Andolana originals

ಕಳಪೆ ಕಾಮಗಾರಿ ಸ್ಥಗಿತಗೊಳಿಸಿದ ನಿವಾಸಿಗಳು

ಮಂಜು ಕೋಟೆ

ಮಚ್ಚೂರು ಬಳಿ ಕಿತ್ತುಬರುತ್ತಿದ್ದ ಡಾಂಬರನ್ನು ತೋರಿಸಿ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಆಕ್ರೋಶ 

ಹೆಚ್.ಡಿ.ಕೋಟೆ: ತಾಲ್ಲೂಕಿನ ಮೈಸೂರು ಮತ್ತು ಮಾನಂದವಾಡಿ ಹೆದ್ದಾರಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಿ ನಿವಾಸಿಗಳೇ ಡಾಂಬರನ್ನು ಕಿತ್ತು ತೋರಿಸಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಾಮಗಾರಿಯನ್ನು ಸ್ಥಗಿತಗೊಳಿಸಿದ ಘಟನೆ ನಡೆದಿದೆ.

ಹೊರರಾಜ್ಯದ ಹೆದ್ದಾರಿ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅವರು ತಾಲ್ಲೂಕಿನ ಗಡಿಭಾಗದ ಬಾವಲಿಯಿಂದ ಕಾಕನ ಕೋಟೆವರೆಗಿನ ೧೧ ಕಿ.ಮೀ. ರಸ್ತೆ ಅಭಿವೃದ್ಧಿಗಾಗಿ ೨೦ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು. ಗುತ್ತಿಗೆದಾರ ಹಾಗೂ ಅಧಿಕಾರಿಗಳು ಕಾಮಗಾರಿ ಯನ್ನು ಭರದಿಂದ ನಡೆಸದೆ ವಿಳಂಬವಾಗಿ ಕೈಗೆತ್ತಿಕೊಂಡು ಕಳೆದ ವಾರದಿಂದ ಬಾವಲಿ ಕಡೆಯಿಂದ ಕೋಟೆ ಕಡೆಗೆ ರಸ್ತೆಯ ದಾಂಬರೀಕರಣ ನಡೆಸುತ್ತಿದ್ದಾರೆ.

ಗುತ್ತಿಗೆದಾರರು ೩ ದಿನಗಳ ಹಿಂದೆ ಮಚ್ಚೂರು ಬಳಿ ರಸ್ತೆಗೆ ಡಾಂಬರೀಕರಣ ಮಾಡಿದ್ದು, ಇಲ್ಲಿನ ನಿವಾಸಿಗಳು ಕಾಮಗಾರಿ ಕಳಪೆಯಿಂದ ಕೂಡಿರುವುದನ್ನು ಗಮನಿಸಿ, ಡಾಂಬರು ಕಿತ್ತುಬರುತ್ತಿದ್ದನ್ನು ಕಂಡು ಆಕ್ರೋಶಗೊಂಡು, ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೋಟ್ಯಂತರ ರೂ. ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ಡಾಂಬರೀಕರಣ ತೀರಾ ಕಳಪೆಯಾಗಿದೆ. ಅಧಿಕಾರಿಗಳು ಇಲ್ಲದೆ ಗುತ್ತಿಗೆದಾರರು ಬೇಕಾಬಿಟ್ಟಿ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಕಾಮಗಾರಿಯನ್ನು ನಿಲ್ಲಿಸಿ ಅಲ್ಲಿದ್ದ ಕೂಲಿ ಕಾರ್ಮಿಕರನ್ನು ತರಾಟೆಗೆ ತೆಗೆದುಕೊಂಡರು.

ಸ್ಥಳಕ್ಕೆ ಅಧಿಕಾರಿ ಬರಬೇಕು ಎಂದು ಪಟ್ಟು ಹಿಡಿದಾಗ ಆಗಮಿಸಿದ ಅಧಿಕಾರಿಗಳಾದ ರಮೇಶ್ ಮತ್ತು ಸುಬ್ರಹ್ಮಣ್ಯ ಅವರು ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿ, ಡಾಂಬರೀಕರಣವನ್ನು ಸಮರ್ಪಕವಾಗಿ ಮಾಡಬೇಕಾಗಿತ್ತು. ಕೆಲವೊಂದು ಲೋಪವಾಗಿರುವುದರಿಂದ ಅದನ್ನು ಸರಿಪಡಿಸಿ ಕಾಮಗಾರಿ ನಡೆಸಲಾಗುವುದು ಎಂದು ತಿಳಿಸಿದರು. ಆದರೆ, ಇದಕ್ಕೆ ಒಪ್ಪದ ಇಲ್ಲಿನ ನಿವಾಸಿಗಳು ಇಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಬೇಕು. ಕ್ರಿಯಾ ಯೋಜನೆಯಂತೆ ಕಾಮಗಾರಿ ನಡೆಯಬೇಕು. ಇಲ್ಲದಿದ್ದರೆ ಕಾಮಗಾರಿ ನಡೆಯಲು ಬಿಡುವುದಿಲ್ಲ ಎಂದು ತಿಳಿಸಿ ವಾಪಸ್ ಕಳಿಸಿದ್ದಾರೆ.

” ಹೆದ್ದಾರಿಯಲ್ಲೇ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸುತ್ತಿದ್ದು, ಇದರಿಂದ ಈ ಭಾಗದ ನಿವಾಸಿಗಳು ಬೇಸತ್ತು ಕಳಪೆ ಕಾಮಗಾರಿಯನ್ನು ಬಯಲು ಮಾಡಿ ಸಂಬಂಧಪಟ್ಟವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದೇವೆ. ಇಲ್ಲಿ ಹೇಳುವವರು, ಕೇಳುವವರು ಯಾರೂ ಇಲ್ಲವಾಗಿ ದ್ದಾರೆ. ಜನಪ್ರತಿನಿಽಗಳು, ಅಧಿಕಾರಿಗಳು, ಗುತ್ತಿಗೆದಾರರು ಏನು ಬೇಕಾದರೂ ಮಾಡಬಹುದು ಎಂದು ತಿಳಿದುಕೊಂಡಿದ್ದಾರೆ. ಇದಕ್ಕೆ ನಾವು ಅವಕಾಶ ಮಾಡಿಕೊಡುವುದಿಲ್ಲ.”

-ರವಿ, ಸುಬ್ರಹ್ಮಣ್ಯ, ಮಣಿ, ಗುಂಡತ್ತೂರು ಗ್ರಾಮದ ನಿವಾಸಿಗಳು

” ಮೈಸೂರು-ಮಾನಂದವಾಡಿ ಹೆದ್ದಾರಿಯ ಕಾಮಗಾರಿ ಕೆಲಸದಲ್ಲಿ ಗುತ್ತಿಗೆದಾರ ನಿರ್ಲಕ್ಷ್ಯ ವಹಿಸಿರುವುದರಿಂದ ಅವರಿಗೆ ನೋಟಿಸ್ ನೀಡಲಾಗಿದೆ. ಅಧಿಕಾರಿಗಳ ಸಮ್ಮುಖದಲ್ಲಿ ಕಾಮಗಾರಿ ನಡೆಸುವಂತೆ ಸೂಚಿಸಿದ್ದೇನೆ. ಯಾವುದೇ ಕಳಪೆ ಕೆಲಸ ನಡೆಯಲು ನಾನು ಬಿಡುವುದಿಲ್ಲ

-ರಮೇಶ್, ಎಇಇ, ಪಿಡಬ್ಲ್ಯುಡಿ ಇಲಾಖೆ 

ಆಂದೋಲನ ಡೆಸ್ಕ್

Recent Posts

ಮತ್ತೆ ಇರಾನ್‌ನ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದ ಅಮೇರಿಕಾ

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…

1 min ago

ಸ್ಯಾಂಡಲ್‌ವುಡ್‌ ಖ್ಯಾತ ನಿರ್ಮಾಪಕ ನರಹಳ್ಳಿ ಜ್ಞಾನೇಶ್‌ ನಿಧನ

ಪಾಂಡವಪುರ: ಸ್ಯಾಂಡಲ್‌ವುಡ್‌ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…

22 mins ago

ಜೆಡಿಯುಗೆ ಸೇರ್ಪಡೆಯಾದ ಬಿಹಾರ ಸಿಎಂ ನಿತೀಶ್‌ ಪುತ್ರ ನಿಶಾಂತ್ ಕುಮಾರ್‌

ಪಾಟ್ನಾ: ಬಿಹಾರ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್‌ ಕುಮಾರ್‌ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…

29 mins ago

ಇರಾನ್-‌ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಇರಾನ್‌ ಮೇಲೆ ಇಸ್ರೇಲ್‌, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…

41 mins ago

ನಿಮ್ಮ ಕೆಲಸ ಎಷ್ಟಿದೆ ಅದನ್ನು ನೋಡಿಕೊಳ್ಳಿ: ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ

ನವದೆಹಲಿ: ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌…

56 mins ago

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಲೋಪ: ಬಂಗಾಳ ಸರ್ಕಾರದಿಂದ ವರದಿ ಕೇಳಿದ ಗೃಹ ಕಾರ್ಯದರ್ಶಿ

ನವದೆಹಲಿ: ಡಾರ್ಜಿಲಿಂಗ್‌ನಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಸಂತಾಲ್‌ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳು ಸೇರಿದಂತೆ ರಾಷ್ಟ್ರಪತಿ ದ್ರೌಪದಿ…

1 hour ago