Andolana originals

ಈ ರಸ್ತೆಯಲ್ಲಿ ಸಂಚರಿಸುವುದು ಬಹಳ ದುಸ್ತರ…

ತಿ.ನರಸೀಪುರ: ಕೆಸರಿನ ಗದ್ದೆಯಂತಾಗಿರುವ ಆಯಿಲ್ ಮಿಲ್ ರಸ್ತೆ ದುರಸ್ತಿ ಯಾವಾಗ?

ಎಂ.ನಾರಾಯಣ

ತಿ.ನರಸೀಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರತಿನಿಧಿಸುತ್ತಿರುವ ಪಟ್ಟಣದ ಈ ರಸ್ತೆ ಹಲವಾರು ವರ್ಷಗಳಿಂದ ದುರಸ್ತಿಯಾಗದೆ ನಿತ್ಯ ಸಾರ್ವಜನಿಕರು ತೊಂದರೆ ಎದುರಿಸುತ್ತಿದ್ದಾರೆ.

ಈ ರಸ್ತೆಯ ದುಸ್ಥಿತಿ ಬಗ್ಗೆ ಇಲ್ಲಿನ ಜನತೆ ಪುರಸಭೆಗೆ ನೂರಾರು ಬಾರಿ ಅಲೆದು, ಅರ್ಜಿಗಳನ್ನು ನೀಡಿದ್ದರೂ ದುರಸ್ತಿ ಮಾತ್ರ ಆಗಲಿಲ್ಲ. ಕಳೆದ 2 ವರ್ಷಗಳಿಂದಲೂ ಟೆಂಡರ್ ಆಗಿದೆ, ಸದ್ಯದಲ್ಲೇ ಕೆಲಸ ಆರಂಭವಾಗಲಿದೆ’ ಎಂಬ ಉತ್ತರ ಕೇಳಿ ಬರುತ್ತದೆ. ಆದರೆ ದುರಸ್ತಿ ಮಾತ್ರ ಕಾಣಲಿಲ್ಲ. ಮಳೆ ಬಂದರೆ ಈ ರಸ್ತೆಯಲ್ಲಿ ಸಂಚರಿಸುವುದೇ ಕಷ್ಟಕರವಾಗಿದೆ.

ಪಟ್ಟಣದ ಆಯಿಲ್ ಮಿಲ್ ರಸ್ತೆ ಕಳೆದ ಹಲವಾರು ವರ್ಷಗಳಿಂದ ದುರಸ್ತಿ ಕಾಣದೆ ಜನ ಆಕ್ರೋಶ ವ್ಯಕ್ತಪಡಿಸುತ್ತಲೇ ಸಂಚರಿಸುವಂತಾಗಿದೆ.

ಅದರಲ್ಲೂ ಮಳೆ ಬಿದ್ದರೆ ಈ ರಸ್ತೆ ಕೆಸರುಗದ್ದೆಯಂತಾಗುತ್ತದೆ. ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದಿರುವ ನಿದರ್ಶನಗಳಿವೆ. ರಸ್ತೆಯಲ್ಲಿ ಗುಂಡಿಗಳು ಬಿದ್ದು ವಾಹನ ಸಂಚಾರಕ್ಕೆ
ಅಡಚಣೆಯಾಗಿದೆ.

ಕೊಳ್ಳೇಗಾಲದ ಮಾರ್ಗವಾಗಿ ಪಟ್ಟಣಕ್ಕೆ ಬರುವ ಶಾಲಾ ಮಕ್ಕಳ ವಾಹನಗಳು, ಅಕ್ಕಿ ಗಿರಣಿಗೆ ಬರುವ ಟೆಂಪೊ, ಲಾರಿ ಹಾಗೂ ತಾಲ್ಲೂಕು ಕಚೇರಿ, ನಂಜನಗೂಡು ಮಾರ್ಗಗಳಿಗೆ ತೆರಳುವ ನೂರಾರು ವಾಹನಗಳು ಸಂಚರಿಸುವ ಜೊತೆಗೆ ಪ್ರತಿನಿತ್ಯ ಸಾಕಷ್ಟು ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತವೆ. ಕಾಲ್ನಡಿಗೆಯಲ್ಲಿ ಸಂಚರಿಸುವ ಜನ ಕೆಸರನ್ನೇ ತುಳಿದುಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಪುರಸಭೆಯ ಹಲವಾರು ಸಭೆಗಳಲ್ಲಿ ಈ ಬಗ್ಗೆ ಅನೇಕ ಬಾರಿ ಚರ್ಚೆಯಾಗಿದ್ದರೂ ಕಾಮಗಾರಿ ಮಾತ್ರ ಪ್ರಾರಂಭವಾಗದಿರುವುದು ವಿಷಾದನೀಯ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನವರು ಪುರಸಭೆಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲು ಸೂಚನೆ
ನೀಡಬೇಕೆಂಬುದು ಸ್ಥಳೀಯರ ಒತ್ತಾಯವಾಗಿದೆ.

ತಿ.ನರಸೀಪುರ ಪಟ್ಟಣದ ಆಯಿಲ್ ಮಿಲ್ ರಸ್ತೆ ಹಲವಾರು ವರ್ಷಗಳಿಂದ ಹದಗೆಟ್ಟಿದ್ದು, ಮಳೆ ಬಿದ್ದರೆ ಸಂಚರಿಸುವುದೇ ಕಷ್ಟಕರವಾಗಿದೆ. ಪಟ್ಟಣದ ಹಲವಾರು ರಸ್ತೆಗಳು ಕಾಂಕ್ರೀಟ್ ರಸ್ತೆಗಳಾಗಿವೆ. ಆದರೆ ಈ ರಸ್ತೆ ಮಾತ್ರ ಕಾಂಕ್ರೀಟ್ ಇರಲಿ, ಡಾಂಬರೂ ಕೂಡ ಕಾಣದಿರುವುದು ವಿಪರ್ಯಾಸ.

-ಮಹೇಶ್, ಸ್ಥಳೀಯ ನಿವಾಸಿ

ರಸ್ತೆ ಸಂಪೂರ್ಣ ಹಾಳಾಗಿದ್ದು, ಜನಪ್ರತಿನಿಧಿಗಳಾಗಲಿ, ಸ್ಥಳೀಯ ಪುರಸಭಾ ಸದಸ್ಯರಾಗಲಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಲು ಮುಂದಾಗಿಲ್ಲ. ಸಚಿವ ಡಾ.ಹೆಚ್. ಸಿ. ಮಹದೇವಪ್ಪನವರು ಈ ರಸ್ತೆಯ ಮಾರ್ಗವಾಗಿ ಸಂಚರಿಸುವಾಗ ಅವರಿಗೆ ಮನವಿ ಮಾಡಿ ಐದಾರು ತಿಂಗಳು ಕಳೆದರೂ ಕಾಮಗಾರಿ ಮಾತ್ರ ಆರಂಭವಾಗಿಲ್ಲ.

-ರವೀಂದ್ರ, ಪಟ್ಟಣ ನಿವಾಸಿ

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪನವರು ಪುರಸಭೆಗೆ 5 ಕೋಟಿ ರೂ. ಅನುದಾನ ನೀಡಿದ್ದು, ಅದರಲ್ಲಿ 85 ಲಕ್ಷ ರೂ. ವೆಚ್ಚದಲ್ಲಿ ಆಯಿಲ್ ಮಿಲ್ ರಸ್ತೆಯ ಕಾಮಗಾರಿ ನಡೆಸಲು ಅನುಮೋದನೆ ಪಡೆಯಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ.

-ನಾಗರಾಜು, ಇಂಜಿನಿಯರ್, ಪುರಸಭೆ, ತಿ.ನರಸೀಪುರ

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago