Andolana originals

ರಸ್ತೆಗಳ ಗಂಡಾಗುಂಡಿ: ಎಚ್ಚೆತ್ತ ನಗರಪಾಲಿಕೆ

ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ರಸ್ತೆ ತೇಪೆ ಕಾಮಗಾರಿ ಆರಂಭ

 

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಶುರು ಮಾಡಿದ್ದರೆ, ಮತ್ತೊಂದೆಡೆ ಮೈಸೂರು ಮಹಾನಗರ ಪಾಲಿಕೆಯು ನಗರದ ಪ್ರಮುಖ ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕಾಮಗಾರಿ ಆರಂಭ ಮಾಡಿದ್ದು, ದಸರೆ ಆರಂಭಕ್ಕೂ ಮುನ್ನ ಕಾಮಗಾರಿ ಮುಗಿಸಬೇಕೆನ್ನುವ ಗುರಿ ಹೊಂದಿದೆ.

ಮಹಾನಗರ ಪಾಲಿಕೆಯ ೯ ವಲಯ ಕಚೇರಿಗಳಿಗೂ ಪ್ರತ್ಯೇಕ ಗುತ್ತಿಗೆದಾರರನ್ನು ನೇಮಕ ಮಾಡಿ ಕಾಮಗಾರಿ ಆರಂಭಿಸಿರುವುದು ಈ ಬಾರಿಯ ವಿಶೇಷವಾಗಿದೆ. ೧,೫೦೦ಕ್ಕೂ ಹೆಚ್ಚು ಗುಂಡಿಗಳು: ಮಹಾನಗರಪಾಲಿಕೆ ಅಽಕಾರಿಗಳು, ವಲಯವಾರು ರಸ್ತೆಗಳ ಸಮೀಕ್ಷೆ ನಡೆಸಿ ಅಂದಾಜು ೧,೫೦೦ಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಿದರೆ. ಪಾಲಿಕೆಯ ೯ ವಲಯಗಳಿಂದ ಒಟ್ಟು ೬೦ರಿಂದ ೭೦ ಗುಂಡಿಗಳಿವೆ ಎಂಬುದಾಗಿ ಸಮೀಕ್ಷೆಯ ವರದಿಯನ್ನು ಇಂಜಿನಿಯರ್‌ಗಳು ಆಯುಕ್ತರಿಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ೧೩೫ ಲಕ್ಷ ರೂ. ಅನುದಾನ: ದಸರಾ ವೇಳೆ ನಗರದನರಸ್ತೆಗಳಲ್ಲಿ ಗುಂಡಿ ಮುಚ್ಚುವುದೂ ಸೇರಿದಂತೆ ರಸ್ತೆ ಡಾಂಬರೀಕರಣಕ್ಕೆ ವಲಯ೧ಕ್ಕೆ ೩೫ ಹಾಗೂ ವಲಯ ೬ಕ್ಕೆ ೨೫ ಲಕ್ಷ ರೂ. ಹಾಗೂ ಉಳಿದ ವಲಯಗಳಿಗೆ ತಲಾ ೧೦ ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ಈ ಬಾರಿ ರಸ್ತೆ ದುರಸ್ತಿಗಾಗಿ ೧೩೫ ಲಕ್ಷ ರೂ. ಅನುದಾನ ನೀಡಲಾಗಿದೆ. ಭಾರೀ ಮಳೆ ಬಿದ್ದ ಕಾರಣ ಮೈಸೂರು ನಗರದಾದ್ಯಂತ ಎಲ್ಲಾ ರಸ್ತೆಗಳಲ್ಲಿ ಗುಂಡಿ ಬಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಸಿದ್ದ ಪಾಲಿಕೆ ಅಽಕಾರಿಗಳು ಗುಂಡಿ ಮುಚ್ಚಲು ಅಂದಾಜು ಪಟ್ಟಿ ತಯಾರಿಸಿದ್ದರು.

ಮಳೆ ನಿಂತಿರುವುದರಿಂದ ವೈಜ್ಞಾನಿಕ ರೀತಿಯಲ್ಲಿ ರಸ್ತೆಗಳ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಆರಂಭವಾಗಿದ್ದು, ಎ ೯ ವಲಯ ಕಚೇರಿಗಳ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ಗುತ್ತಿಗೆ ನೀಡಲಾಗಿದೆ. ಇ-ಟೆಂಡರ್ ಮೂಲಕ ಗುತ್ತಿಗೆ: ಪಾಲಿಕೆ ಆಯುಕ್ತ ಅಶಾದ್ ಉರ್ ರೆಹಮಾನ್ ಷರೀ- ಅವರ ನಿರ್ದೇಶನದಂತೆ ಅಽಕ್ಷಕ ಇಂಜಿನಿಯರ್ ಕೆ. ಜೆ. ಸಿಂಧು ನೇತೃತ್ವದಲ್ಲಿ ಇ-ಟೆಂಡರ್ ಕರೆದು ಅರ್ಹ ಗುತ್ತಿಗೆದಾರರಿಗೆ ವಲಯಕ್ಕೆ ಒಬ್ಬರಂತೆ ಗುಂಡಿ ಮುಚ್ಚುವ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ.

ಒಂದು ವಾರದ ಹಿಂದೆ ಕಾಮಗಾರಿ ಆರಂಭಗೊಂಡಿದ್ದು, ಬಿರುಸಿನಿಂದ ಕೆಲಸ ನಡೆಯುತ್ತಿದೆ. ದಸರೆಗೂ ಮುನ್ನವೇ ನಗರದಲ್ಲಿ ಗುಂಡಿಬಿದ್ದ ರಸ್ತೆಗಳನ್ನು ಗುರುತಿಸಲಾಗಿದೆ. ೯೦ ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಶೀಘ್ರವೇ ನಗರದ ಗುಂಡಿ ಬಿದ್ದ ರಸ್ತೆಗಳಿಗೆ ಮುಕ್ತಿ ಸಿಗಲಿದೆ ಎಂದು ಸಿಂಧು ತಿಳಿಸಿದ್ದಾರೆ.

ಕೇಂದ್ರೀಯ ಬಸ್ ನಿಲ್ದಾಣದ ಮುಂದೆ ಕಾಂಕ್ರೀಟ್ ರಸ್ತೆ
ಮಹಾನಗರ ಪಾಲಿಕೆಯ ಎಲ್ಲ ೯ ವಲಯ ಕಚೇರಿಗಳ ವ್ಯಾಪ್ತಿಯ ರಸ್ತೆಗಳ ದುರಸ್ತಿ ಕಾರ್ಯ ನಡೆಯುತ್ತಿದ್ದರೆ, ಬೆಂಗಳೂರು- ನೀಲಗಿರಿ ರಸ್ತೆಯಲ್ಲಿರುವ ಮೈಸೂರು ಕೇಂದ್ರೀಯ ಬಸ್ ನಿಲ್ದಾಣದ ಮುಂಭಾಗದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಜವಾಬ್ದಾರಿಯನ್ನು ಲೋಕೋಪಯೋಗಿ ಇಲಾಖೆ ನಿರ್ವಹಿಸುತ್ತಿದ್ದು, ಬಸ್ ಸ್ಟ್ಯಾಂಡ್ ಮುಂಭಾಗದ ಜೋಡಿ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಲಾಗುತ್ತಿದೆ. ಮಧ್ಯಭಾಗದಲ್ಲಿರುವ ಮಳೆ ನೀರು ಚರಂಡಿಯನ್ನೂ ಕಾಂಕ್ರೀಟ್ ಮಾಡಿ ಸ್ಲ್ಯಾಬ್ ಹಾಕಿ ಅದರ ಮೇಲ್ಭಾಗವನ್ನು ಮುಚ್ಚಿ ರಸ್ತೆಯನ್ನು ವಿಶಾಲವಾಗಿ ಮಾಡಲಾಗುತ್ತಿದೆ.

ಮಳೆ ಸ್ವಲ್ಪ ಬಿಡುವು ಕೊಟ್ಟಿದ್ದರಿಂದ ರಸ್ತೆ ದುರಸ್ತಿ ಕಾಮಗಾರಿಗಳನ್ನು ಬಿರುಸಿನಿಂದ ಮುಗಿಸುತ್ತಿದ್ದೇವೆ. ವಲಯ ಕಚೇರಿ ೭ರಲ್ಲಿ ಕಾಮಗಾರಿಯನ್ನು ಇನ್ನು ಒಂದು ವಾರದಲ್ಲಿ ಶುರು ಮಾಡಲಾಗುವುದು. ಸೆ. ೧೫ರೊಳಗೆ ರಸ್ತೆ ಕೆಲಸಮುಗಿಸಿ ನಂತರ ಫುಟ್‌ಪಾತ್‌ಗಳಿಗೆ ಬಣ್ಣ ಹಚ್ಚುವ ಕೆಲಸ ಆರಂಭಿಸುತ್ತೇವೆ. -ಕೆ. ಜೆ. ಸಿಂಧು, ಎಸ್‌ಇ, ಮಹಾನಗರಪಾಲಿಕೆ, ಮೈಸೂರು

 

ಆಲ್‌ಫ್ರೆಡ್‌ ಸಾಲೋಮನ್

ಮೂಲತಃ ಮೈಸೂರಿನವನಾದ ನಾನು ಮಹಾರಾಜ ಕಾಲೇಜಿನಲ್ಲಿ ಪದವಿ ಮುಗಿಸಿ, ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಮತ್ತು ಸಾಮೂಹಿಕ ಸಂವಹನ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಬೆಂಗಳೂರಿನ ಅಭಿಮಾನ ಪ್ರಕಾಶನದ ಅಭಿಮಾನಿ, ಅರಗಿಣಿ, ಪತ್ರಿಕೆ ಮೂಲಕ 1988ರಲ್ಲಿ ಪತ್ರಕರ್ತನಾಗಿ ವೃತ್ತಿ ಆರಂಭಿಸಿ, ರೂಪತಾರ, ಉದಯವಾಣಿ, ಗೃಹಶೋಭ, ಉಷಾಕಿರಣ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿರುತ್ತೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ.

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

5 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

34 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

60 mins ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

1 hour ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago