Andolana originals

ಇದು ಕೆಸರು ಗದ್ದೆಯಲ್ಲ; ಕಬಿನಿ ಸಂಪರ್ಕ ರಸ್ತೆ!

ಮಂಜು ಕೋಟೆ

ದಿನನಿತ್ಯ ನರಕಯಾತನೆಪಡುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು; ರಸ್ತೆ ದುರಸ್ತಿಗೆ ಆಗ್ರಹ

ಎಚ್.ಡಿ.ಕೋಟೆ: ತೀವ್ರ ಹದಗೆಟ್ಟು ಕೆಸರು ಗದ್ದೆಯಂತಾಗಿರುವ ಕಬಿನಿ ರಸ್ತೆಯಲ್ಲಿ ರೈತರು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಓಡಾಡಲು ಹರಸಾಹಸಪಡುವಂತಾಗಿದೆ.

ತಾಲ್ಲೂಕಿನ ಕಬಿನಿ ಜಲಾಶಯದ ಸಮೀಪದ ಬೀಚನಹಳ್ಳಿ ಸರ್ಕಾರಿ ಜೂನಿಯರ್ ಕಾಲೇಜಿನ ನೇರಳೆಹುಂಡಿ ಮುಖ್ಯರಸ್ತೆಯ ಸ್ಥಿತಿ ಇದಾಗಿದೆ. ಕಬಿನಿ ಪ್ರವಾಸಿ ಮಂದಿರದ ಮುಂಭಾಗದಲ್ಲಿರುವ ಈ ಮುಖ್ಯ ರಸ್ತೆಯಲ್ಲಿ ಸರ್ಕಾರಿ ಜೂನಿಯರ್ ಕಾಲೇಜು ಇದ್ದು, ವಿದ್ಯಾಭ್ಯಾಸ ಮಾಡಲು ಪ್ರತಿನಿತ್ಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ರಸ್ತೆಯ ಮೂಲಕವೇ ಕಾಲೇಜಿಗೆ ತೆರಳಬೇಕಿದೆ.

ಕೆಸರುಮಯವಾಗಿರುವ ರಸ್ತೆಯಲ್ಲೇ ಅನಿವಾರ್ಯವಾಗಿ ಓಡಾಡಬೇಕಾದ ಸ್ಥಿತಿ ಎದುರಾಗಿದೆ. ನೇರಳೆಹುಂಡಿ ಗ್ರಾಮಸ್ಥರು, ರೈತರು ಈ ರಸ್ತೆಯ ಮಾರ್ಗವಾಗಿಯೇ ತಮ್ಮ ಜಮೀನಿನ ಕೆಲಸ ಕಾರ್ಯಗಳಿಗೆ ತೆರಳಬೇಕಿದೆ. ಆದ್ದರಿಂದ ಈ ರಸ್ತೆಯನ್ನು ದುರಸ್ತಿಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈ ರಸ್ತೆ ಅಧ್ವಾನಗೊಂಡಿರುವ ಬಗ್ಗೆ ಕಬಿನಿ ನೀರಾವರಿ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಗೆ ತಿಳಿದಿದ್ದರೂ ಸಂಬಂಽಸಿದವರು ಕಂಡೂ ಕಾಣದಂತೆ ಇದ್ದಾರೆ. ವಿದ್ಯಾರ್ಥಿಗಳು, ರೈತರು, ವಾಹನ ಸವಾರರು ರಸ್ತೆಯಲ್ಲಿ ಓಡಾಡಲು ನರಕಯಾತನೆ ಪಡುತ್ತಿರುವ ಬಗ್ಗೆ ಗಮನಹರಿಸದೆ ಇರುವುದು ಅಧಿಕಾರಿ ವರ್ಗದ ಬೇಜವಾಬ್ಧಾರಿಯನ್ನು ತೋರಿಸುತ್ತದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

” ಮಳೆಗಾಲ ಪ್ರಾರಂಭವಾದರೆ ಈ ರಸ್ತೆಯಲ್ಲಿ ಓಡಾಡಲೂ ಸಾಧ್ಯವಾಗುತ್ತಿಲ್ಲ. ಕಾಲೇಜಿಗೆ ಹೋಗಬೇಕಾದರೆ ವಿದ್ಯಾರ್ಥಿಗಳು ಪಡುತ್ತಿರುವ ನರಕಯಾತನೆ ನಮಗಷ್ಟೇ ಗೊತ್ತು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇತ್ತ ಗಮನಹರಿಸಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು.”

 -ಸುಮತಿ, ಕಾಲೇಜು ವಿದ್ಯಾರ್ಥಿನಿ

” ಕಳೆದ ಬಾರಿ ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಿದ್ದ ಸಂದರ್ಭದಲ್ಲಿ ಶಾಸಕರು, ಕಾಲೇಜು ಅಭಿವೃದ್ಧಿ ಸಮಿತಿಯವರು, ವಿದ್ಯಾರ್ಥಿಗಳು ರಸ್ತೆ ದುರಸ್ತಿಗೆ ಮನವಿ ಮಾಡಿದ್ದೆವು. ಈ ಬಗ್ಗೆ ಕ್ರಮ ಕೈಗೊಂಡಿದ್ದು, ಸಿಎಂ ಮತ್ತು ಶಾಸಕರು ಅನುದಾನ ಬಿಡುಗಡೆ ಮಾಡಿ ರಸ್ತೆ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ.”

 -ಭಾಸ್ಕರ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು

” ನೇರಳೆಹುಂಡಿಯಲ್ಲಿರುವ ಕಾಲೇಜು ಎದುರಿನ ರಸ್ತೆ ಮತ್ತು ಪ್ರೌಢಶಾಲೆ ಎದುರಿನ ರಸ್ತೆಯನ್ನು ಅಭಿವೃದ್ಧಿಪಡಿಸಲು ಶಾಸಕರು ಮತ್ತು ಮುಖ್ಯಮಂತ್ರಿಗಳು ಎರಡು ಕೋಟಿ ರೂ.ಗಳ ಅನುದಾನವನ್ನು ನೀಡಿದ್ದು, ಕಾಮಗಾರಿಗಾಗಿ ಟೆಂಡರ್ ಪ್ರಕ್ರಿಯೆ ನಡೆದಿದೆ. ಶೀಘ್ರದಲ್ಲಿ ರಸ್ತೆ ಕಾಮಗಾರಿ ನಡೆಸಲಾಗುವುದು. ಶಾಲಾ-ಕಾಲೇಜುವರೆಗೆ ಸಿಮೆಂಟ್ ರಸ್ತೆ, ಮುಂದುವರಿದು ಡಾಂಬರೀಕರಣ ನಡೆಯಲಿದೆ.”

 -ಗಣೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರ, ಕಬಿನಿ ಜಲಾಶಯ

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

4 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

4 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

4 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

5 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

5 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

6 hours ago