ಓದುಗರ ಪತ್ರ
ಕಳೆದ ವರ್ಷದಿಂದ ರಾಜ್ಯ ಸರ್ಕಾರವು ಮಧ್ಯಾಹ್ನ ಉಪಾಹಾರ ಯೋಜನೆಯಡಿ ಅಜೀಂ ಪ್ರೇಂ ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ೧ ರಿಂದ ೧೦ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದ ಆರು ದಿನಗಳೂ ಮೊಟ್ಟೆ ನೀಡುತ್ತಾ ಬಂದಿರುವುದು ಶ್ಲಾಘನೀಯ.
ಈಗ ಮಧ್ಯಾಹ್ನದ ಬಿಸಿಯೂಟದ ಜತೆಗೆ ಮೊಟ್ಟೆ ನೀಡುತ್ತಿರುವುದರಿಂದ ಮಕ್ಕಳಿಗೆ ಪೌಷ್ಟಿಕಾಂಶ ದೊರೆಯುತ್ತಿದೆ. ಪ್ರಸ್ತುತ ಮೊಟ್ಟೆ ದರ ಪರಿಷ್ಕರಣೆ ಅಗತ್ಯವಾಗಿದೆ. ಏಕೆಂದರೆ ಒಂದು ಮೊಟ್ಟೆಗೆ ಆರು ರೂಪಾಯಿಯಂತೆ ಶಿಕ್ಷಕರಿಗೆ ಸರ್ಕಾರ ಹಣ ನೀಡುತ್ತಿದೆ. ಇದರಲ್ಲಿ ಮೊಟ್ಟೆ ಖರೀದಿಸಲು ಪ್ರತಿ ಮೊಟ್ಟೆಗೆ ಐದು ರೂಪಾಯಿ, ಸಾಗಾಣಿಕೆ ವೆಚ್ಚ ೨೦ ಪೈಸೆ, ಮೊಟ್ಟೆ ಸುಲಿಯುವವರಿಗೆ ೩೦ ಪೈಸೆ, ಮೊಟ್ಟೆ ಬೇಯಿಸಲು ೫೦ ಪೈಸೆ ಗ್ಯಾಸ್ ವೆಚ್ಚ ಈ ರೀತಿ ಹಂಚಿಕೆ ಮಾಡಲಾಗಿದ್ದು, ಅಂತಿಮವಾಗಿ ಪ್ರತಿ ಮೊಟ್ಟೆಗೆ ಶಿಕ್ಷಕರಿಗೆ ೫ ರೂ . ೨೦ ಪೈಸೆ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿ ಮೊಟ್ಟೆ ದರ ಮಾರುಕಟ್ಟೆಯಲ್ಲಿ ೭ ರೂ. ಇದ್ದು ಹೆಚ್ಚಿಗೆ ಹಣವನ್ನು ಶಿಕ್ಷಕರು ಪ್ರತಿನಿತ್ಯ ಭರಿಸುತ್ತಿದ್ದಾರೆ. ಹೀಗಾಗಿ ಸರ್ಕಾರ ಮೊಟ್ಟೆ ದರವನ್ನು ಪರಿಷ್ಕರಣೆ ಮಾಡಿ ಶಿಕ್ಷಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲಿ.
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…