Andolana originals

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್

ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ 

ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ ಹಿಡಿಯುತ್ತಿರುವ ಕೆರೆಗಳನ್ನು ಗುರುತಿಸುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೆರೆಗಳಿಗೆ ಪುನಶ್ಚೇತನ ನೀಡುವ ಕಾರ್ಯ ಮಾಡುತ್ತಿದೆ.

ಮೈಸೂರು ಜಿಲ್ಲೆಯಲ್ಲಿ ಧರ್ಮಸ್ಥಳ ಸಂಸ್ಥೆಯು ಇದುವರೆಗೂ ೩೨ ಹಾಗೂ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ೧೫ಕ್ಕೂ ಅಧಿಕ ಕೆರೆಗಳ ಹೂಳು ತೆಗೆದು, ಸ್ಥಳೀಯ ರೈತರು, ಪ್ರಾಣಿ-ಪಕ್ಷಿಗಳ ನೀರಿನ ದಾಹ ತೀರಿಸುತ್ತಿದೆ.

ಇದೇ ರೀತಿ ಪಟ್ಟಣದ ಹೊರವಲಯದಲ್ಲಿರುವ ಅರಕೆರೆ ಗ್ರಾಮದ ಅಗಸನಕೆರೆ ಪ್ರಸ್ತುತ ವರ್ಷ ಮಳೆಗಾಲದಲ್ಲಿ ತುಂಬಿದರೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಅಂತರ್ಜಲ ಮಟ್ಟ ಸುಧಾರಿಸಲಿದೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಸ್ಥೆಗೆ ಗ್ರಾಮಸ್ಥರು ಕೆರೆ ಹೂಳೆತ್ತುವ ಕುರಿತಂತೆ ಮನವಿ ಮಾಡಿದ್ದರು.

ಗ್ರಾಮಸ್ಥರ ಮನವಿಯಂತೆ ಕೆರೆ ಅಭಿವೃದ್ಧಿ ಸಮಿತಿ ಮಾಡಿಕೊಂಡು ಮಾರ್ಚ್‌ನಲ್ಲಿ ಕೆರೆ ಹೂಳೆತ್ತುವ ಕಾರ್ಯ ಕೈಗೊಳ್ಳಲಾಯಿತು. ಹೂಳೆತ್ತುವ ಮುನ್ನ ಸಾಕಷ್ಟು ಸವಾಲುಗಳಿದ್ದವು. ಆದರೆ ಅದರ ಮಹತ್ವ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರು, ರೈತರೂ ಕೂಡ ಹೂಳೆತ್ತಲು ಸಹಕಾರ ನೀಡಿದರು. ಸುಮಾರು ಒಂದು ಸಾವಿರದಷ್ಟು ಟ್ರಿಪ್‌ಗಳಷ್ಟು ಹೂಳನ್ನು ಕೆರೆಯಿಂದ ತೆಗೆಯಲಾಗಿದೆ.

ಇಂಜಿನಿಯರ್ ಪುಷ್ಪರಾಜ್ ಪ್ರಕಾರ, ಕೆರೆಯಲ್ಲಿ ಸುಮಾರು ೬.೬೯ ಲಕ್ಷ ಲೀಟರ್ ಗ್ಯಾಲನ್ ಸಾಮರ್ಥ್ಯದಷ್ಟು ನೀರು ನಿಲ್ಲುವಷ್ಟು ಆಳವಾಗಿ ಹೂಳೆತ್ತಲಾಗಿದೆ. ನೂರಾರು ವರ್ಷಗಳ ಕಾಲ ಬಿಟ್ಟರೂ ಕೆರೆ ಹೂಳು ತುಂಬದಂತೆ ವ್ಯವಸ್ಥೆ ಮಾಡಲಾಗಿದೆ. ಗ್ರಾಮಸ್ಥರು, ರೈತರ ಸಹಕಾರ, ಹಿರಿಯ ಸಿಬ್ಬಂದಿ ಮಾರ್ಗದರ್ಶನದಿಂದ ಅರಕೆರೆ ಅಗಸನ ಕೆರೆಯ ಹೂಳು ತೆಗೆಯಲಾಗಿದೆ. ಇದರಿಂದ ಹಲವಾರು ಗ್ರಾಮಗಳ ಕೊಳವೆಬಾವಿಗಳ ಅಂತರ್ಜಲ ವೃದ್ಧಿ ಆಗಲಿದೆ. ಅಲ್ಲದೆ , ಸ್ಥಳೀಯ ರೈತರ ಜಾನುವಾರುಗಳಿಗೆ ಪ್ರಾಣಿ-ಪಕ್ಷಿಗಳಿಗೆ ನೀರಿನ ದಾಹ ತೀರಲಿದೆ.

” ಮುಂದಿನ ದಿನಗಳಲ್ಲಿ ಕೆರೆ ದಂಡೆಯ ಮೇಲೆ ಗಿಡಗಳನ್ನು ನೆಡಲಾಗುವುದು. ಗ್ರಾಮಸ್ಥರು ಮುಂಜಾನೆ ಮತ್ತು ಸಂಜೆ ಈ ಕೆರೆಯ ದಂಡೆಯ ಮೇಲೆ ವಾಯು ವಿಹಾರ ಮಾಡಬಹುದಾಗಿದೆ. ದಾನಿಗಳ ನೆರವು ಪಡೆದು ಕುಳಿತುಕೊಳ್ಳಲು ಆಸನಗಳು ಸೇರಿದಂತೆ ವಿವಿಧ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದ ತಂತಿಬೇಲಿ ಹಾಕಿ ಬಂದೋಬಸ್ತ್ಮಾ ಡಿದರೆ ಕೆರೆ ಸಂರಕ್ಷಣೆಯಾಗುತ್ತದೆ. ನೀರೂ ಮಲಿನವಾಗದಂತೆ ನೋಡಿಕೊಳ್ಳಬೇಕು.”

-ಸದಾನಂದ್ ದೇವಾಡಿಗ, ತಾಲ್ಲೂಕು ಯೋಜನಾಧಿಕಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

” ಧರ್ಮಸ್ಥಳ ಸಂಸ್ಥೆಯು ಕೆರೆಯ ಹೂಳೆತ್ತಿ ಕೊಟ್ಟಿದೆ. ಇದರಿಂದ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ರೈತರ ಬದುಕು ಹಸನಾಗಲಿದೆ. ಗ್ರಾಪಂ ಆಡಳಿತ ಸೂಕ್ತವ್ಯವಸ್ಥೆ ಮಾಡಿದರೆ ನೀರು ಹೆಚ್ಚು ಹಾಳಾಗುವುದಿಲ್ಲ. ದನ-ಕರುಗಳಿಗೂ ನೀರು ದೊರೆಯಲಿದೆ.”

-ಎ.ಎಸ್.ಯೋಗೇಶ್, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಅರಕೆರೆ

 

 

ಆಂದೋಲನ ಡೆಸ್ಕ್

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

28 mins ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

33 mins ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

42 mins ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

47 mins ago

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

12 hours ago