Andolana originals

ಸತತ ಮಳೆಯಿಂದ ಹದಗೆಟ್ಟ ರಸ್ತೆಗಳ ಅವ್ಯವಸ್ಥೆ ಅನಾವರಣ

ಮಂಜು ಕೋಟೆ

ಕೋಟೆ ಪಟ್ಟಣ ವ್ಯಾಪ್ತಿಯ ಅನೇಕ ಬಡಾವಣೆಗಳ ನಿವಾಸಿಗಳಿಗೆ ನಿತ್ಯ ನರಕಯಾತನೆ 

ಎಚ್.ಡಿ.ಕೋಟೆ: ಕೆಲವು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪಟ್ಟಣ ವ್ಯಾಪ್ತಿಯ ಹದಗೆಟ್ಟ ರಸ್ತೆಗಳಲ್ಲಿ ನೀರು ನಿಂತು ಕೆಸರುಮಯವಾಗಿ ನಿವಾಸಿಗಳು ಓಡಾಡಲು ಸಾಧ್ಯವಾಗದೆ ಅಽಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳಿಲ್ಲ ಎಂಬುದಕ್ಕೆ ವಾರ್ಡ್ ಗಳಲ್ಲಿರುವ ರಸ್ತೆ ಮತ್ತು ಚರಂಡಿಗಳೇ ಸಾಕ್ಷಿಯಾಗಿವೆ. ತಾಲ್ಲೂಕು ವ್ಯಾಪ್ತಿಯಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳ ಅವ್ಯವಸ್ಥೆ ಗೋಚರವಾಗುತ್ತಿದೆ. ಅದರಲ್ಲೂ ಪಟ್ಟಣದ ಸ್ಟೇಡಿಯಂ ಬಡಾವಣೆ, ಜೋಣಿಗೇರಿ ಬೀದಿ ರಸ್ತೆ, ಬೆಳಗನಹಳ್ಳಿ ರಸ್ತೆ ಬಡಾವಣೆ, ಮುಸ್ಲಿಂ ಬ್ಲಾಕ್, ಹನುಮಂತನಗರ, ವಿಶ್ವನಾಥ ಕಾಲೋನಿ, ರಂಗ ಅಯ್ಯಂಗಾರ್ ಬಡಾವಣೆಯಲ್ಲಿನ ಹದಗೆಟ್ಟ ರಸ್ತೆಗಳಲ್ಲಿ ನೀರು ನಿಂತು ಕೆಸರಿನಿಂದ ಕೂಡಿ ಸಾರ್ವಜನಿಕರು ಸಂಚಾರದ ವೇಳೆ ನರಕಯಾತನೆ ಅನುಭವಿಸುವಂತಾಗಿದೆ. ಮಕ್ಕಳು, ವೃದ್ಧರು, ದ್ವಿಚಕ್ರ ವಾಹನ ಸವಾರರು ಸಂಚರಿಸಲು ಸಾಧ್ಯವಾಗದಂತಾಗಿದೆ.

ಧೈರ್ಯ ಮಾಡಿ ಓಡಾಡಲು ಹೋದರೆ ಕಾಲು ಜಾರಿ ಬಿದ್ದು ಕೈ ಕಾಲು ಮುರಿದುಕೊಳ್ಳಬೇಕಾದ ಸ್ಥಿತಿ ಎದುರಾಗಿದೆ. ಆದರೆ, ಈ ಕುರಿತು ಮುಂಜಾಗ್ರತೆಯಾಗಿ ಕ್ರಮ ಕೈಗೊಳ್ಳಬೇಕಾಗಿದ್ದ ಪುರಸಭೆಯ ಕೆಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ಜನಸಾಮಾನ್ಯರ ಗೋಳನ್ನು ಕೇಳುವವರು ಇಲ್ಲದಂತಾಗಿದೆ.

ಕೆಲ ಜನಪ್ರತಿನಿಧಿಗಳು ಅನೇಕ ವರ್ಷಗಳಿಂದ ತಮ್ಮ ವಾರ್ಡ್‌ಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸುತ್ತಲೇ ಇಲ್ಲ ಎಂಬ ಆರೋಪವೂ ಇದೆ. ಪಟ್ಟಣದ ನಿವಾಸಿಗಳು ನೆಮ್ಮದಿಯಿಂದ ಜೀವನ  ನಡೆಸಲು ಈಗಲಾದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಕ್ರಿಯವಾಗಿ ಕೆಲಸ ನಿರ್ವಹಿಸುವ ಕಾರ್ಯಕ್ಕೆ ಮುಂದಾಗಬೇಕಿದೆ.

” ಈ ಬಾರಿ ಹೆಚ್ಚು ಮಳೆ ಆಗಿರುವುದರಿಂದ ಅನೇಕ ರಸ್ತೆಗಳು ಹದಗೆಟ್ಟು ಸಮಸ್ಯೆ ಎದುರಾಗಿದೆ. ಕೆಲವೊಂದು ರಸ್ತೆಗಳನ್ನು ಅಭಿವೃದ್ಧಿಪಡಿಸಲು ೧ ಕೋಟಿ ರೂ. ಟೆಂಡರ್ ಕರೆಯಲಾಗಿದ್ದು ಉಳಿಕೆ ರಸ್ತೆಗಳನ್ನು ಗ್ರಾವಲ್ ಹಾಗೂ ಜಲ್ಲಿಗಳ ಮೂಲಕ ಮುಚ್ಚುವ ಕೆಲಸ ಮಾಡಿ ಚರಂಡಿಗಳಲ್ಲಿ ನೀರು ಸರಾಗವಾಗಿ ಹೋಗುವಂತೆ ಕ್ರಮ ಕೈಗೊಳ್ಳಲಾಗುವುದು”

-ಸುರೇಶ್, ಮುಖ್ಯಾಧಿಕಾರಿ, ಪುರಸಭೆ

” ನಮ್ಮ ವಾರ್ಡಿನಲ್ಲಿ ರಸ್ತೆ, ಚರಂಡಿಗಳು ಇಲ್ಲದೆ ಎಲ್ಲೆಂದರಲ್ಲಿ ಕೊಳಚೆ ನೀರು ನಿಂತು, ರಸ್ತೆಗಳಲ್ಲಿ ಕೆಸರು ತುಂಬಿಕೊಂಡು ಓಡಾಡಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ನಮ್ಮನ್ನು ಮನುಷ್ಯರು ಎಂದುಕೊಂಡಿಲ್ಲ. ಈಗಲಾದರೂ ಅಗತ್ಯ ಸೌಕರ್ಯ ಕಲ್ಪಿಸಬೇಕು.”

-ಸುಕುಮಾರ, ಸ್ಟೇಡಿಯಂ ಬಡಾವಣೆ ನಿವಾಸಿ

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

2 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

2 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

3 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

4 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

8 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

8 hours ago