ಎಸ್.ಪ್ರಶಾಂತ್
ಗಂಗೋತ್ರಿ ಬಡಾವಣೆ ರಸ್ತೆಗೆ ಬೇಕಿದೆ ಕಾಯಕಲ್ಪ
ದೂಳುಮಯವಾದ ರಸ್ತೆ, ಅಪಾಯಕ್ಕೆ ಎಡೆಮಾಡುತ್ತಿರುವ ಗುಂಡಿಗಳು
ಮೈಸೂರು: ಕಳೆದ ಕೆಲ ತಿಂಗಳಿನಿಂದ ನಗರದ ಗಂಗೋತ್ರಿ ಬಡಾವಣೆ ಹಾಗೂ ಮಾರುತಿ ಟೆಂಪಲ್ ರಸ್ತೆಯಲ್ಲಿ ದೂಳಿನ ‘ಲೋಕ’ವೇ ಸೃಷ್ಟಿಯಾಗಿದೆ. ರಸ್ತೆಯಲ್ಲಿ ವಾಹನಗಳು ವೇಗವಾಗಿ ಸಂಚರಿಸುತ್ತಿದ್ದಂತೆಯೇ ದೂಳು ಮೇಲೇಳುತ್ತದೆ. ಇದರಿಂದಾಗಿ ವಾಹನ ಸವಾರರಷ್ಟೇ ಅಲ್ಲ,ರಸ್ತೆಯ ಅಕ್ಕಪಕ್ಕದ ನಿವಾಸಿಗಳೂ ಸಮಸ್ಯೆಗಳನ್ನು ಎದುರಿಸುವಂತಾಗಿದೆ.
ದೂಳುಮಯವಾದ ರಸ್ತೆ: ನಗರದ ವಿವಿಧ ಬಡಾವಣೆಗಳಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಹಾಗೂ ರಸ್ತೆ ಬದಿಯ ಕಾಮಗಾರಿಗಳ ಉದ್ದೇಶಕ್ಕೆ ರಸ್ತೆಗಳನ್ನು ಅಗೆಯಲಾಗಿದೆ. ಈ ಮೊದಲೇ ರಸ್ತೆಗಳಲ್ಲಿದ್ದ ತಗ್ಗುಗಳು ಮತ್ತು ಕಾಮಗಾರಿಗಳಿಗೆ ಕೈಗೊಂಡಿರುವ ಅಗೆತದಿಂದ ಎಲ್ಲೆಡೆ ಭಾರೀ ಪ್ರಮಾಣದ ಮಣ್ಣು ಸಂಗ್ರಹ ಗೊಳ್ಳುತ್ತಿದೆ.
ಸಂಚಾರಕ್ಕೆ ಅಡ್ಡಿಯಾದ ರಸ್ತೆ : ಹದಗೆಟ್ಟಿರುವ ರಸ್ತೆಯ ಸ್ಥಿತಿ ನೋಡಿದರೆ ರಸ್ತೆಗಳಲ್ಲಿ ಹೊಂಡಗಳು ಇವೆಯೋ, ಹೊಂಡಗಳಲ್ಲಿ ರಸ್ತೆ ಇದೆಯೋ ಎಂಬ ಅನುಮಾನ ಕಾಡದಿರದು. ರಸ್ತೆಯಲ್ಲಿ ನಿರ್ಮಾಣವಾಗಿರುವ ಗುಂಡಿಗಳಿಂದ ವಾಹನ ಸವಾರರು ಪ್ರಯಾಸದಿಂದ ಸಂಚರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇಲ್ಲಿ ಸಂಚರಿಸುವ ಸವಾರರು ನರಕಯಾತನೆ ಅನುಭವಿಸುವಂತಾಗಿದೆ.
ಭಯದಲ್ಲೇ ಸಂಚಾರ: ಕೆಲಸ ಮುಗಿಸಿಕೊಂಡು ರಾತ್ರಿ ತಮ್ಮ ಮನೆಗಳಿಗೆ ತೆರಳುವ ಸುತ್ತಮುತ್ತಲ ಬಡಾವಣೆಗಳ ನಿವಾಸಿಗಳ ಪಾಡಂತೂ ಹೇಳತೀರದಾಗಿದೆ. ವಾಹನಗಳನ್ನು ಚಲಾಯಿಸುವಾಗ ಸ್ವಲ್ಪ ಎಚ್ಚರ ತಪ್ಪಿದರೂ ಅಪಘಾತ ಖಚಿತ. ಜೀವ ಕೈಯಲ್ಲಿ ಹಿಡಿದು ಗುಂಡಿಗಳನ್ನು ತಪ್ಪಿಸಿಕೊಂಡು ಹೋಗಲು ಸರ್ಕಸ್ ಮಾಡಬೇಕಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ರಸ್ತೆಯನ್ನು ದುರಸ್ತಿಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಗುಂಡಿಮಯ ರಸ್ತೆಗೆ ಕಾರಣ : ಕಳಪೆ ಕಾಮಗಾರಿ, ಮಳೆ ನೀರು, ಚರಂಡಿಗಳ ಹೂಳು ತೆಗೆಯದ ಕಾರಣ ರಸ್ತೆಗಳಲ್ಲೇ ನೀರು ನಿಲ್ಲುತ್ತದೆ. ರಸ್ತೆಯಲ್ಲಿ ಹಾಕಲ್ಪಟ್ಟ ಡಾಂಬರು, ಜಲ್ಲಿ ಕಿತ್ತುಬಂದು ಗುಂಡಿ ನಿರ್ಮಾಣಗೊಳ್ಳುವ ಮೊದಲೇ ದುರಸ್ತಿಗೆ ಮುಂದಾಗದಿರುವುದು, ಅಪಘಾತಗಳಿಗೆ ಎಡೆಮಾಡಿಕೊಡುವ ಗುಂಡಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಮುಚ್ಚದಿರುವುದು ಇಂತಹ ಪರಿಸ್ಥಿತಿ ನಿರ್ಮಾಣವಾಗಲು ಕಾರಣವಾಗಿದೆ.
” ಗುಂಡಿ ಬಿದ್ದ ರಸ್ತೆಯನ್ನು ಸರಿಪಡಿಸುವ ಕಾರಣದಿಂದ ಇದ್ದ ಹಳೆಯ ರಸ್ತೆಯನ್ನು ಅಗೆದು ಕಿತ್ತು ಹಾಕಲಾಗಿದೆ. ಈಗ ರಸ್ತೆಯನ್ನು ಅಭಿವೃದ್ಧಿ ಪಡಿಸದೇ ಹಾಗೆಯೇ ಬಿಡಲಾಗಿದೆ. ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ವಾಹನ ಸಂಚಾರದಿಂದ ಇಡೀ ರಸ್ತೆ ಧೂಳುಮಯವಾಗಿದೆ.”
– ಪ್ರಕಾಶ್(ಪಕ್ಕಿ),ಆಟೋ ಚಾಲಕ
” ಅವ್ಯವಸ್ಥೆಯಿಂದಾಗಿ ಈ ರಸ್ತೆಯಲ್ಲಿ ಓಡಾಡುವುದೇ ದುಸ್ತರವಾಗಿದೆ. ಸುತ್ತಮುತ್ತಲಿನ ಮನೆಗಳು ಮತ್ತು ಅಂಗಡಿಗಳು, ವಾಹನ ಗಳ ಸಂಚಾರದಿಂದ ದೂಳುಮಯವಾಗುತ್ತಿವೆ. ನಿಗದಿತ ಕಾಲಾವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೇ ಇರುವುದು ಈ ಸಮಸ್ಯೆಗೆ ಕಾರಣವಾಗಿದೆ.”
– ರಮೇಶ್ ತಾಯೂರು, ಸ್ಥಳೀಯ ನಿವಾಸಿ
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…