ಮಲ್ಕುಂಡಿ ಚನ್ನಪ್ಪ
ಮಲ್ಕುಂಡಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡ ದುರಸ್ತಿಗೆ ಪೋಷಕರು, ಗ್ರಾಮಸ್ಥರ ಆಗ್ರಹ
ಮಲ್ಕುಂಡಿ: ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿಗಳು ಶಿಥಿಲಗೊಂಡು, ಬೀಳುವ ಹಂತಕ್ಕೆ ತಲುಪಿದ್ದು, ಮಕ್ಕಳು ಭಯದ ವಾತಾವರಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೨೦ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ ಇದ್ದಾರೆ. ಶಾಲೆಯ ೪ ಕೊಠಡಿಗಳು ಸಂಪೂರ್ಣ ಶಿಥಿಲಗೊಂಡಿದ್ದು, ಮಳೆ ಬಂದಾಗ ಸೋರುವ ಕೊಠಡಿಗಳಲ್ಲಿಯೇ ಕುಳಿತು ಪಾಠ ಕೇಳುವ ಪರಿಸ್ಥಿತಿ ಉಂಟಾಗಿದೆ.
ಶಾಲೆಯ ಕೊಠಡಿಗಳು ಮಳೆ ಬಂದರೆ ಬಹಳ ಸೋರುತ್ತಿವೆ. ಆದರೆ, ಅಽಕಾರಿಗಳು ಇತ್ತ ಗಮನ ಹರಿಸಿಲ್ಲ. ಇದರಿಂದ ಮಕ್ಕಳು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಪಾಠ ಕೇಳಬೇಕಿದೆ ಎನ್ನುವುದು ಪೋಷಕರ ಆರೋಪ.
ಸುಮಾರು ೩೦ ವರ್ಷಗಳ ಹಿಂದೆ ಈ ಕಟ್ಟಡ ನಿರ್ಮಾಣವಾಗಿದ್ದು, ಬಹಳ ಸೋರುತ್ತಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈಗಲಾದರೂ ಸರ್ಕಾರ ಗಮನಹರಿಸಿ ಶಾಲೆಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕಿದೆ.
ಒಂದು ವರ್ಷದಿಂದ ಶಾಲೆ ಕೊಠಡಿಗಳು ಸೋರುತ್ತಿವೆ. ಸರ್ಕಾರ ಗ್ಯಾರಂಟಿಯೋಜನೆಗಳ ಜಾರಿ ಜೊತೆಗೆ ಶಾಲೆ ಕೊಠಡಿಗಳ ಅಭಿವೃದ್ಧಿಗೂ ಮುಂದಾಗಬೇಕಿದೆ ಎಂದು ತಾಪಂ ಮಾಜಿ ಸದಸ್ಯ ಎಸ್.ಬಸವರಾಜ್ ಹೇಳಿದರು.
” ಶಾಲೆಯ ಮುಖ್ಯ ಶಿಕ್ಷಕರು ಮನವಿ ಸಲ್ಲಿಸಿದರೆ ಪರಿಶೀಲಿಸಿ ಮುಂದಿನ ದಿನಗಳಲ್ಲಿ ಸರ್ಕಾರದ ಗಮನಕ್ಕೆ ತಂದು ಕೊಠಡಿ ದುರಸ್ತಿಗೊಳಿಸಲಾಗುವುದು.”
-ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ
ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…
ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…
ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…
ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು…
ಮೈಸೂರು : ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ, ಜೊತೆಗೆ ಸಂಶೋಧನೆಗೆ ಕಡಿಮೆ ಹಣವನ್ನು ವೆಚ್ಚ…
ಮಂಡ್ಯ : ಆಹಾರದ ಮಹತ್ವ ಹೆಚ್ಚಿದೆ. ಎಲ್ಲರೂ ಆಹಾರದ ಮಹತ್ವದ ಕುರಿತು ತಿಳಿದುಕೊಳ್ಳಬೇಕು. 30-40 ವರ್ಷಗಳ ಹಿಂದೆ ಭಾರತ ಆಹಾರದ…