Andolana originals

ಸತತ ಮಳೆಯಿಂದ ಹದಗೆಟ್ಟ ರಸ್ತೆಗಳ ಅವ್ಯವಸ್ಥೆ ಅನಾವರಣ

ಮಂಜು ಕೋಟೆ

ಕೋಟೆ ಪಟ್ಟಣ ವ್ಯಾಪ್ತಿಯ ಅನೇಕ ಬಡಾವಣೆಗಳ ನಿವಾಸಿಗಳಿಗೆ ನಿತ್ಯ ನರಕಯಾತನೆ 

ಎಚ್.ಡಿ.ಕೋಟೆ: ಕೆಲವು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪಟ್ಟಣ ವ್ಯಾಪ್ತಿಯ ಹದಗೆಟ್ಟ ರಸ್ತೆಗಳಲ್ಲಿ ನೀರು ನಿಂತು ಕೆಸರುಮಯವಾಗಿ ನಿವಾಸಿಗಳು ಓಡಾಡಲು ಸಾಧ್ಯವಾಗದೆ ಅಽಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳಿಲ್ಲ ಎಂಬುದಕ್ಕೆ ವಾರ್ಡ್ ಗಳಲ್ಲಿರುವ ರಸ್ತೆ ಮತ್ತು ಚರಂಡಿಗಳೇ ಸಾಕ್ಷಿಯಾಗಿವೆ. ತಾಲ್ಲೂಕು ವ್ಯಾಪ್ತಿಯಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳ ಅವ್ಯವಸ್ಥೆ ಗೋಚರವಾಗುತ್ತಿದೆ. ಅದರಲ್ಲೂ ಪಟ್ಟಣದ ಸ್ಟೇಡಿಯಂ ಬಡಾವಣೆ, ಜೋಣಿಗೇರಿ ಬೀದಿ ರಸ್ತೆ, ಬೆಳಗನಹಳ್ಳಿ ರಸ್ತೆ ಬಡಾವಣೆ, ಮುಸ್ಲಿಂ ಬ್ಲಾಕ್, ಹನುಮಂತನಗರ, ವಿಶ್ವನಾಥ ಕಾಲೋನಿ, ರಂಗ ಅಯ್ಯಂಗಾರ್ ಬಡಾವಣೆಯಲ್ಲಿನ ಹದಗೆಟ್ಟ ರಸ್ತೆಗಳಲ್ಲಿ ನೀರು ನಿಂತು ಕೆಸರಿನಿಂದ ಕೂಡಿ ಸಾರ್ವಜನಿಕರು ಸಂಚಾರದ ವೇಳೆ ನರಕಯಾತನೆ ಅನುಭವಿಸುವಂತಾಗಿದೆ. ಮಕ್ಕಳು, ವೃದ್ಧರು, ದ್ವಿಚಕ್ರ ವಾಹನ ಸವಾರರು ಸಂಚರಿಸಲು ಸಾಧ್ಯವಾಗದಂತಾಗಿದೆ.

ಧೈರ್ಯ ಮಾಡಿ ಓಡಾಡಲು ಹೋದರೆ ಕಾಲು ಜಾರಿ ಬಿದ್ದು ಕೈ ಕಾಲು ಮುರಿದುಕೊಳ್ಳಬೇಕಾದ ಸ್ಥಿತಿ ಎದುರಾಗಿದೆ. ಆದರೆ, ಈ ಕುರಿತು ಮುಂಜಾಗ್ರತೆಯಾಗಿ ಕ್ರಮ ಕೈಗೊಳ್ಳಬೇಕಾಗಿದ್ದ ಪುರಸಭೆಯ ಕೆಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ಜನಸಾಮಾನ್ಯರ ಗೋಳನ್ನು ಕೇಳುವವರು ಇಲ್ಲದಂತಾಗಿದೆ.

ಕೆಲ ಜನಪ್ರತಿನಿಧಿಗಳು ಅನೇಕ ವರ್ಷಗಳಿಂದ ತಮ್ಮ ವಾರ್ಡ್‌ಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸುತ್ತಲೇ ಇಲ್ಲ ಎಂಬ ಆರೋಪವೂ ಇದೆ. ಪಟ್ಟಣದ ನಿವಾಸಿಗಳು ನೆಮ್ಮದಿಯಿಂದ ಜೀವನ  ನಡೆಸಲು ಈಗಲಾದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಕ್ರಿಯವಾಗಿ ಕೆಲಸ ನಿರ್ವಹಿಸುವ ಕಾರ್ಯಕ್ಕೆ ಮುಂದಾಗಬೇಕಿದೆ.

” ಈ ಬಾರಿ ಹೆಚ್ಚು ಮಳೆ ಆಗಿರುವುದರಿಂದ ಅನೇಕ ರಸ್ತೆಗಳು ಹದಗೆಟ್ಟು ಸಮಸ್ಯೆ ಎದುರಾಗಿದೆ. ಕೆಲವೊಂದು ರಸ್ತೆಗಳನ್ನು ಅಭಿವೃದ್ಧಿಪಡಿಸಲು ೧ ಕೋಟಿ ರೂ. ಟೆಂಡರ್ ಕರೆಯಲಾಗಿದ್ದು ಉಳಿಕೆ ರಸ್ತೆಗಳನ್ನು ಗ್ರಾವಲ್ ಹಾಗೂ ಜಲ್ಲಿಗಳ ಮೂಲಕ ಮುಚ್ಚುವ ಕೆಲಸ ಮಾಡಿ ಚರಂಡಿಗಳಲ್ಲಿ ನೀರು ಸರಾಗವಾಗಿ ಹೋಗುವಂತೆ ಕ್ರಮ ಕೈಗೊಳ್ಳಲಾಗುವುದು”

-ಸುರೇಶ್, ಮುಖ್ಯಾಧಿಕಾರಿ, ಪುರಸಭೆ

” ನಮ್ಮ ವಾರ್ಡಿನಲ್ಲಿ ರಸ್ತೆ, ಚರಂಡಿಗಳು ಇಲ್ಲದೆ ಎಲ್ಲೆಂದರಲ್ಲಿ ಕೊಳಚೆ ನೀರು ನಿಂತು, ರಸ್ತೆಗಳಲ್ಲಿ ಕೆಸರು ತುಂಬಿಕೊಂಡು ಓಡಾಡಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ನಮ್ಮನ್ನು ಮನುಷ್ಯರು ಎಂದುಕೊಂಡಿಲ್ಲ. ಈಗಲಾದರೂ ಅಗತ್ಯ ಸೌಕರ್ಯ ಕಲ್ಪಿಸಬೇಕು.”

-ಸುಕುಮಾರ, ಸ್ಟೇಡಿಯಂ ಬಡಾವಣೆ ನಿವಾಸಿ

ಆಂದೋಲನ ಡೆಸ್ಕ್

Recent Posts

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

3 mins ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

19 mins ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

35 mins ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

50 mins ago

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು…

1 hour ago

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

ಚೆನ್ನೈ: ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂದಿನ ಮಾಸ್ಟರ್‌ ಮೈಂಡ್‌ನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಹಿಂಸಾತ್ಮಕ ಕಾರ್ಮಿಕರ ಪ್ರತಿಭಟನೆಯಲ್ಲಿ ಪ್ರಮುಖ ಆರೋಪಿಗಳನ್ನು…

1 hour ago