Andolana originals

ಓದುಗರ ಪತ್ರ: ಅರಮನೆ ಬಳಿ ಚಪ್ಪಡಿ ಕಲ್ಲು ಸರಿಪಡಿಸಿ

ಮೈಸೂರಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಜಿಲ್ಲಾ ಹಾಪ್‌ಕಾಪ್ಸ್ನಿಂದ ಅರಮನೆ ಕಡೆಗೆ ತೆರಳುವ ಪಾದಚಾರಿ ರಸ್ತೆಯಲ್ಲಿ ಚಪ್ಪಡಿ ಕಲ್ಲುಗಳು ಕಿತ್ತುಬಂದು ಬಾಯ್ದೆರೆದು ಕೊಂಡಿವೆ. ಈ ಮಾರ್ಗದಲ್ಲಿ ದಿನನಿತ್ಯ ಸಾವಿರಾರು ಜನರು ಓಡಾಡುತ್ತಾರೆ. ರಾತ್ರಿಯ ವೇಳೆಯಂತೂ ಚಪ್ಪಡಿ ಕಲ್ಲುಗಳು ಮೇಲೆದ್ದು ಬಂದಿರುವುದು ಕಾಣಿಸದೇ ಆಯತಪ್ಪಿ ಬೀಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ದಸರಾಕ್ಕೆ ಕ್ಷಣಗಣನೆ ಶುರುವಾಗಿದೆ.

ಜನಪ್ರತಿನಿಧಿಗಳಿಗೆ ಇದರ ಅರಿವೇ ಇಲ್ಲ ಎನ್ನುವಂತಾಗಿದೆ. ದಸರಾ ಜಂಬೂ ಸವಾರಿ ಈ ಮಾರ್ಗದಲ್ಲೇ ಹಾದು ಹೋಗಲಿದ್ದು, ಇಲ್ಲಿ ಸಾರ್ವಜನಿಕರು ಕುಳಿತುಕೊಳ್ಳಲು ಆಸನ ಗಳನ್ನು ಅಳವಡಿಸಲಾಗುತ್ತದೆ. ಆದ್ದರಿಂದ ಜನಪ್ರತಿನಿಧಿಗಳು ಚಪ್ಪಡಿ ಕಲ್ಲುಗಳನ್ನು ಆದಷ್ಟು ಬೇಗ ಸರಿಪಡಿಸಲು ಕ್ರಮ ಕೈಗೊಳ್ಳಬೇಕಾಗಿದೆ.

– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

57 mins ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

1 hour ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

2 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

3 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

6 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

7 hours ago