Andolana originals

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ

ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ

ಮಡಿಕೇರಿ: ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ಪಾರ್ಟ್ ಎ, ಪಾರ್ಟ್ ಬಿ ತೆರಿಗೆ ಹಾಗೂ ದಂಡ ಸೇರಿದಂತೆ ಒಟ್ಟು ೧.೫೯ ಕೋಟಿ ರೂ. ರಾಜಸ್ವ ಸಂಗ್ರಹಿಸುವ ಮೂಲಕ ಸಾಧನೆ ಮಾಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಪ್ರವಾಸಿ ಸೀಜನ್ ಆರಂಭವಾಗಿದೆ. ನವೆಂಬರ್ ತಿಂಗಳಿನಿಂದಲೇ ಹೆಚ್ಚಿನ ಪ್ರವಾಸಿ ವಾಹನಗಳು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆರ್‌ಟಿಒ ಅಧಿಕಾರಿಗಳು ಹೊರಗಿನಿಂದ ಆಗಮಿಸುವ ಪ್ರವಾಸಿ ವಾಹನಗಳ ನಿರಂತರ ತಪಾಸಣೆಯಲ್ಲಿ ತೊಡಗಿದ್ದಾರೆ. ಆ ಮೂಲಕ ನವೆಂಬರ್ ತಿಂಗಳಲ್ಲೇ ಅತಿ ಹೆಚ್ಚು ರಾಜಸ್ವ ಸಂಗ್ರಹಿಸಿದ್ದಾರೆ.

ಕೇರಳ ರಾಜ್ಯ ಸೇರಿದಂತೆ ರಾಜ್ಯದ ನಾನಾ ಭಾಗಗಳಿಗೆ ಪ್ರವಾಸಿಗರನ್ನು ಹೊತ್ತ ಸಾವಿರಾರು ವಾಹನಗಳು ದಿನನಿತ್ಯ ಬರುತ್ತವೆ. ನೂರಾರು ಬಸ್‌ಗಳು ಕೊಡಗು ಜಿಲ್ಲೆಯ ಗಡಿಯ ಮೂಲಕವೇ ರಾಜ್ಯದ ಗಡಿಯನ್ನು ಪ್ರವೇಶಿ ಸುತ್ತವೆ. ಈ ಹಿನ್ನೆಲೆಯಲ್ಲಿ ವಿರಾಜಪೇಟೆಯ ಮಾಕುಟ್ಟ ಸೇರಿದಂತೆ ಕೇರಳದ ಗಡಿಯಲ್ಲಿ ನಿರಂತರ ತಪಾಸಣೆ ನಡೆಸಲಾಗುತ್ತಿದೆ.

ಕೇರಳದ ಬಸ್ ಮತ್ತು ಇತರೆ ವಾಹನಗಳ ದಾಖಲೆ ಪರಿಶೀಲನೆ ನಡೆಸಲಾಗುತ್ತಿದ್ದು, ತೆರಿಗೆ ಕಟ್ಟಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಸರಿಯಾದ ದಾಖಲೆಗಳನ್ನು ಹೊಂದಿಲ್ಲದ ವಾಹನಗಳಿಗೆ ದಂಡ ವಿಧಿಸುತ್ತಿದ್ದಾರೆ. ರಾಜ್ಯಕ್ಕೆ ಬರುವ ಮೊದಲು ಕೇರಳದಲ್ಲಿ ವಿಶೇಷ ಪರವಾನಗಿ ಪಡೆದು ಬರುವ ವಾಹನಗಳು(ಬಸ್ಸುಗಳು) ಇಲ್ಲಿ ತೆರಿಗೆ ಪಾವತಿ ಮಾಡಬೇಕಾಗುತ್ತದೆ. ಹೀಗೆ ಪ್ರತಿ ವಾಹನದಿಂದಲೂ ಪಾರ್ಟ್ ಎ ಮತ್ತು ಪಾರ್ಟ್ ಬಿ ತೆರಿಗೆ ಸಂಗ್ರಹ ಮಾಡಲಾಗುತ್ತಿದ್ದು, ಪಾರ್ಟ್ ಬಿ ತೆರಿಗೆಯಿಂದಲೇ ಬರೋಬ್ಬರಿ ೧.೫೭ ಕೋಟಿ ರೂ. ಸಂಗ್ರಹವಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಟಿ.ಸತೀಶ್ ಮಾಹಿತಿ  ನೀಡಿದರು. ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿ ರಾಜ್ಯದಿಂದ ಹೆಚ್ಚು ವಾಹನಗಳು ಕೇರಳದ ಶಬರಿಮಲೆಗೆ ತೆರಳುತ್ತವೆ. ಇಲ್ಲಿಂದ ತೆರಳುವ ಮತ್ತು ಅಲ್ಲಿಂದ ಬರುವ ವಾಹನಗಳು ಆಯಾ ರಾಜ್ಯಗಳಿಂದ ವಿಶೇಷ ಪರ್ಮಿಟ್ ಪಡೆದು ಗಡಿ ಪ್ರವೇಶ ಮಾಡಬೇಕಾಗುತ್ತದೆ.

ಆದರೆ ಕೆಲವರು ಈ ತೆರಿಗೆ ಉಳಿಸುವ ಸಲುವಾಗಿ ಕೇರಳದ ವಾಹನಗಳನ್ನೇ ರಾಜ್ಯಕ್ಕೆ ಕರೆಸಿ ಶಬರಿಮಲೆಗೆ ತೆರಳುತ್ತಾರೆ. ಅಂತಹ ತೆರಿಗೆ ವಂಚನೆ ಪ್ರಕರಣಗಳು ಕಂಡುಬಂದರೆ ಅಂತಹ ವಾಹನ ಗಳಿಗೆ ಭಾರೀ ದಂಡ ವಿಧಿಸಲಾಗುತ್ತದೆ ಎಂದು ಆರ್‌ಟಿಒ ಎಸ್.ಟಿ ಸತೀಶ್ ತಿಳಿಸಿದ್ದಾರೆ.

ಎಷ್ಟೆಷ್ಟು ತೆರಿಗೆ ಸಂಗ್ರಹ?:  ನವೆಂಬರ್ ತಿಂಗಳಿನಲ್ಲಿ ಜಿಲ್ಲೆಯಲ್ಲಿ ತಪಾಸಣೆ ನಡೆಸಲಾದ ವಾಹನಗಳ ಪೈಕಿ ೧,೧೪೦ ವಾಹಗಳಿಂದ ಪಾರ್ಟ್ ಬಿ ತೆರಿಗೆ ೧,೫೭,೨೧,೦೨೪ ರೂ. ಪಾರ್ಟ್ ಎ ತೆರಿಗೆ ೨೯,೩೫೭ ರೂ. ಮತ್ತು ೨,೨೭,೮೦೦ ರೂ. ದಂಡ ಸೇರಿದಂತೆ ಒಟ್ಟು ೧ಕೋಟಿ ೫೯ ಲಕ್ಷ ೭೮ ಸಾವಿರದ ೧೮೧ ರೂ. ಸಂಗ್ರಹ ಮಾಡಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿಗೆ ವಾರ್ಷಿಕ ೫,೭೦೦ ಕೇಸ್ ಗುರಿಯನ್ನು ಹೊಂದಿದ್ದು, ನವೆಂಬರ್ ತಿಂಗಳೊಂದರಲ್ಲಿಯೇ ೧,೧೪೦ ವಾಹನಗಳಿಂದ ತೆರಿಗೆ, ದಂಡ ಸಂಗ್ರಹ ಮಾಡಲಾಗಿದೆ.

” ಬೆಂಗಳೂರಿನ ಅಪರ ಸಾರಿಗೆ ಆಯುಕ್ತರಾದ (ಪ್ರವರ್ತನ) ಓಂಕಾರೇಶ್ವರಿ ಮತ್ತು ಮೈಸೂರು ವಿಭಾಗ ಜಂಟಿ ಸಾರಿಗೆ ಆಯುಕ್ತ ವಸಂತ್ ಈಶ್ವರ್ ಚೌವ್ಹಾಣ್ ಮಾರ್ಗದರ್ಶನದ ಮೇರೆಗೆ ನವೆಂಬರ್ ಮಾಹೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ನಿರಂತರ ತಪಾಸಣೆ ಕೈಗೊಳ್ಳಲಾಗಿತ್ತು. ಹೊರ ರಾಜ್ಯಗಳ ಪ್ರವಾಸಿ ವಾಹನಗಳೂ ಸೇರಿದಂತೆ ಎಲ್ಲಾ ರೀತಿಯ ವಾಹನಗಳ ತಪಾಸಣೆ ನಡೆಸಿ ಒಟ್ಟು ೧,೫೯,೭೮,೧೮೧ ರೂ.ರಾಜಸ್ವವನ್ನು ಸಂಗ್ರಹಿಸಲಾಗಿದೆ. ಇದು ಕೊಡಗಿನಲ್ಲಿ ಗುರಿ ಮೀರಿದ ಸಾಧನೆಯಾಗಿದೆ.”

-ಎಸ್.ಟಿ.ಸತೀಶ್,  ಪ್ರಾದೇಶಿಕ ಸಾರಿಗೆ ಅಧಿಕಾರಿ

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

15 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

18 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

20 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

20 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

20 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

20 hours ago