ಓದುಗರ ಪತ್ರ
ಮೈಸೂರಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಜಿಲ್ಲಾ ಹಾಪ್ಕಾಪ್ಸ್ನಿಂದ ಅರಮನೆ ಕಡೆಗೆ ತೆರಳುವ ಪಾದಚಾರಿ ರಸ್ತೆಯಲ್ಲಿ ಚಪ್ಪಡಿ ಕಲ್ಲುಗಳು ಕಿತ್ತುಬಂದು ಬಾಯ್ದೆರೆದು ಕೊಂಡಿವೆ. ಈ ಮಾರ್ಗದಲ್ಲಿ ದಿನನಿತ್ಯ ಸಾವಿರಾರು ಜನರು ಓಡಾಡುತ್ತಾರೆ. ರಾತ್ರಿಯ ವೇಳೆಯಂತೂ ಚಪ್ಪಡಿ ಕಲ್ಲುಗಳು ಮೇಲೆದ್ದು ಬಂದಿರುವುದು ಕಾಣಿಸದೇ ಆಯತಪ್ಪಿ ಬೀಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ದಸರಾಕ್ಕೆ ಕ್ಷಣಗಣನೆ ಶುರುವಾಗಿದೆ.
ಜನಪ್ರತಿನಿಧಿಗಳಿಗೆ ಇದರ ಅರಿವೇ ಇಲ್ಲ ಎನ್ನುವಂತಾಗಿದೆ. ದಸರಾ ಜಂಬೂ ಸವಾರಿ ಈ ಮಾರ್ಗದಲ್ಲೇ ಹಾದು ಹೋಗಲಿದ್ದು, ಇಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು ಆಸನ ಗಳನ್ನು ಅಳವಡಿಸಲಾಗುತ್ತದೆ. ಆದ್ದರಿಂದ ಜನಪ್ರತಿನಿಧಿಗಳು ಚಪ್ಪಡಿ ಕಲ್ಲುಗಳನ್ನು ಆದಷ್ಟು ಬೇಗ ಸರಿಪಡಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…