Andolana originals

ಆಂದೋಲನ ವರದಿಗೆ ಸ್ಪಂದನೆ: ಯುಜಿಡಿ ಬ್ಲಾಕೇಜ್ ತೆರವು

ಪ್ರತಿದಿನ ಸ್ವಚ್ಛತೆಗೆ ಜಿಟ್ಟಿಂಗ್ ವಾಹನ, ಸಿಬ್ಬಂದಿ ನಿಯೋಜನೆ

ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೫೪ರ ವ್ಯಾಪ್ತಿಗೆ ಬರುವ ವಿದ್ಯಾರಣ್ಯಪುರಂ (ಕನಕಗಿರಿ) ಬೆಸ್ತರ ಬ್ಲಾಕ್‌ನ ೬ನೇ ಕ್ರಾಸ್‌ನಲ್ಲಿ ನಗರಪಾಲಿಕೆ ಯುಜಿಡಿ ವಿಭಾಗದ ಜೂನಿಯರ್ ಇಂಜಿನಿಯರ್ ಬಿ.ಆರ್.ಸಂತೋಷ್‌ಕುಮಾರ್ ನೇತೃತ್ವದಲ್ಲಿ ಸ್ವಚ್ಛತಾ ಸಿಬ್ಬಂದಿ ಬುಧವಾರ ಯುಜಿಡಿ ಬ್ಲಾಕೇಜ್ ತೆರವುಗೊಳಿಸುವ ಕೆಲಸ ನಿರ್ವಹಿಸಿದರು.

‘ಆಂದೋಲನ’ದಿನಪತ್ರಿಕೆಯ ಮೇ ೨೮ರ ಬುಧವಾರದ ಸಂಚಿಕೆಯಲ್ಲಿ ‘ನಡು ಬೀದಿಯಲ್ಲಿ ಕೆರೆಯಂತೆ ನಿಂತಿರುವ ಯುಜಿಡಿ ನೀರು’ ತಲೆ ಬರಹದಡಿ ಪ್ರಕಟಗೊಂಡ ಸಾರ್ವಜನಿಕ ಸಮಸ್ಯೆ ಕುರಿತ ವರದಿಗೆ ಸ್ಪಂದಿಸಿರುವ ಮಹಾ ನಗರ ಪಾಲಿಕೆ ಯುಜಿಡಿ ವಿಭಾಗದ ಅಧಿಕಾರಿಗಳು ಮತ್ತು ಸ್ವಚ್ಛತಾ ಸಿಬ್ಬಂದಿ ಬುಧವಾರ ಬೆಳಿಗ್ಗೆ ಎರಡು ಜೆಟ್ಟಿಂಗ್ ವಾಹನಗಳ ಜೊತೆ ಸ್ಥಳಕ್ಕೆ ಆಗಮಿಸಿ ಯುಜಿಡಿಯ ಬ್ಲಾಕೇಜ್‌ಅನ್ನು ಸಕ್ಕಿಂಗ್ ಪ್ರಕ್ರಿಯೆ ಮೂಲಕ ತೆರವುಗೊಳಿಸಿದರು. ಸದ್ಯಕ್ಕೆ ಕಲುಷಿತ ನೀರು ಮ್ಯಾನ್ ಹೋಲ್‌ಗಳಿಂದ ಹೊರಗೆ ಹರಿಯುವುದು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಯುಜಿಡಿ ತ್ಯಾಜ್ಯ ನೀರು ಬೆಸ್ತರ ಕೇರಿ ೬ನೇ ಕ್ರಾಸ್‌ನಿಂದ ಮುಂದಕ್ಕೆ ಹರಿದು ಹೋಗಲು ಪೈಪ್‌ಲೈನ್ ವ್ಯವಸ್ಥೆ ಇಲ್ಲದ ಕಾರಣದಿಂದ ಒತ್ತಡ ಹೆಚ್ಚಾಗಿ ಕೊಳಚೆ ನೀರು ಹೊರಗೆ ಹರಿಯುತ್ತಿದೆ. ಬ್ಲಾಕೇಜ್ ತೆರವುಗೊಳಿಸಿದರೆ ಒಂದು ದಿನದ ಮಟ್ಟಿಗೆ ಮಾತ್ರ ಮಲಿನ ನೀರು ಹೊರಗೆ ಬರುವುದು ಸ್ಥಗಿತ ಗೊಳ್ಳುತ್ತದೆ. ಒಂದು ದಿನದ ನಂತರ ಮತ್ತೆ ಯಥಾಸ್ಥಿತಿ ಮುಂದು ವರಿಯುತ್ತದೆ. ಕೊಳಚೆ ನೀರಿನಿಂದ ಮತ್ತೆ ನಿವಾಸಿಗಳಿಗೆ ತೊಂದರೆ ತಪ್ಪಿದ್ದಲ್ಲ. ಹಾಗಾಗಿ ಇಲ್ಲಿನ ನಿವಾಸಿಗಳ ಆರೋಗ್ಯ ಮತ್ತು ನೈರ್ಮಲ್ಯದ ದೃಷ್ಟಿಯಿಂದ ಯುಜಿಡಿ ಬ್ಲಾಕೇಜ್‌ಅನ್ನು ಪ್ರತಿದಿನ ಜೆಟ್ಟಿಂಗ್ ವಾಹನಗಳ ಮೂಲಕ ಸ್ವಚ್ಛತಾ ಸಿಬ್ಬಂದಿ ತೆರವುಗೊಳಿಸುವ ಕೆಲಸ ನಿರ್ವಹಿಸಲಿದ್ದಾರೆ.

ಈ ಕೆಲಸಕ್ಕಾಗಿ ಒಂದು ಜೆಟ್ಟಿಂಗ್ ವಾಹನ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆ ಯುಜಿಡಿ ವಿಭಾಗದ ಜೂನಿಯರ್ ಇಂಜಿನಿಯರ್ ಬಿ.ಆರ್.ಸಂತೋಷ್‌ಕುಮಾರ್ ತಿಳಿಸಿದ್ದಾರೆ.

ಪಾಲಿಕೆ ಸ್ವಚ್ಛತಾ ಸಿಬ್ಬಂದಿ ಬುಧವಾರ ಜೆಟ್ಟಿಂಗ್ ವಾಹನಗಳ ಮೂಲಕ ಯುಜಿಡಿ ಬ್ಲಾಕೇಜ್ ತೆರವುಗೊಳಿಸಿರುವುದರಿಂದ ತಾತ್ಕಾಲಿಕವಾಗಿ ಕೊಳಚೆ ನೀರು ಮ್ಯಾನ್ ಹೋಲ್‌ಗಳಿಂದ ಹೊರಗೆ ಹರಿಯುವುದು ಸ್ಥಗಿತಗೊಂಡಿದೆ. ಎರಡು ತಿಂಗಳುಗಳಿಂದಲೂ ಹೊರಗೆ ಹರಿಯುತ್ತಿದ್ದ ಕೊಳಚೆ ನೀರು ಮಳೆಗಾಲವಾದ್ದರಿಂದ ಭೂಮಿಯಲ್ಲಿ ಇಂಗಿಲ್ಲ. ಈ ಕೊಳಚೆ ನೀರು ಸಂಪೂರ್ಣವಾಗಿ ಇಂಗಲು ಕನಿಷ್ಠ ಒಂದು ವಾರ ಸಮಯ ತೆಗೆದುಕೊಳ್ಳುತ್ತದೆ. ಒಂದು ವೇಳೆ ಪಾಲಿಕೆ ಸ್ವಚ್ಛತಾ ಸಿಬ್ಬಂದಿ ಯುಜಿಡಿ ಬ್ಲಾಕೇಜ್ ತೆರವುಗೊಳಿಸುವುದನ್ನು ನಿಲ್ಲಿಸಿದಲ್ಲಿ ಮತ್ತೆ ಕೊಳೆ ನೀರು ಮ್ಯಾನ್‌ಹೋಲ್‌ಗಳ ಮೂಲಕ ಹೊರಗೆ ಹರಿದು ಇಡೀ ಪ್ರದೇಶ ಮಲಿನಗೊಳ್ಳುತ್ತದೆ. ಹಾಗಾಗಿ ಪಾಲಿಕೆ ಸ್ವಚ್ಛತಾ ಸಿಬ್ಬಂದಿ ಪ್ರತಿದಿನ ಯುಜಿಡಿ ಬ್ಲಾಕೇಜ್ ತೆರವುಗೊಳಿಸಿ, ನೈರ್ಮಲ್ಯ ಕಾಪಾಡಬೇಕೆಂದು ಇಲ್ಲಿನ ನಿವಾಸಿಗಳು ಮನವಿ ಮಾಡಿದ್ದಾರೆ.

” ನಿವಾಸಿಗಳ ಆರೋಗ್ಯ ಮತ್ತು ನೈರ್ಮಲ್ಯದ ದೃಷ್ಟಿಯಿಂದ ಈಗ ಪ್ರತಿ ದಿನ ಯುಜಿಡಿ ಬ್ಲಾಕೇಜ್ ತೆರವುಗೊಳಿಸಲಾಗುವುದು, ಮಳೆಗಾಲ ಮುಗಿದ ನಂತರ ಹೊಸ ಪೈಪ್ ಲೈನ್ ಅಳವಡಿಸಿ ಯುಜಿಡಿ ನೀರು ಮುಂದೆ ಹೋಗಲು ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ಮೇಲಧಿಕಾರಿಗಳಿಗೆ ವರದಿ ನೀಡಲಾಗಿದೆ.”

-ಬಿ.ಆರ್.ಸಂತೋಷ್‌ಕುಮಾರ್, ಜೂನಿಯರ್ ಇಂಜಿನಿಯರ್, ಪಾಲಿಕೆ ಯುಜಿಡಿ ವಿಭಾಗ

ಆಂದೋಲನ ಡೆಸ್ಕ್

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

36 mins ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

2 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

3 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

5 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

5 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago