ಮಂಜು ಕೋಟೆ
ಕೋಟೆ ಪಟ್ಟಣ ವ್ಯಾಪ್ತಿಯ ಅನೇಕ ಬಡಾವಣೆಗಳ ನಿವಾಸಿಗಳಿಗೆ ನಿತ್ಯ ನರಕಯಾತನೆ
ಎಚ್.ಡಿ.ಕೋಟೆ: ಕೆಲವು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪಟ್ಟಣ ವ್ಯಾಪ್ತಿಯ ಹದಗೆಟ್ಟ ರಸ್ತೆಗಳಲ್ಲಿ ನೀರು ನಿಂತು ಕೆಸರುಮಯವಾಗಿ ನಿವಾಸಿಗಳು ಓಡಾಡಲು ಸಾಧ್ಯವಾಗದೆ ಅಽಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳಿಲ್ಲ ಎಂಬುದಕ್ಕೆ ವಾರ್ಡ್ ಗಳಲ್ಲಿರುವ ರಸ್ತೆ ಮತ್ತು ಚರಂಡಿಗಳೇ ಸಾಕ್ಷಿಯಾಗಿವೆ. ತಾಲ್ಲೂಕು ವ್ಯಾಪ್ತಿಯಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳ ಅವ್ಯವಸ್ಥೆ ಗೋಚರವಾಗುತ್ತಿದೆ. ಅದರಲ್ಲೂ ಪಟ್ಟಣದ ಸ್ಟೇಡಿಯಂ ಬಡಾವಣೆ, ಜೋಣಿಗೇರಿ ಬೀದಿ ರಸ್ತೆ, ಬೆಳಗನಹಳ್ಳಿ ರಸ್ತೆ ಬಡಾವಣೆ, ಮುಸ್ಲಿಂ ಬ್ಲಾಕ್, ಹನುಮಂತನಗರ, ವಿಶ್ವನಾಥ ಕಾಲೋನಿ, ರಂಗ ಅಯ್ಯಂಗಾರ್ ಬಡಾವಣೆಯಲ್ಲಿನ ಹದಗೆಟ್ಟ ರಸ್ತೆಗಳಲ್ಲಿ ನೀರು ನಿಂತು ಕೆಸರಿನಿಂದ ಕೂಡಿ ಸಾರ್ವಜನಿಕರು ಸಂಚಾರದ ವೇಳೆ ನರಕಯಾತನೆ ಅನುಭವಿಸುವಂತಾಗಿದೆ. ಮಕ್ಕಳು, ವೃದ್ಧರು, ದ್ವಿಚಕ್ರ ವಾಹನ ಸವಾರರು ಸಂಚರಿಸಲು ಸಾಧ್ಯವಾಗದಂತಾಗಿದೆ.
ಧೈರ್ಯ ಮಾಡಿ ಓಡಾಡಲು ಹೋದರೆ ಕಾಲು ಜಾರಿ ಬಿದ್ದು ಕೈ ಕಾಲು ಮುರಿದುಕೊಳ್ಳಬೇಕಾದ ಸ್ಥಿತಿ ಎದುರಾಗಿದೆ. ಆದರೆ, ಈ ಕುರಿತು ಮುಂಜಾಗ್ರತೆಯಾಗಿ ಕ್ರಮ ಕೈಗೊಳ್ಳಬೇಕಾಗಿದ್ದ ಪುರಸಭೆಯ ಕೆಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ಜನಸಾಮಾನ್ಯರ ಗೋಳನ್ನು ಕೇಳುವವರು ಇಲ್ಲದಂತಾಗಿದೆ.
ಕೆಲ ಜನಪ್ರತಿನಿಧಿಗಳು ಅನೇಕ ವರ್ಷಗಳಿಂದ ತಮ್ಮ ವಾರ್ಡ್ಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸುತ್ತಲೇ ಇಲ್ಲ ಎಂಬ ಆರೋಪವೂ ಇದೆ. ಪಟ್ಟಣದ ನಿವಾಸಿಗಳು ನೆಮ್ಮದಿಯಿಂದ ಜೀವನ ನಡೆಸಲು ಈಗಲಾದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಕ್ರಿಯವಾಗಿ ಕೆಲಸ ನಿರ್ವಹಿಸುವ ಕಾರ್ಯಕ್ಕೆ ಮುಂದಾಗಬೇಕಿದೆ.
” ಈ ಬಾರಿ ಹೆಚ್ಚು ಮಳೆ ಆಗಿರುವುದರಿಂದ ಅನೇಕ ರಸ್ತೆಗಳು ಹದಗೆಟ್ಟು ಸಮಸ್ಯೆ ಎದುರಾಗಿದೆ. ಕೆಲವೊಂದು ರಸ್ತೆಗಳನ್ನು ಅಭಿವೃದ್ಧಿಪಡಿಸಲು ೧ ಕೋಟಿ ರೂ. ಟೆಂಡರ್ ಕರೆಯಲಾಗಿದ್ದು ಉಳಿಕೆ ರಸ್ತೆಗಳನ್ನು ಗ್ರಾವಲ್ ಹಾಗೂ ಜಲ್ಲಿಗಳ ಮೂಲಕ ಮುಚ್ಚುವ ಕೆಲಸ ಮಾಡಿ ಚರಂಡಿಗಳಲ್ಲಿ ನೀರು ಸರಾಗವಾಗಿ ಹೋಗುವಂತೆ ಕ್ರಮ ಕೈಗೊಳ್ಳಲಾಗುವುದು”
-ಸುರೇಶ್, ಮುಖ್ಯಾಧಿಕಾರಿ, ಪುರಸಭೆ
” ನಮ್ಮ ವಾರ್ಡಿನಲ್ಲಿ ರಸ್ತೆ, ಚರಂಡಿಗಳು ಇಲ್ಲದೆ ಎಲ್ಲೆಂದರಲ್ಲಿ ಕೊಳಚೆ ನೀರು ನಿಂತು, ರಸ್ತೆಗಳಲ್ಲಿ ಕೆಸರು ತುಂಬಿಕೊಂಡು ಓಡಾಡಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ನಮ್ಮನ್ನು ಮನುಷ್ಯರು ಎಂದುಕೊಂಡಿಲ್ಲ. ಈಗಲಾದರೂ ಅಗತ್ಯ ಸೌಕರ್ಯ ಕಲ್ಪಿಸಬೇಕು.”
-ಸುಕುಮಾರ, ಸ್ಟೇಡಿಯಂ ಬಡಾವಣೆ ನಿವಾಸಿ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…