Andolana originals

‘ದುರಸ್ತಿ ನೆಪದಲ್ಲಿ ರಸ್ತೆ ಅಗೆದು ಸಂಚಾರಕ್ಕೆ ಅಡಚಣೆ’

ಎಸ್.ಪ್ರಶಾಂತ್

ಗಂಗೋತ್ರಿ ಬಡಾವಣೆ ರಸ್ತೆಗೆ ಬೇಕಿದೆ ಕಾಯಕಲ್ಪ

ದೂಳುಮಯವಾದ ರಸ್ತೆ, ಅಪಾಯಕ್ಕೆ ಎಡೆಮಾಡುತ್ತಿರುವ ಗುಂಡಿಗಳು

ಮೈಸೂರು: ಕಳೆದ ಕೆಲ ತಿಂಗಳಿನಿಂದ ನಗರದ ಗಂಗೋತ್ರಿ ಬಡಾವಣೆ ಹಾಗೂ ಮಾರುತಿ ಟೆಂಪಲ್ ರಸ್ತೆಯಲ್ಲಿ ದೂಳಿನ ‘ಲೋಕ’ವೇ ಸೃಷ್ಟಿಯಾಗಿದೆ. ರಸ್ತೆಯಲ್ಲಿ ವಾಹನಗಳು ವೇಗವಾಗಿ ಸಂಚರಿಸುತ್ತಿದ್ದಂತೆಯೇ ದೂಳು ಮೇಲೇಳುತ್ತದೆ. ಇದರಿಂದಾಗಿ ವಾಹನ ಸವಾರರಷ್ಟೇ ಅಲ್ಲ,ರಸ್ತೆಯ ಅಕ್ಕಪಕ್ಕದ ನಿವಾಸಿಗಳೂ ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ದೂಳುಮಯವಾದ ರಸ್ತೆ: ನಗರದ ವಿವಿಧ ಬಡಾವಣೆಗಳಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಹಾಗೂ ರಸ್ತೆ ಬದಿಯ ಕಾಮಗಾರಿಗಳ  ಉದ್ದೇಶಕ್ಕೆ ರಸ್ತೆಗಳನ್ನು ಅಗೆಯಲಾಗಿದೆ. ಈ ಮೊದಲೇ ರಸ್ತೆಗಳಲ್ಲಿದ್ದ ತಗ್ಗುಗಳು ಮತ್ತು ಕಾಮಗಾರಿಗಳಿಗೆ ಕೈಗೊಂಡಿರುವ ಅಗೆತದಿಂದ ಎಲ್ಲೆಡೆ ಭಾರೀ ಪ್ರಮಾಣದ ಮಣ್ಣು ಸಂಗ್ರಹ ಗೊಳ್ಳುತ್ತಿದೆ.

ಸಂಚಾರಕ್ಕೆ ಅಡ್ಡಿಯಾದ ರಸ್ತೆ : ಹದಗೆಟ್ಟಿರುವ ರಸ್ತೆಯ ಸ್ಥಿತಿ ನೋಡಿದರೆ ರಸ್ತೆಗಳಲ್ಲಿ ಹೊಂಡಗಳು ಇವೆಯೋ, ಹೊಂಡಗಳಲ್ಲಿ ರಸ್ತೆ ಇದೆಯೋ ಎಂಬ ಅನುಮಾನ ಕಾಡದಿರದು. ರಸ್ತೆಯಲ್ಲಿ ನಿರ್ಮಾಣವಾಗಿರುವ ಗುಂಡಿಗಳಿಂದ ವಾಹನ ಸವಾರರು ಪ್ರಯಾಸದಿಂದ ಸಂಚರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇಲ್ಲಿ ಸಂಚರಿಸುವ ಸವಾರರು ನರಕಯಾತನೆ  ಅನುಭವಿಸುವಂತಾಗಿದೆ.

ಭಯದಲ್ಲೇ ಸಂಚಾರ: ಕೆಲಸ ಮುಗಿಸಿಕೊಂಡು  ರಾತ್ರಿ ತಮ್ಮ ಮನೆಗಳಿಗೆ ತೆರಳುವ ಸುತ್ತಮುತ್ತಲ ಬಡಾವಣೆಗಳ ನಿವಾಸಿಗಳ ಪಾಡಂತೂ ಹೇಳತೀರದಾಗಿದೆ. ವಾಹನಗಳನ್ನು ಚಲಾಯಿಸುವಾಗ ಸ್ವಲ್ಪ ಎಚ್ಚರ ತಪ್ಪಿದರೂ ಅಪಘಾತ ಖಚಿತ. ಜೀವ ಕೈಯಲ್ಲಿ ಹಿಡಿದು ಗುಂಡಿಗಳನ್ನು ತಪ್ಪಿಸಿಕೊಂಡು ಹೋಗಲು ಸರ್ಕಸ್ ಮಾಡಬೇಕಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ರಸ್ತೆಯನ್ನು ದುರಸ್ತಿಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಗುಂಡಿಮಯ ರಸ್ತೆಗೆ ಕಾರಣ : ಕಳಪೆ ಕಾಮಗಾರಿ, ಮಳೆ ನೀರು, ಚರಂಡಿಗಳ ಹೂಳು ತೆಗೆಯದ ಕಾರಣ ರಸ್ತೆಗಳಲ್ಲೇ ನೀರು ನಿಲ್ಲುತ್ತದೆ. ರಸ್ತೆಯಲ್ಲಿ ಹಾಕಲ್ಪಟ್ಟ ಡಾಂಬರು, ಜಲ್ಲಿ ಕಿತ್ತುಬಂದು ಗುಂಡಿ ನಿರ್ಮಾಣಗೊಳ್ಳುವ ಮೊದಲೇ ದುರಸ್ತಿಗೆ ಮುಂದಾಗದಿರುವುದು, ಅಪಘಾತಗಳಿಗೆ ಎಡೆಮಾಡಿಕೊಡುವ ಗುಂಡಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಮುಚ್ಚದಿರುವುದು ಇಂತಹ ಪರಿಸ್ಥಿತಿ ನಿರ್ಮಾಣವಾಗಲು ಕಾರಣವಾಗಿದೆ.

” ಗುಂಡಿ ಬಿದ್ದ ರಸ್ತೆಯನ್ನು ಸರಿಪಡಿಸುವ ಕಾರಣದಿಂದ ಇದ್ದ ಹಳೆಯ ರಸ್ತೆಯನ್ನು ಅಗೆದು ಕಿತ್ತು ಹಾಕಲಾಗಿದೆ. ಈಗ ರಸ್ತೆಯನ್ನು ಅಭಿವೃದ್ಧಿ ಪಡಿಸದೇ ಹಾಗೆಯೇ ಬಿಡಲಾಗಿದೆ. ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ವಾಹನ ಸಂಚಾರದಿಂದ ಇಡೀ ರಸ್ತೆ ಧೂಳುಮಯವಾಗಿದೆ.”

– ಪ್ರಕಾಶ್(ಪಕ್ಕಿ),ಆಟೋ ಚಾಲಕ

” ಅವ್ಯವಸ್ಥೆಯಿಂದಾಗಿ ಈ ರಸ್ತೆಯಲ್ಲಿ ಓಡಾಡುವುದೇ ದುಸ್ತರವಾಗಿದೆ. ಸುತ್ತಮುತ್ತಲಿನ ಮನೆಗಳು ಮತ್ತು ಅಂಗಡಿಗಳು, ವಾಹನ ಗಳ ಸಂಚಾರದಿಂದ ದೂಳುಮಯವಾಗುತ್ತಿವೆ. ನಿಗದಿತ ಕಾಲಾವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೇ ಇರುವುದು ಈ ಸಮಸ್ಯೆಗೆ ಕಾರಣವಾಗಿದೆ.”

– ರಮೇಶ್ ತಾಯೂರು, ಸ್ಥಳೀಯ ನಿವಾಸಿ

 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

4 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

4 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

4 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

4 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

4 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

4 hours ago