ಓದುಗರ ಪತ್ರ
ಕಳೆದ ವರ್ಷದಿಂದ ರಾಜ್ಯ ಸರ್ಕಾರವು ಮಧ್ಯಾಹ್ನ ಉಪಾಹಾರ ಯೋಜನೆಯಡಿ ಅಜೀಂ ಪ್ರೇಂ ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ೧ ರಿಂದ ೧೦ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದ ಆರು ದಿನಗಳೂ ಮೊಟ್ಟೆ ನೀಡುತ್ತಾ ಬಂದಿರುವುದು ಶ್ಲಾಘನೀಯ.
ಈಗ ಮಧ್ಯಾಹ್ನದ ಬಿಸಿಯೂಟದ ಜತೆಗೆ ಮೊಟ್ಟೆ ನೀಡುತ್ತಿರುವುದರಿಂದ ಮಕ್ಕಳಿಗೆ ಪೌಷ್ಟಿಕಾಂಶ ದೊರೆಯುತ್ತಿದೆ. ಪ್ರಸ್ತುತ ಮೊಟ್ಟೆ ದರ ಪರಿಷ್ಕರಣೆ ಅಗತ್ಯವಾಗಿದೆ. ಏಕೆಂದರೆ ಒಂದು ಮೊಟ್ಟೆಗೆ ಆರು ರೂಪಾಯಿಯಂತೆ ಶಿಕ್ಷಕರಿಗೆ ಸರ್ಕಾರ ಹಣ ನೀಡುತ್ತಿದೆ. ಇದರಲ್ಲಿ ಮೊಟ್ಟೆ ಖರೀದಿಸಲು ಪ್ರತಿ ಮೊಟ್ಟೆಗೆ ಐದು ರೂಪಾಯಿ, ಸಾಗಾಣಿಕೆ ವೆಚ್ಚ ೨೦ ಪೈಸೆ, ಮೊಟ್ಟೆ ಸುಲಿಯುವವರಿಗೆ ೩೦ ಪೈಸೆ, ಮೊಟ್ಟೆ ಬೇಯಿಸಲು ೫೦ ಪೈಸೆ ಗ್ಯಾಸ್ ವೆಚ್ಚ ಈ ರೀತಿ ಹಂಚಿಕೆ ಮಾಡಲಾಗಿದ್ದು, ಅಂತಿಮವಾಗಿ ಪ್ರತಿ ಮೊಟ್ಟೆಗೆ ಶಿಕ್ಷಕರಿಗೆ ೫ ರೂ . ೨೦ ಪೈಸೆ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿ ಮೊಟ್ಟೆ ದರ ಮಾರುಕಟ್ಟೆಯಲ್ಲಿ ೭ ರೂ. ಇದ್ದು ಹೆಚ್ಚಿಗೆ ಹಣವನ್ನು ಶಿಕ್ಷಕರು ಪ್ರತಿನಿತ್ಯ ಭರಿಸುತ್ತಿದ್ದಾರೆ. ಹೀಗಾಗಿ ಸರ್ಕಾರ ಮೊಟ್ಟೆ ದರವನ್ನು ಪರಿಷ್ಕರಣೆ ಮಾಡಿ ಶಿಕ್ಷಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲಿ.
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…