Andolana originals

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು

ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ ಹೆಚ್ಚುತ್ತಿದ್ದು, ಜನರು ಉಷ್ಣಾಂಶದ ಏರಿಕೆಯಿಂದ ಹೈರಾಣಾಗಿದ್ದು, ಬಿಸಿಲ ಬೇಗೆಯಿಂದ ಪಾರಾಗಲು ನೆರಳಿನ ಆಸರೆ ಬಯಸುತ್ತಾ, ತಂಪು ಪಾನೀಯಗಳ ಮೊರೆ ಹೋಗುತ್ತಿರುವುದು ಕಂಡು ಬರುತ್ತಿದೆ.

ಬೆಳಿಗ್ಗೆ ೧೦ ಗಂಟೆಗೆ ಆರಂಭವಾಗುವ ಬಿಸಿಲಿನ ತಾಪ ಸಂಜೆ ೬ರತನಕವೂ ಕಡಿಮೆಯಾಗುವುದೇ ಇಲ್ಲ. ಪ್ರತಿನಿತ್ಯ ಪಟ್ಟಣಕ್ಕೆ ಬರುವ ಜನತೆ ಮರದ ನೆರಳನ್ನು ಅರಸಿ ವಿರಮಿಸುತ್ತಾರೆ. ರಸ್ತೆಯಲ್ಲಿ ತೆರಳಿದರೆ ಬಿಸಿ ಗಾಳಿಯಿಂದ ತತ್ತರಿಸುವಂತಾಗಿದೆ. ಬಿಸಿಲಿನ ಬೇಗೆಯಿಂದ ಪಾರಾಗಲು ಜನರು ಕಲ್ಲಂಗಡಿ ಹಣ್ಣು, ಜ್ಯೂಸ್‌ಗಳು, ಮಜ್ಜಿಗೆ, ಐಸ್ ಕ್ರೀಂ, ಎಳನೀರು, ಕಬ್ಬಿನ ಹಾಲಿನತ್ತ ಮುಖ ಮಾಡುತ್ತಿದ್ದಾರೆ. ಇದರಿಂದ ತಂಪು ಪಾನೀಯಗಳಿಗೆ ಹಾಗೂ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ.

ತಾಲ್ಲೂಕು ರಾಜ್ಯದಲ್ಲಿ ಅತ್ಯಧಿಕ ಅರಣ್ಯ ಪ್ರದೇಶವನ್ನು ಹೊಂದಿದ್ದರೂ ಬಿಸಿಲಿನ ತಾಪಮಾನ ಮಾತ್ರ ಕಡಿಮೆಯಾಗಿಲ್ಲ. ಸೂರ್ಯನ ಧಗೆ ಜನರ ನೆತ್ತಿ ಸುಡುತ್ತಿದೆ. ಮನೆಯಿಂದ ಮಕ್ಕಳು, ಮಹಿಳೆಯರು, ವಯೋವೃದ್ಧರು ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಮಧ್ಯಾಹ್ನದ ವೇಳೆಯಂತೂ ಬಿಸಿಲಿನ ಝಳದಿಂದಾಗಿ ಜನರು ಹೊರಗೆ ಓಡಾಡುವುದನ್ನು ಕಡಿಮೆ ಮಾಡಿದ್ದಾರೆ. ಹೊರಗಿನ ಸುತ್ತಾಟಕ್ಕೆ ಜನರು ಬ್ರೇಕ್ ಹಾಕಿದ್ದಾರೆ.

ವಿವಿಧ ಕೆಲಸಗಳ ನಿಮಿತ್ತ ಹೊರಬರುವ ಜನರು ಛತ್ರಿಯ ಮೊರೆ ಹೋಗಿದ್ದಾರೆ. ಗ್ರಾಮೀಣ ಪ್ರದೇಶದ ಜನರು ನೆರಳಿಗೆ ಮರಗಳನ್ನು ಆಶ್ರಯಿಸುತ್ತಿದ್ದಾರೆ. ಹೆಚ್ಚಾದ ಎಳನೀರಿನ ಬೆಲೆ: ನಾಗರಿಕರು ಬಿಸಿಲಿನ ತಾಪದಿಂದ ಬಾಯಾರಿಕೆ ನೀಗಿಸಲು ಎಳನೀರು ಸೇವನೆ ಮಾಡಲು ಮುಂದಾಗುತ್ತಿದ್ದಾರೆ. ಈ ಮೊದಲು ೩೦-೪೦ ರೂ. ಇದ್ದ ಎಳನೀರಿನ ಬೆಲೆ ಈಗ ೭೦ ರೂ.ಗೆ ಏರಿಕೆಯಾಗಿದೆ. ಇನ್ನೂ ಕೆಲವರು ತಂಪು ಪಾನೀಯ ಹಾಗೂ ಕಬ್ಬಿನ ಹಾಲಿಗೆ ಮೊರೆ ಹೋಗುತ್ತಿದ್ದಾರೆ.

ಹೀಗಾಗಿ ಬೇಕರಿ, ಹೋಟೆಲ್‌ಗಳಲ್ಲಿ ತಂಪು ಪಾನೀಯಗಳ ಮಾರಾಟ ಗಣನೀಯವಾಗಿ ಹೆಚ್ಚುತ್ತಿದೆ. ಅಲ್ಲದೆ, ಮಜ್ಜಿಗೆಗೆ ಸಾಕಷ್ಟು ಬೇಡಿಕೆ ಕಂಡುಬರುತ್ತಿದೆ. ಕಲ್ಲಂಗಡಿ ಹಣ್ಣು, ಸೋಡಾ, ನಿಂಬೆ ಹಣ್ಣಿನ ಶರಬತ್ತು, ಹಣ್ಣಿನ ಜ್ಯೂಸ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ.

” ತಾಪಮಾನ ಏರಿಕೆಯಿಂದಾಗಿ ಮಧ್ಯಾಹ್ನದ ವೇಳೆ ಯಂತೂ ಮರದ ನೆರಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಸಿಲಿನ ತಾಪಕ್ಕೆ ತಲೆನೋವು ಬರುವ ಸಾಧ್ಯತೆ ಹೆಚ್ಚಿದೆ.ರಾಸಾಯನಿಕ ಮಿಶ್ರಿತತಂಪು ಪಾನೀಯ ಕುಡಿಯುವು ದರ ಬದಲು ಆರೋ ಗ್ಯದ ದೃಷ್ಟಿಯಿಂದ ಉತ್ತಮವಾಗಿರುವ ಎಳನೀರು, ಕಬ್ಬಿನ ಹಾಲು, ಕಲ್ಲಂಗಡಿ ಹಣ್ಣಿನ ಜ್ಯೂಸ್ ಸೇವನೆ ಒಳ್ಳೆಯದು.”

-ಕೆ.ಎಂ.ಮಹದೇವಸ್ವಾಮಿ, ವೀರಶೈವ ಮಹಾಸಭಾ ಜಿಲ್ಲಾ ನಿರ್ದೇಶಕ

” ಬಿಸಿಲು ಹೆಚ್ಚಾಗುತ್ತಿದ್ದು ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸಿದರೆ ಕ್ಷಣಾರ್ಧದಲ್ಲೇ ಭೂಮಿ ಒಣಗುತ್ತಿದೆ. ಆದಷ್ಟು ಬೇಗ ಮಳೆಯಾದರೆ ರೈತರಿಗೆ ಬಿತ್ತನೆ ಕೆಲಸ ಆರಂಭಿಸಲು ಸಾಧ್ಯವಾಗುತ್ತದೆ. ಜೊತೆಗೆ ನೀರಾವರಿ ರೈತರಿಗೆ ಅಂತರ್ಜಲ ವೃದ್ಧಿಯಾಗಿ ಅನುಕೂಲವಾಗುತ್ತದೆ. ಬಿಸಿಲಿನ ತಾಪಕ್ಕೆ ಕೂಲಿಕಾರ್ಮಿಕರು ಜಮೀನಿನಲ್ಲಿ ಕೆಲಸ ಮಾಡಲು ಸಾಧ್ಯವಾಗದಂತಾಗಿದೆ. ಈ ವರ್ಷದ ಬಿಸಿಲು ಹಿಂದಿನ ವರ್ಷಗಳಿಗಿಂತ ಹೆಚ್ಚು ತೀವ್ರವಾಗಿದೆ.”

-ಎಚ್.ಎಂ.ನಂದೀಶ್, ಪ್ರಗತಿಪರ ರೈತ

 

 

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

11 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

16 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

20 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago