Andolana originals

ಓದುಗರ ಪತ್ರ: ಭಿಕ್ಷೆ ಬೇಡುವ ಮಕ್ಕಳನ್ನು ರಕ್ಷಿಸಿ

ಆರ್ಥಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಅನೇಕ ನಗರಗಳ ಸಿಗ್ನಲ್‌ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಕೆಲ ಕುಟುಂಬಗಳವರು ಚಿಕ್ಕ ಚಿಕ್ಕ ಮಕ್ಕಳನ್ನು ಬಿಟ್ಟು ಭಿಕ್ಷೆ ಬೇಡಿಸುತ್ತಿದ್ದಾರೆ.

ಇದನ್ನೇ ವೃತ್ತಿಯಾಗಿಸಿಕೊಂಡಿರುವ ಅನೇಕರು ತಮ್ಮ ಮಕ್ಕಳ ಮೂಲಕ ಭಿಕ್ಷೆ ಬೇಡಿಸಿ ಬದುಕುತ್ತಿರುವುದು ವಿಷಾದಕರ.

ತಾವು ದುಡಿದು ಮಕ್ಕಳನ್ನು ಬೆಳೆಸಬೇಕಾದ ತಂದೆ-ತಾಯಿಯೇ ದೂರ ದಲ್ಲಿ ನಿಂತು ಮಕ್ಕಳನ್ನು ಭಿಕ್ಷೆ ಬೇಡಲು ಬಿಟ್ಟು ಅಲ್ಲಿಂದ ಬಂದ ಹಣದಲ್ಲಿ ಜೀವನ ಸಾಗಿಸುತ್ತಿರುವುದು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಮಾರಕವಾಗಿರುವ ಜತೆಗೆ ಆ ಮಕ್ಕಳ ಭವಿಷ್ಯವನ್ನೂ ಹಾಳು ಮಾಡಿದಂತಾಗಿದೆ.

ಕೇಂದ್ರ ಸರ್ಕಾರ ಬಡತನ ನಿರ್ಮೂಲನೆಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ರಾಜ್ಯ ಸರ್ಕಾರವೂ ವಿವಿಧ ಯೋಜನೆಗಳ ಮೂಲಕ ಸೌಲಭ್ಯಗಳನ್ನು ಕಲ್ಪಿಸಿದೆ. ವಸತಿ ಯೋಜನೆಗಳ ಮೂಲಕ ನಿರ್ಗತಿಕರಿಗೆ ಮನೆಗಳನ್ನೂ ನೀಡಲಾಗುತ್ತಿದೆ. ಇಷ್ಟಿದ್ದರೂ ತಾವು ದುಡಿದು ಮಕ್ಕಳನ್ನು ಸಾಕಬೇಕಿದ್ದ ತಂದೆ-ತಾಯಿಯರೇ ಚಿಕ್ಕ ವಯಸ್ಸಿನ ಮಕ್ಕಳನ್ನು ಬಿಟ್ಟು ಭಿಕ್ಷೆ ಬೇಡಿಸುವುದು ಸರಿಯೇ? ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಇಂತಹ ಮಕ್ಕಳನ್ನು ರಕಿಸಿ ಶಿಕ್ಷಣ, ವಸತಿ ಕಲ್ಪಿಸುವ ಜತೆಗೆ ಅವರ ಕುಟುಂಬಗಳನ್ನು ಸಂಪರ್ಕಿಸಿ ಅವರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಪರಿಹರಿಸುವ ಜತೆಗೆ ಎಲ್ಲರಂತೆ ಅವರೂ ದುಡಿಮೆ ಮಾಡಲು ಅವಕಾಶ ಮಾಡಿಕೊಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

39 mins ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

3 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

3 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

3 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

5 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

6 hours ago