Andolana originals

ಓದುಗರ ಪತ್ರ: ಬಸ್ ತಂಗುದಾಣ ದುರಸ್ತಿಗೊಳಿಸಿ

ನಂಜನಗೂಡು-ತಿ.ನರಸೀಪುರ ಮಾರ್ಗದಲ್ಲಿರುವ ಮುಳ್ಳೂರು ಗ್ರಾಮದ ಗೇಟ್ ಬಳಿ ಇರುವ ಬಸ್ ತಂಗುದಾಣವು ನಿರ್ವಹಣೆಯ ಕೊರತೆಯಿಂದಾಗಿ ಹದಗೆಟ್ಟು ಹೋಗಿದ್ದು, ಸಾರ್ವಜನಿಕರ ಉಪಯೋಗದಿಂದ ದೂರಾಗಿದೆ.

ಈ ತಂಗುದಾಣವನ್ನು ನಿರ್ಮಿಸಿ ಅನೇಕ ವರ್ಷಗಳೇ ಕಳೆದುಹೋಗಿದ್ದು, 3-4 ವರ್ಷಗಳ ಹಿಂದಷ್ಟೇ ಸುಣ್ಣ ಬಣ್ಣ ಬಳಿದು ದುರಸ್ತಿಗೊಳಿಸಲಾಗಿತ್ತು. ಆದರೆ ದುರಸ್ತಿಗೊಂಡ ಬಳಿಕವೂ ಸಂಬಂಧಪಟ್ಟವರು ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಬಸ್ ತಂಗುದಾಣ ಮತ್ತೆ ಹಾಳಾಗಿದೆ. ಇದರ ಗೋಡೆಗಳು ಬಿರುಕುಬಿಟ್ಟಿದ್ದು, ಕುಸಿದು ಬೀಳುವ ಆತಂಕ ಸೃಷ್ಟಿಯಾಗಿದೆ. ಇನ್ನು ತಂಗುದಾಣದೊಳಗೆ ಗಿಡಗಂಟಿಗಳು ಬೆಳೆದುಕೊಂಡಿದ್ದು, ಮಳೆನೀರು ಜಿನುಗಿ ನಿಲ್ದಾಣ ಸಂಪೂರ್ಣ ಕೆಸರುಮಯವಾಗಿದೆ. ಅಲ್ಲದೆ ಕೆಲವರು ಅಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಿರುವುದಲ್ಲದೆ ಮದ್ಯದ ಬಾಟಲಿಗಳನ್ನೂ ಬೀಸಾಡುತ್ತಿದ್ದು, ದುರ್ವಾಸನೆ ಬೀರುತ್ತಿದೆ.

ತಂಗುದಾಣದ ಈ ಶೋಚನೀಯ ಪರಿಸ್ಥಿತಿಯಿಂದಾಗಿ ಪ್ರಯಾಣಿಕರು ಬಿಸಿಲು, ಮಳೆ ಎನ್ನದೆ ರಸ್ತೆ ಬದಿಯಲ್ಲಿಯೇ ನಿಂತು ಬಸ್‌ಗಾಗಿ ಕಾಯುವ ಸ್ಥಿತಿ ನಿರ್ಮಾಣವಾಗಿದ್ದು, ಸಂಬಂಧಪಟ್ಟವರು ಕೂಡಲೇ ಈ ಬಸ್ ತಂಗುದಾಣವನ್ನು ದುರಸ್ತಿಗೊಳಿಸಬೇಕಿದೆ.
-ಎನ್.ಆರ್.ಚೇತನ್ ನಂಜನಗೂಡು.

ಆಂದೋಲನ ಡೆಸ್ಕ್

Recent Posts

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

6 mins ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

3 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

4 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

5 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

6 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

6 hours ago