Andolana originals

ಗುಂಡಿ ಬಿದ್ದಿರುವ ರಸ್ತೆಯಿಂದ ಗ್ರಾಮಸ್ಥರು ಹೈರಾಣು

ಕೃಷ್ಣ ಸಿದ್ದಾಪುರ

ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ  ದುರಸ್ತಿಗೆ ಒತ್ತಾಯ

ಸಿದ್ದಾಪುರ: ಪೌರಾಣಿಕ ಹಿನ್ನೆಲೆಯುಳ್ಳ ಶ್ರೀ ಅಗಸ್ತ್ಯೇಶ್ವರ ದೇವಾಲಯಕ್ಕೆ ತೆರಳುವ ಮುಖ್ಯರಸ್ತೆಯ ಸ್ಥಿತಿ ಶೋಚನೀಯವಾಗಿದೆ. ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ೨ನೇ ವಾರ್ಡ್‌ನ ಕೂಡುಗದ್ದೆ, ಗುಹ್ಯ ಕಕ್ಕಟುಕಾಡು ಗ್ರಾಮದ ಸಂಪರ್ಕ ರಸ್ತೆಗಳು ದುರಸ್ತಿ ಕಾಣದೆ ಗುಂಡಿಬಿದ್ದಿದ್ದು, ಇದರಿಂದ ಜನರು ಸಮಸ್ಯೆ ಎದುರಿಸುವಂತಾಗಿದೆ.

ಕೊಡುಗದ್ದೆಯಿಂದ ನೆಲ್ಯಹುದಿಕೇರಿ-ಸಿದ್ದಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಹದಗೆಟ್ಟು ವರ್ಷಗಳೇ ಕಳೆದರೂ ಅಭಿವೃದ್ಧಿ ಮರೀಚಿಕೆಯಾಗಿದೆ. ಈ ರಸ್ತೆಯಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು, ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ಸಂಚರಿಸಲು ಜನರು ಹರಸಾಹಸಪಡುವಂತಾಗಿದೆ.

೧೫ ವರ್ಷಗಳ ಹಿಂದೆ ಕಾವೇರಿ ನದಿಗೆ ನೂತನ ಸೇತುವೆ ನಿರ್ಮಾಣ ಕಾರ್ಯ ನಡೆದಿತ್ತು. ಆ ಸಂದರ್ಭದಲ್ಲಿ ಅಗಲೀಕರಣ ಕಂಡು ದುರಸ್ತಿಯಾದ ರಸ್ತೆ, ನಂತರದಲ್ಲಿ ಯಾವುದೇ ಅಭಿವೃದ್ಧಿ ಕಂಡಿಲ್ಲ. ಪರಿಣಾಮ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸ್ಥಳೀಯರು ಸಮಸ್ಯೆ ಎದುರಿಸುತ್ತಿದ್ದಾರೆ.

ನಿತ್ಯ ನೂರಾರು ಕಾರ್ಮಿಕರು, ಶಾಲೆ ವಿದ್ಯಾರ್ಥಿಗಳು, ಸಾರ್ವಜನಿಕರು ಈ ರಸ್ತೆಯಲ್ಲೇ ಸಂಚರಿಸುತಿದ್ದು, ಖಾಸಗಿ ಅಥವಾ ಬಾಡಿಗೆ ವಾಹನಗಳನ್ನೇ ಅವಲಂಬಿಸಬೇಕಿದೆ. ಹದಗೆಟ್ಟ ರಸ್ತೆಯಿಂದಾಗಿ ತುರ್ತು ಸಂದರ್ಭಗಳಲ್ಲಿ ಬಾಡಿಗೆವಾಹನದವರು ಬಾರಲು ಹಿಂದೇಟು ಹಾಕುತ್ತಾರೆ. ಅಲ್ಲದೆ ದುಪ್ಪಟ್ಟು ಬಾಡಿಗೆ ಕೇಳುತ್ತಾರೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ರಸ್ತೆಗೆ ಸಂಪರ್ಕ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ನೀರು ರಸ್ತೆ ಮೇಲೆಯೇ ಹರಿಯುವುದರಿಂದ ಅಲ್ಲಲ್ಲಿ ಹೊಂಡಗಳು ನಿರ್ಮಾಣವಾಗಿ ಕೆರೆಯಂತಾಗಿದೆ. ರಸ್ತೆ ಬದಿಗಳಲ್ಲಿ ಗಿಡ-ಗಂಟಿಗಳು ಬೆಳೆದಿದ್ದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ವಾಹನಗಳು ಎದುರಾದರೆ ಜಾಗ ಬಿಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಭಾಗದ ಜನರು ಸಿದ್ದಾಪುರ, ನೆಲ್ಯಹುದಿಕೇರಿಯನ್ನು ಅವಲಂಬಿಸಿದ್ದಾರೆ. ಆದರೆ ಈ ರಸ್ತೆಯಲ್ಲಿ ವನ್ಯಜೀವಿಗಳ ಉಪಟಳವೂ ಇದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ರಾತ್ರಿಯ ಹೊತ್ತು ಭಯದಲ್ಲೇ ಸಂಚರಿಸಬೇಕಾಗಿದೆ. ಅನಾಹುತ ಸಂಭವಿಸುವ ಮುನ್ನ ಕೂಡಲೇ ರಸ್ತೆ ದುರಸ್ತಿ ಕಾರ್ಯ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

” ಗ್ರಾಮೀಣ ರಸ್ತೆ ಸಂಪೂರ್ಣವಾಗಿ ಹಳ್ಳಕೊಳ್ಳದಿಂದ ಕೂಡಿದ್ದು, ಈ ರಸ್ತೆಯಲ್ಲಿ ಬಸ್ ಸಂಚಾರ ಕೂಡ ಇಲ್ಲ. ಪ್ರತಿಯೊಂದು ಕೆಲಸ ಕಾರ್ಯಗಳಿಗೂ ಬಾಡಿಗೆ ವಾಹನವನ್ನೇ ಅವಲಂಬಿಸಿದ್ದೇವೆ. ರಸ್ತೆ ಅವ್ಯವಸ್ಥೆಯಿಂದ ಬಾಡಿಗೆ ವಾಹನ ಚಾಲಕರು ಗ್ರಾಮದತ್ತ ಬರಲು ಹಿಂದೇಟು ಹಾಕುತ್ತಿದ್ದಾರೆ. ಅಗತ್ಯ ಸಂದರ್ಭದಲ್ಲಿ ದುಬಾರಿ ಬಾಡಿಗೆ ನೀಡಿ ತೆರಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.”

-ಅನೀಶ್, ಕೂಡುಗದ್ದೆ ನಿವಾಸಿ

” ಹಲವು ವರ್ಷಗಳಿಂದಲೂ ರಸ್ತೆ ಅಭಿವೃದ್ಧಿ ಕಾಣದೆ ಇರುವುದರಿಂದ ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ನಿಂತು ಕೆರೆಗಳಂತಾಗಿದೆ. ಇದರಿಂದ ವಾಹನ ಸಂಚಾರಕ್ಕೆ ತೊಡಕುಂಟಾಗುತ್ತಿದೆ. ಶೀಘ್ರವಾಗಿ ರಸ್ತೆ ದುರಸ್ತಿ ಕಾರ್ಯ ನಡೆಸಬೇಕು.”

-ಸಿ.ಯು.ಮುಸ್ತಫ, ಸ್ಥಳೀಯ ನಿವಾಸಿ

” ಪಂಚಾಯಿತಿ ಆಡಳಿತ ಮಂಡಳಿಗೆ ರಸ್ತೆ ಅಭಿವೃದ್ಧಿಪಡಿಸಲು ಮನವಿ ಮಾಡಿದರೆ ಮಳೆಗಾಲ ಕಾರಣ ನೀಡಿ ನಿರ್ಲಕ್ಷ  ವಹಿಸಲಾಗುತ್ತಿದೆ. ಹದಗೆಟ್ಟ ರಸ್ತೆಯಲ್ಲಿ ಸಂಚಾರ ದುಸ್ತರವಾಗಿದೆ. ಆದ್ದರಿಂದ ರಸ್ತೆ ದುರಸ್ತಿಗೆ ಮುದಾಗಬೇಕು, ತಪ್ಪಿದಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು.”

-ರೂಪೇಶ್, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ

” ರಸ್ತೆ ಹದಗೆಟ್ಟಿರುವ ವಿಚಾರ ಗಮನಕ್ಕೆ ಬಂದಿದೆ. ಸಾರ್ವಜನಿಕರಿಂದ ಕೂಡ ರಸ್ತೆ ಕಾಮಗಾರಿಗೆ ಮಾಡಿಸುವಂತೆ ಮನವಿ ಬಂದಿದೆ. ಈ ಬಗ್ಗೆ ಚರ್ಚಿಸಲಾಗಿದ್ದು, ಈಗಾಗಲೇ ಕ್ರಿಯಾಯೊಜನೆ ರೂಪಿಸಲಾಗಿದೆ. ಶೀಘ್ರದಲ್ಲೆ ಕಾಮಗಾರಿ ಪ್ರಾರಂಭಿಸಲಾಗುವುದು.”

-ಪ್ರೇಮಗೋಪಾಲ್, ಗ್ರಾ.ಪಂ. ಅಧ್ಯಕ್ಷರು, ಸಿದ್ದಾಪುರ 

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

2 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

15 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

16 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

16 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

16 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

16 hours ago