Andolana originals

ಓದುಗರ ಪತ್ರ: ಮಕ್ಕಳಿಗೆ ನೀಡುವ ಮೊಟ್ಟೆ ದರ ಪರಿಷ್ಕರಿಸಿ

ಕಳೆದ ವರ್ಷದಿಂದ ರಾಜ್ಯ ಸರ್ಕಾರವು ಮಧ್ಯಾಹ್ನ ಉಪಾಹಾರ ಯೋಜನೆಯಡಿ ಅಜೀಂ ಪ್ರೇಂ ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ೧ ರಿಂದ ೧೦ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದ ಆರು ದಿನಗಳೂ ಮೊಟ್ಟೆ ನೀಡುತ್ತಾ ಬಂದಿರುವುದು ಶ್ಲಾಘನೀಯ.

ಈಗ ಮಧ್ಯಾಹ್ನದ ಬಿಸಿಯೂಟದ ಜತೆಗೆ ಮೊಟ್ಟೆ ನೀಡುತ್ತಿರುವುದರಿಂದ ಮಕ್ಕಳಿಗೆ ಪೌಷ್ಟಿಕಾಂಶ ದೊರೆಯುತ್ತಿದೆ. ಪ್ರಸ್ತುತ ಮೊಟ್ಟೆ ದರ ಪರಿಷ್ಕರಣೆ ಅಗತ್ಯವಾಗಿದೆ. ಏಕೆಂದರೆ ಒಂದು ಮೊಟ್ಟೆಗೆ ಆರು ರೂಪಾಯಿಯಂತೆ ಶಿಕ್ಷಕರಿಗೆ ಸರ್ಕಾರ ಹಣ ನೀಡುತ್ತಿದೆ. ಇದರಲ್ಲಿ ಮೊಟ್ಟೆ ಖರೀದಿಸಲು ಪ್ರತಿ ಮೊಟ್ಟೆಗೆ ಐದು ರೂಪಾಯಿ, ಸಾಗಾಣಿಕೆ ವೆಚ್ಚ ೨೦ ಪೈಸೆ, ಮೊಟ್ಟೆ ಸುಲಿಯುವವರಿಗೆ ೩೦ ಪೈಸೆ, ಮೊಟ್ಟೆ ಬೇಯಿಸಲು ೫೦ ಪೈಸೆ ಗ್ಯಾಸ್ ವೆಚ್ಚ ಈ ರೀತಿ ಹಂಚಿಕೆ ಮಾಡಲಾಗಿದ್ದು, ಅಂತಿಮವಾಗಿ ಪ್ರತಿ ಮೊಟ್ಟೆಗೆ ಶಿಕ್ಷಕರಿಗೆ ೫ ರೂ . ೨೦ ಪೈಸೆ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿ ಮೊಟ್ಟೆ ದರ ಮಾರುಕಟ್ಟೆಯಲ್ಲಿ ೭ ರೂ. ಇದ್ದು ಹೆಚ್ಚಿಗೆ ಹಣವನ್ನು ಶಿಕ್ಷಕರು ಪ್ರತಿನಿತ್ಯ ಭರಿಸುತ್ತಿದ್ದಾರೆ. ಹೀಗಾಗಿ ಸರ್ಕಾರ ಮೊಟ್ಟೆ ದರವನ್ನು ಪರಿಷ್ಕರಣೆ ಮಾಡಿ ಶಿಕ್ಷಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲಿ.

ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

4 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

4 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

4 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

5 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

5 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

5 hours ago