Andolana originals

ಗಂಗೋತ್ರಿಯಲ್ಲಿ ಹಾಳಾಗಿರುವ ಶುದ್ಧ ನೀರಿನ ಘಟಕಗಳು

ವಾಸು ವಿ. ಹೊಂಗನೂರು

ಮೈಸೂರು: ಮಾನಸ ಗಂಗೋತ್ರಿಯಲ್ಲಿ ಲಕ್ಷಾಂತರ ರೂ. ಖರ್ಚುಮಾಡಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳು ಆರು ತಿಂಗ ಳಲ್ಲೇ ಹಾಳಾಗಿದ್ದು, ವಿದ್ಯಾರ್ಥಿಗಳಿಗೆ ನೀರಿಲ್ಲದೇ ತೀವ್ರ ತೊಂದರೆಯಾಗಿದೆ.

ಹೀಗಾಗಿ ಮಾನಸ ಗಂಗೋತ್ರಿಯಲ್ಲಿ ಶುದ್ಧ ಕುಡಿಯುವ ನೀರಿಗಾಗಿ ವಿದ್ಯಾರ್ಥಿಗಳು ಸ್ಥಳೀಯ ಕ್ಯಾಂಟೀನ್‌ಗಳು, ಬಾಟಲಿ ನೀರನ್ನು ಅವಲಂಬಿಸಬೇಕಾಗಿದೆ. ಗಂಗೋತ್ರಿ ಆವರಣದಲ್ಲಿ ಗಣಿತಶಾಸ್ತ್ರ ಅಧ್ಯಯನ ವಿಭಾಗ, ಗ್ರಂಥಾಲಯದ ಹಿಂಭಾಗ ಹಾಗೂ ಭೂವಿಜ್ಞಾನ ಶಾಸ್ತ್ರ ಮತ್ತು ಇತಿಹಾಸ ಅಧ್ಯಯನ ವಿಭಾಗದ ಮುಂಭಾಗಗಳಲ್ಲಿ ಹೀಗೆ ಮೂರು ಕಡೆ ಶುದ್ಧ ಕುಡಿಯುವ ನೀರಿನ ಘಟಕ ಗಳನ್ನು ನಿರ್ಮಿಸಲಾಯಿತು.

ನಿರ್ಮಾಣವಾದ ಆರು ತಿಂಗಳಲ್ಲೇ ಈ ಶುದ್ಧ ನೀರಿನ ಘಟಕಗಳು ಹಾಳಾಗಿದ್ದರೂ ಸಂಬಂಧಪಟ್ಟವರು ದುರಸ್ತಿ ಮಾಡಲು ಕ್ರಮ ಕೈಗೊಳ್ಳದೇ ಇರುವುದರಿಂದ ನೀರಿನ ಘಟಕಗಳ ಸುತ್ತಲಿನ ಕಬ್ಬಿಣದ ತಗಡುಗಳು ತಳಭಾಗದಲ್ಲಿ ತುಕ್ಕು ಹಿಡಿದಿವೆ. ನೀರಿನ ಪೂರೈಕೆಗಾಗಿ ಬಳಸಿದ್ದ ಪ್ಲಾಸ್ಟಿಕ್ ಟ್ಯಾಂಕ್‌ಗಳೂ ಸಂಪೂರ್ಣವಾಗಿ ಹಾಳಾಗಿವೆ. ಗಣಿತಶಾಸ್ತ್ರ ಅಧ್ಯಯನ ವಿಭಾಗದಲ್ಲಿರುವ ನೀರಿನ ಘಟಕದ ಮೇಲೆ ಮರದ ಕೊಂಬೆಗಳು ಬಿದ್ದು ಟ್ಯಾಂಕ್ ಹಾಳಾಗಿದೆ.

ಗ್ರಂಥಾಲಯದ ಮುಂದೆ ಇರುವ ನೀರಿನ ಟ್ಯಾಂಕ್ ಸುತ್ತ ಗಿಡಗಂಟಿಗಳು ಬೆಳೆದು ನಿಂತಿದ್ದು, ಬಳಸಿ ಬಿಸಾಡಿರುವ ಶೌಚಾಲಯದ ಕಮೋಡ್‌ಗಳನ್ನೂ ಟ್ಯಾಂಕ್ ಬಳಿಯೇ ಇರಿಸಲಾಗಿದೆ. ಇತಿಹಾಸ ಅಧ್ಯಯನ ವಿಭಾಗದ ಮುಂಭಾಗದಲ್ಲಿರುವ ಆರ್ ಒ ಪ್ಲಾಂಟ್ ಕೂಡ ಹಾಳಾಗಿದೆ. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಮೂಲಕ ವಿದ್ಯಾರ್ಥಿಗಳ ಕ್ಷೇಮ ಪಾಲನೆಗೆ ಮೈಸೂರು ವಿಶ್ವವಿದ್ಯಾನಿಲಯದ ಅಧಿಕಾರಿಗಳು ಮುಂದಾಗಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಸದ್ಯದಲ್ಲೇ ದುರಸ್ತಿಗೆ ಕ್ರಮ: ಮಾನಸ ಗಂಗೋತ್ರಿಯ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಗಣಿತ ಅಧ್ಯಯನ ವಿಭಾಗದ ಕಡೆ ಈಗಷ್ಟೇ ಕಾವೇರಿ ನೀರಿನ ಸಂಪರ್ಕ ಬಂದಿದೆ. ಎಲ್ಲ ವಿಭಾಗಗಳ ಕಡೆಗೂ ಕಾವೇರಿ ನೀರಿನ ಸಂಪರ್ಕ ಬಂದ ನಂತರ ನೀರಿನ ಘಟಕಗಳನ್ನು ದುರಸ್ತಿ ಮಾಡಲಾಗುತ್ತದೆ. ನೀರಿನಲ್ಲಿ ಲವಣಾಂಶ ಹೆಚ್ಚಾಗಿರುವ ಕಾರಣ ಆರ್. ಒ. ಪ್ಲಾಂಟ್‌ಗಳು ಹಾಳಾಗಿವೆ.
-ಎನ್. ಕೆ. ಲೋಕನಾಥ್, ಕುಲಪತಿ, ಮೈಸೂರು ವಿವಿ

ಮಾನಸ ಗಂಗೋತ್ರಿಯ ಆರ್ ಒ ಪ್ಲಾಂಟ್‌ಗಳ ಶುಚಿತ್ವಕ್ಕಾಗಲೀ, ಅವುಗಳ ದುರಸ್ತಿಗಾಗಲೀ ಸಂಬಂಧಪಟ್ಟ ಅಽಕಾರಿಗಳು ಮುಂದಾಗಿಲ್ಲ. ನೀರಿಗಾಗಿ ನಾವು ಕ್ಯಾಂಟೀನ್, ಬಾಟಲಿ ನೀರನ್ನು ಅವಲಂಬಿಸಬೇಕಿದೆ. ವಿವಿ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲ ಸೌಕರ್ಯಗಳನ್ನಾದರೂ ಒದಗಿಸಬೇಕು. -ಎನ್. ಮನೋಜ್, ಎಂಬಿಎ ವಿದ್ಯಾರ್ಥಿ, ಮಾನಸ ಗಂಗೋತ್ರಿ

ಮೂರು ವರ್ಷಗಳ ಹಿಂದೆ ನಿರ್ಮಿಸಲಾದ ಶುದ್ಧ ನೀರಿನ ಘಟಕಗಳು ಕಾರ್ಯ ನಿರ್ವಹಿಸಿದ್ದು ಕೇವಲ ಆರು ತಿಂಗಳು ಮಾತ್ರ. ಸೂಕ್ತ ನಿರ್ವಹಣೆ ಮಾಡದಿರುವುದ ರಿಂದಾಗಿ ಕುಡಿಯುವ ನೀರನ್ನು ದುಡ್ಡು ಕೊಟ್ಟು ಖರೀದಿಸುವುದು ಅನಿವಾರ್ಯವಾಗಿದೆ. ಗ್ರಂಥಾಲಯಕ್ಕೆ ಪ್ರತಿದಿನ ಖಾಸಗಿಯವ ರಿಂದಲೇ ನೀರು ಖರೀದಿಸಲಾಗುತ್ತಿದೆ. ಬೇಸಿಗೆಗೆ ಮುನ್ನ ವಿವಿ ಅಧಿಕಾರಿಗಳು ಶುದ್ಧ ನೀರಿನ ಘಟಕಗಳನ್ನು ದುರಸ್ತಿ ಮಾಡುವ ಮೂಲಕ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಬೇಕಾಗಿದೆ. -ಪ್ರಸನ್ನಕುಮಾರ್, ಸಂಶೋಧಕರು ಮೈ. ವಿವಿ

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

2 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

2 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

2 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

3 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

4 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

4 hours ago