Andolana originals

ಗಂಗೋತ್ರಿಯಲ್ಲಿ ಹಾಳಾಗಿರುವ ಶುದ್ಧ ನೀರಿನ ಘಟಕಗಳು

ವಾಸು ವಿ. ಹೊಂಗನೂರು

ಮೈಸೂರು: ಮಾನಸ ಗಂಗೋತ್ರಿಯಲ್ಲಿ ಲಕ್ಷಾಂತರ ರೂ. ಖರ್ಚುಮಾಡಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳು ಆರು ತಿಂಗ ಳಲ್ಲೇ ಹಾಳಾಗಿದ್ದು, ವಿದ್ಯಾರ್ಥಿಗಳಿಗೆ ನೀರಿಲ್ಲದೇ ತೀವ್ರ ತೊಂದರೆಯಾಗಿದೆ.

ಹೀಗಾಗಿ ಮಾನಸ ಗಂಗೋತ್ರಿಯಲ್ಲಿ ಶುದ್ಧ ಕುಡಿಯುವ ನೀರಿಗಾಗಿ ವಿದ್ಯಾರ್ಥಿಗಳು ಸ್ಥಳೀಯ ಕ್ಯಾಂಟೀನ್‌ಗಳು, ಬಾಟಲಿ ನೀರನ್ನು ಅವಲಂಬಿಸಬೇಕಾಗಿದೆ. ಗಂಗೋತ್ರಿ ಆವರಣದಲ್ಲಿ ಗಣಿತಶಾಸ್ತ್ರ ಅಧ್ಯಯನ ವಿಭಾಗ, ಗ್ರಂಥಾಲಯದ ಹಿಂಭಾಗ ಹಾಗೂ ಭೂವಿಜ್ಞಾನ ಶಾಸ್ತ್ರ ಮತ್ತು ಇತಿಹಾಸ ಅಧ್ಯಯನ ವಿಭಾಗದ ಮುಂಭಾಗಗಳಲ್ಲಿ ಹೀಗೆ ಮೂರು ಕಡೆ ಶುದ್ಧ ಕುಡಿಯುವ ನೀರಿನ ಘಟಕ ಗಳನ್ನು ನಿರ್ಮಿಸಲಾಯಿತು.

ನಿರ್ಮಾಣವಾದ ಆರು ತಿಂಗಳಲ್ಲೇ ಈ ಶುದ್ಧ ನೀರಿನ ಘಟಕಗಳು ಹಾಳಾಗಿದ್ದರೂ ಸಂಬಂಧಪಟ್ಟವರು ದುರಸ್ತಿ ಮಾಡಲು ಕ್ರಮ ಕೈಗೊಳ್ಳದೇ ಇರುವುದರಿಂದ ನೀರಿನ ಘಟಕಗಳ ಸುತ್ತಲಿನ ಕಬ್ಬಿಣದ ತಗಡುಗಳು ತಳಭಾಗದಲ್ಲಿ ತುಕ್ಕು ಹಿಡಿದಿವೆ. ನೀರಿನ ಪೂರೈಕೆಗಾಗಿ ಬಳಸಿದ್ದ ಪ್ಲಾಸ್ಟಿಕ್ ಟ್ಯಾಂಕ್‌ಗಳೂ ಸಂಪೂರ್ಣವಾಗಿ ಹಾಳಾಗಿವೆ. ಗಣಿತಶಾಸ್ತ್ರ ಅಧ್ಯಯನ ವಿಭಾಗದಲ್ಲಿರುವ ನೀರಿನ ಘಟಕದ ಮೇಲೆ ಮರದ ಕೊಂಬೆಗಳು ಬಿದ್ದು ಟ್ಯಾಂಕ್ ಹಾಳಾಗಿದೆ.

ಗ್ರಂಥಾಲಯದ ಮುಂದೆ ಇರುವ ನೀರಿನ ಟ್ಯಾಂಕ್ ಸುತ್ತ ಗಿಡಗಂಟಿಗಳು ಬೆಳೆದು ನಿಂತಿದ್ದು, ಬಳಸಿ ಬಿಸಾಡಿರುವ ಶೌಚಾಲಯದ ಕಮೋಡ್‌ಗಳನ್ನೂ ಟ್ಯಾಂಕ್ ಬಳಿಯೇ ಇರಿಸಲಾಗಿದೆ. ಇತಿಹಾಸ ಅಧ್ಯಯನ ವಿಭಾಗದ ಮುಂಭಾಗದಲ್ಲಿರುವ ಆರ್ ಒ ಪ್ಲಾಂಟ್ ಕೂಡ ಹಾಳಾಗಿದೆ. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಮೂಲಕ ವಿದ್ಯಾರ್ಥಿಗಳ ಕ್ಷೇಮ ಪಾಲನೆಗೆ ಮೈಸೂರು ವಿಶ್ವವಿದ್ಯಾನಿಲಯದ ಅಧಿಕಾರಿಗಳು ಮುಂದಾಗಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಸದ್ಯದಲ್ಲೇ ದುರಸ್ತಿಗೆ ಕ್ರಮ: ಮಾನಸ ಗಂಗೋತ್ರಿಯ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಗಣಿತ ಅಧ್ಯಯನ ವಿಭಾಗದ ಕಡೆ ಈಗಷ್ಟೇ ಕಾವೇರಿ ನೀರಿನ ಸಂಪರ್ಕ ಬಂದಿದೆ. ಎಲ್ಲ ವಿಭಾಗಗಳ ಕಡೆಗೂ ಕಾವೇರಿ ನೀರಿನ ಸಂಪರ್ಕ ಬಂದ ನಂತರ ನೀರಿನ ಘಟಕಗಳನ್ನು ದುರಸ್ತಿ ಮಾಡಲಾಗುತ್ತದೆ. ನೀರಿನಲ್ಲಿ ಲವಣಾಂಶ ಹೆಚ್ಚಾಗಿರುವ ಕಾರಣ ಆರ್. ಒ. ಪ್ಲಾಂಟ್‌ಗಳು ಹಾಳಾಗಿವೆ.
-ಎನ್. ಕೆ. ಲೋಕನಾಥ್, ಕುಲಪತಿ, ಮೈಸೂರು ವಿವಿ

ಮಾನಸ ಗಂಗೋತ್ರಿಯ ಆರ್ ಒ ಪ್ಲಾಂಟ್‌ಗಳ ಶುಚಿತ್ವಕ್ಕಾಗಲೀ, ಅವುಗಳ ದುರಸ್ತಿಗಾಗಲೀ ಸಂಬಂಧಪಟ್ಟ ಅಽಕಾರಿಗಳು ಮುಂದಾಗಿಲ್ಲ. ನೀರಿಗಾಗಿ ನಾವು ಕ್ಯಾಂಟೀನ್, ಬಾಟಲಿ ನೀರನ್ನು ಅವಲಂಬಿಸಬೇಕಿದೆ. ವಿವಿ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲ ಸೌಕರ್ಯಗಳನ್ನಾದರೂ ಒದಗಿಸಬೇಕು. -ಎನ್. ಮನೋಜ್, ಎಂಬಿಎ ವಿದ್ಯಾರ್ಥಿ, ಮಾನಸ ಗಂಗೋತ್ರಿ

ಮೂರು ವರ್ಷಗಳ ಹಿಂದೆ ನಿರ್ಮಿಸಲಾದ ಶುದ್ಧ ನೀರಿನ ಘಟಕಗಳು ಕಾರ್ಯ ನಿರ್ವಹಿಸಿದ್ದು ಕೇವಲ ಆರು ತಿಂಗಳು ಮಾತ್ರ. ಸೂಕ್ತ ನಿರ್ವಹಣೆ ಮಾಡದಿರುವುದ ರಿಂದಾಗಿ ಕುಡಿಯುವ ನೀರನ್ನು ದುಡ್ಡು ಕೊಟ್ಟು ಖರೀದಿಸುವುದು ಅನಿವಾರ್ಯವಾಗಿದೆ. ಗ್ರಂಥಾಲಯಕ್ಕೆ ಪ್ರತಿದಿನ ಖಾಸಗಿಯವ ರಿಂದಲೇ ನೀರು ಖರೀದಿಸಲಾಗುತ್ತಿದೆ. ಬೇಸಿಗೆಗೆ ಮುನ್ನ ವಿವಿ ಅಧಿಕಾರಿಗಳು ಶುದ್ಧ ನೀರಿನ ಘಟಕಗಳನ್ನು ದುರಸ್ತಿ ಮಾಡುವ ಮೂಲಕ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಬೇಕಾಗಿದೆ. -ಪ್ರಸನ್ನಕುಮಾರ್, ಸಂಶೋಧಕರು ಮೈ. ವಿವಿ

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು.!

ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…

18 mins ago

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂ ಸಿದ್ದುಗೆ ಎಚ್‌ಡಿಕೆ ಸವಾಲು

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…

33 mins ago

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ: ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದ ಸಿ.ಟಿ.ರವಿ

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…

1 hour ago

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

2 hours ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

3 hours ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

3 hours ago