Andolana originals

ಓದುಗರ ಪತ್ರ: ಭಿಕ್ಷೆ ಬೇಡುವ ಮಕ್ಕಳನ್ನು ರಕ್ಷಿಸಿ

ಆರ್ಥಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಅನೇಕ ನಗರಗಳ ಸಿಗ್ನಲ್‌ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಕೆಲ ಕುಟುಂಬಗಳವರು ಚಿಕ್ಕ ಚಿಕ್ಕ ಮಕ್ಕಳನ್ನು ಬಿಟ್ಟು ಭಿಕ್ಷೆ ಬೇಡಿಸುತ್ತಿದ್ದಾರೆ.

ಇದನ್ನೇ ವೃತ್ತಿಯಾಗಿಸಿಕೊಂಡಿರುವ ಅನೇಕರು ತಮ್ಮ ಮಕ್ಕಳ ಮೂಲಕ ಭಿಕ್ಷೆ ಬೇಡಿಸಿ ಬದುಕುತ್ತಿರುವುದು ವಿಷಾದಕರ.

ತಾವು ದುಡಿದು ಮಕ್ಕಳನ್ನು ಬೆಳೆಸಬೇಕಾದ ತಂದೆ-ತಾಯಿಯೇ ದೂರ ದಲ್ಲಿ ನಿಂತು ಮಕ್ಕಳನ್ನು ಭಿಕ್ಷೆ ಬೇಡಲು ಬಿಟ್ಟು ಅಲ್ಲಿಂದ ಬಂದ ಹಣದಲ್ಲಿ ಜೀವನ ಸಾಗಿಸುತ್ತಿರುವುದು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಮಾರಕವಾಗಿರುವ ಜತೆಗೆ ಆ ಮಕ್ಕಳ ಭವಿಷ್ಯವನ್ನೂ ಹಾಳು ಮಾಡಿದಂತಾಗಿದೆ.

ಕೇಂದ್ರ ಸರ್ಕಾರ ಬಡತನ ನಿರ್ಮೂಲನೆಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ರಾಜ್ಯ ಸರ್ಕಾರವೂ ವಿವಿಧ ಯೋಜನೆಗಳ ಮೂಲಕ ಸೌಲಭ್ಯಗಳನ್ನು ಕಲ್ಪಿಸಿದೆ. ವಸತಿ ಯೋಜನೆಗಳ ಮೂಲಕ ನಿರ್ಗತಿಕರಿಗೆ ಮನೆಗಳನ್ನೂ ನೀಡಲಾಗುತ್ತಿದೆ. ಇಷ್ಟಿದ್ದರೂ ತಾವು ದುಡಿದು ಮಕ್ಕಳನ್ನು ಸಾಕಬೇಕಿದ್ದ ತಂದೆ-ತಾಯಿಯರೇ ಚಿಕ್ಕ ವಯಸ್ಸಿನ ಮಕ್ಕಳನ್ನು ಬಿಟ್ಟು ಭಿಕ್ಷೆ ಬೇಡಿಸುವುದು ಸರಿಯೇ? ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಇಂತಹ ಮಕ್ಕಳನ್ನು ರಕಿಸಿ ಶಿಕ್ಷಣ, ವಸತಿ ಕಲ್ಪಿಸುವ ಜತೆಗೆ ಅವರ ಕುಟುಂಬಗಳನ್ನು ಸಂಪರ್ಕಿಸಿ ಅವರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಪರಿಹರಿಸುವ ಜತೆಗೆ ಎಲ್ಲರಂತೆ ಅವರೂ ದುಡಿಮೆ ಮಾಡಲು ಅವಕಾಶ ಮಾಡಿಕೊಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಇಬ್ಬರು ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

11 mins ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

2 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

3 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

3 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

3 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

3 hours ago