Andolana originals

ಕೆರೆಗಳಿಗೆ ಪುನಶ್ಚೇತನ; ವನ್ಯಜೀವಿಗಳಿಗಿಲ್ಲ ನೀರಿನ ಕೊರತೆ

ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ

ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ ನಾಗರಹೊಳೆ ಅರಣ್ಯ ಪ್ರದೇಶದ ಕೆರೆಗಳು ಪುನಶ್ಚೇತನಗೊಂಡ ಪರಿಣಾಮ ವನ್ಯಜೀವಿಗಳಿಗೆ ನೀರಿನ ಕೊರತೆ ದೂರವಾದಂತಾಗಿದೆ.

ಕಾಡು ಪ್ರಾಣಿಗಳು ಬೇಸಿಗೆಯಲ್ಲಿ ನೀರಿನ ಕೊರತೆಯಿಂದ ಬಳಲಬಾರದೆಂಬ ಉದ್ದೇಶದಿಂದ ಈ ಬಾರಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಸಿಗೆಗೂ ಮುನ್ನವೇ ಹಲವು ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿತ್ತು. ಹೀಗಾಗಿ ಬತ್ತಿದ ಈ ಕೆರೆಗಳಿಗೆ ನೀರು ಬಂದಿದ್ದು, ಪ್ರಾಣಿಗಳಿಗೆ ನೀರಿನ ಅಭಾವ ತಪ್ಪಿದೆ.

ಹುಲಿಗಳು, ಹೆಚ್ಚಿನ ಸಂಖ್ಯೆಯ ಆನೆಗಳಿರುವ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮಣಿಕಂಠನ್ ಅವರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕ ರಿನೀವಬಲ್ ಎನರ್ಜಿ ಡೆವಲಪ್ ಮೆಂಟ್ ಲಿಮಿಟೆಡ್ ಸಹಯೋಗದಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕೆರೆಗಳಿಗೆ ಸೋಲಾರ್ ಪಂಪ್‌ಗಳ ಮುಖಾಂತರ ನೀರುಣಿಸುವ ಯೋಜನೆ ಹಮ್ಮಿಕೊಂಡಿದ್ದರು. ಕಾಡಿನಲ್ಲಿ ನೀರಿನ ಕೊರತೆ ನೀಗಿಸಲು ಸೋಲಾರ್ ಶಕ್ತಿಯಿಂದ ಚಾಲನೆಯಾಗುವ ೧೮ ಪಂಪ್ಗಳನ್ನು ಅಳವಡಿಸಿದ್ದರು.

ಬತ್ತಿದ ಕೆರೆಗಳಲ್ಲಿ ನೀರು: ಇದೀಗ ೧೦ ಕೆರೆಗಳನ್ನು ೧೬ರಿಂದ ೧೮ ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗಿದೆ. ಕಾಡಿನಲ್ಲಿರುವ ನೀರಿನ ಪ್ರಮುಖ ಮೂಲಗಳಾದ ಕೆರೆಗಳಪುನಶ್ಚೇತನಗೊಳಿಸುವ ಕಾರ್ಯ ನಡೆಯುತ್ತಿದೆ. ಮೊದಲ ಹಂತದಲ್ಲಿ ನಾಗರಹೊಳೆ ವ್ಯಾಪ್ತಿಯ ಒಣ ಪ್ರದೇಶಗಳಾದ ಅಂತರಸಂತೆ, ಮೇಟಿಕುಪ್ಪೆ ಆನೆ ಚೌಕೂರು, ವೀರನಹೊಸಹಳ್ಳಿ, ಇನ್ನಿತರ ಪ್ರದೇಶಗಳ ೧೦ ಕೆರೆಗಳನ್ನು ಬೇಸಿಗೆಗೂ ಮುನ್ನವೇ ಅಭಿವೃದ್ಧಿಗೊಳಿಸಲಾಗಿದೆ. ಕೆರೆಗಳಿಗೆ ನೀರು ಹರಿದು ಬರುವ ಕಾಲುವೆಗಳು ಹಾಗೂ ಕೆರೆಯಿಂದ ಮತ್ತೊಂದು ಕೆರೆಗೆ ನೀರು ಹರಿಯುವ ಕಾಲುವೆಗಳು ಹಾಗೂ ಕೆರೆಯಲ್ಲಿನ ಹೂಳನ್ನು ತೆಗೆಸಲಾಗಿದೆ. ಹೀಗಾಗಿ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಮಳೆಯ ನೀರು ಸರಾಗವಾಗಿ ಕೆರೆಯ ಒಡಲನ್ನು ಸೇರಿದೆ. ಹೀಗಾಗಿ ಬತ್ತಿದ ಕೆರೆಗಳಲ್ಲಿ ನೀರು ಸಂಗ್ರಹಣೆ ಯಾಗುತ್ತಿದೆ.

ಸಸ್ಯಾಹಾರಿ ಪ್ರಾಣಿಗಳಿಗೆ ಆಹಾರ: ಕೆರೆ, ಕಾಲುವೆಗಳ ಸುತ್ತ ಹಸಿರು ಹುಲ್ಲು ಬೆಳೆದಿದೆ. ಲಂಟಾನ ತೆಗೆದ ಜಾಗದಲ್ಲಿಯೂ ಹುಲ್ಲು ಬೆಳೆದಿದೆ. ಕೆರೆ ಬಳಿಯ ಮರಗಿಡಗಳೂ ಹಸಿರಿನಿಂದ ನಳನಳಿಸುತ್ತಿವೆ. ಇದರಿಂದಾಗಿ ಆನೆಗಳು, ಜಿಂಕೆಗಳು ಸೇರಿದಂತೆ ಇನ್ನಿತರ ಸಸ್ಯಾಹಾರಿ ಪ್ರಾಣಿಗಳಿಗೆ ಆಹಾರ ದೊರೆತಂತಾಗಿದೆ ಎಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೀಮಾ ತಿಳಿಸಿದರು

” ಸೂಕ್ತ ಸಂದರ್ಭದಲ್ಲಿ ಕೆರೆಗಳನ್ನು ಪುನಶ್ಚೇತನಗೊಳಿಸಿದ್ದರಿಂದ ಕಾಡಿನಲ್ಲಿ ವ್ಯರ್ಥವಾಗಿ ಹರಿದು ಹೋಗುತ್ತಿದ್ದ ನೀರು ಕೆರೆಗೆ ಹರಿಯುತ್ತಿದೆ. ಇದರಿಂದ ಪ್ರಾಣಿಗಳಿಗೆ ಕುಡಿಯುವ ನೀರು ದೊರೆತಂತಾಗಿದೆ. ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಅರಣ್ಯ ಇಲಾಖೆ ಸಚಿವರ ಮೇಲೆ ಒತ್ತಡ ತಂದು ರೈಲ್ವೆ ಬ್ಯಾರಿಕೆಡ್ ಅಳವಡಿಸಲು ಅನುದಾನ ಮಂಜೂರು ಮಾಡಿಸಿದ್ದೇನೆ. ಇದರಿಂದ ಸ್ವಲ್ಪಮಟ್ಟಿಗೆ ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟಬಹುದು.”

-ಜಿ.ಡಿ.ಹರೀಶ್ ಗೌಡ, ಶಾಸಕ

” ಕಾಡಿನಲ್ಲಿ ಹಳ್ಳಗಳಿಗೆ, ನೀರು ಹರಿಯುವ ಕಾಲುವೆಗಳಿಗೆ ಅಡ್ಡಲಾಗಿ ಚೆಕ್ ಡ್ಯಾಮ್ ನಿರ್ಮಿಸಲಾಗುತ್ತದೆ. ಆದರೆ ಚೆಕ್ ಡ್ಯಾಮ್ ನಿರ್ಮಿಸುವಾಗ ಕಲ್ಲುಗಳನ್ನು ಬಳಕೆ ಮಾಡಿ ಸಣ್ಣ ಸಣ್ಣ ಕಟ್ಟೆ ಕಟ್ಟ ಬೇಕಾಗುತ್ತದೆ. ಹಾಗಾಗಿ ಚೆಕ್ ಡ್ಯಾಮ್ ನಿರ್ಮಾಣಕ್ಕಿಂತ ಕೆರೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಯಿತು. ಈಗ ಅಭಿವೃದ್ಧಿಗೊಂಡ ಕೆರೆಗಳಲ್ಲಿ ನೀರು ಸಂಗ್ರಹವಾಗುತ್ತಿದೆ.”

-ಲಕ್ಷ್ಮೀಕಾಂತ್, ಎಸಿಎಫ್‌ 

 

 

 

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago