ಓದುಗರ ಪತ್ರ
ಕಳೆದ ವರ್ಷದಿಂದ ರಾಜ್ಯ ಸರ್ಕಾರವು ಮಧ್ಯಾಹ್ನ ಉಪಾಹಾರ ಯೋಜನೆಯಡಿ ಅಜೀಂ ಪ್ರೇಂ ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ೧ ರಿಂದ ೧೦ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದ ಆರು ದಿನಗಳೂ ಮೊಟ್ಟೆ ನೀಡುತ್ತಾ ಬಂದಿರುವುದು ಶ್ಲಾಘನೀಯ.
ಈಗ ಮಧ್ಯಾಹ್ನದ ಬಿಸಿಯೂಟದ ಜತೆಗೆ ಮೊಟ್ಟೆ ನೀಡುತ್ತಿರುವುದರಿಂದ ಮಕ್ಕಳಿಗೆ ಪೌಷ್ಟಿಕಾಂಶ ದೊರೆಯುತ್ತಿದೆ. ಪ್ರಸ್ತುತ ಮೊಟ್ಟೆ ದರ ಪರಿಷ್ಕರಣೆ ಅಗತ್ಯವಾಗಿದೆ. ಏಕೆಂದರೆ ಒಂದು ಮೊಟ್ಟೆಗೆ ಆರು ರೂಪಾಯಿಯಂತೆ ಶಿಕ್ಷಕರಿಗೆ ಸರ್ಕಾರ ಹಣ ನೀಡುತ್ತಿದೆ. ಇದರಲ್ಲಿ ಮೊಟ್ಟೆ ಖರೀದಿಸಲು ಪ್ರತಿ ಮೊಟ್ಟೆಗೆ ಐದು ರೂಪಾಯಿ, ಸಾಗಾಣಿಕೆ ವೆಚ್ಚ ೨೦ ಪೈಸೆ, ಮೊಟ್ಟೆ ಸುಲಿಯುವವರಿಗೆ ೩೦ ಪೈಸೆ, ಮೊಟ್ಟೆ ಬೇಯಿಸಲು ೫೦ ಪೈಸೆ ಗ್ಯಾಸ್ ವೆಚ್ಚ ಈ ರೀತಿ ಹಂಚಿಕೆ ಮಾಡಲಾಗಿದ್ದು, ಅಂತಿಮವಾಗಿ ಪ್ರತಿ ಮೊಟ್ಟೆಗೆ ಶಿಕ್ಷಕರಿಗೆ ೫ ರೂ . ೨೦ ಪೈಸೆ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿ ಮೊಟ್ಟೆ ದರ ಮಾರುಕಟ್ಟೆಯಲ್ಲಿ ೭ ರೂ. ಇದ್ದು ಹೆಚ್ಚಿಗೆ ಹಣವನ್ನು ಶಿಕ್ಷಕರು ಪ್ರತಿನಿತ್ಯ ಭರಿಸುತ್ತಿದ್ದಾರೆ. ಹೀಗಾಗಿ ಸರ್ಕಾರ ಮೊಟ್ಟೆ ದರವನ್ನು ಪರಿಷ್ಕರಣೆ ಮಾಡಿ ಶಿಕ್ಷಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲಿ.
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…