶೋಚನೀಯ ಪರಿಸ್ಥಿತಿಯಿಂದಾಗಿ ಪ್ರಯಾಣಿಕರು ಬಿಸಿಲು, ಮಳೆ ಎನ್ನದೆ ರಸ್ತೆ ಬದಿಯಲ್ಲಿಯೇ ನಿಂತು ಬಸ್ಗಾಗಿ ಕಾಯುವ ಸ್ಥಿತಿ ನಿರ್ಮಾಣವಾಗಿದ್ದು, ಸಂಬಂಧಪಟ್ಟವರು ಕೂಡಲೇ ಈ ಬಸ್ ತಂಗುದಾಣವನ್ನು ದುರಸ್ತಿಗೊಳಿಸಬೇಕಿದೆ.
-ಎನ್.ಆರ್.ಚೇತನ್ ನಂಜನಗೂಡು.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…