Andolana originals

ಈ ರಸ್ತೆಯಲ್ಲಿ ಸಂಚರಿಸುವುದು ಬಹಳ ದುಸ್ತರ…

ತಿ.ನರಸೀಪುರ: ಕೆಸರಿನ ಗದ್ದೆಯಂತಾಗಿರುವ ಆಯಿಲ್ ಮಿಲ್ ರಸ್ತೆ ದುರಸ್ತಿ ಯಾವಾಗ?

ಎಂ.ನಾರಾಯಣ

ತಿ.ನರಸೀಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರತಿನಿಧಿಸುತ್ತಿರುವ ಪಟ್ಟಣದ ಈ ರಸ್ತೆ ಹಲವಾರು ವರ್ಷಗಳಿಂದ ದುರಸ್ತಿಯಾಗದೆ ನಿತ್ಯ ಸಾರ್ವಜನಿಕರು ತೊಂದರೆ ಎದುರಿಸುತ್ತಿದ್ದಾರೆ.

ಈ ರಸ್ತೆಯ ದುಸ್ಥಿತಿ ಬಗ್ಗೆ ಇಲ್ಲಿನ ಜನತೆ ಪುರಸಭೆಗೆ ನೂರಾರು ಬಾರಿ ಅಲೆದು, ಅರ್ಜಿಗಳನ್ನು ನೀಡಿದ್ದರೂ ದುರಸ್ತಿ ಮಾತ್ರ ಆಗಲಿಲ್ಲ. ಕಳೆದ 2 ವರ್ಷಗಳಿಂದಲೂ ಟೆಂಡರ್ ಆಗಿದೆ, ಸದ್ಯದಲ್ಲೇ ಕೆಲಸ ಆರಂಭವಾಗಲಿದೆ’ ಎಂಬ ಉತ್ತರ ಕೇಳಿ ಬರುತ್ತದೆ. ಆದರೆ ದುರಸ್ತಿ ಮಾತ್ರ ಕಾಣಲಿಲ್ಲ. ಮಳೆ ಬಂದರೆ ಈ ರಸ್ತೆಯಲ್ಲಿ ಸಂಚರಿಸುವುದೇ ಕಷ್ಟಕರವಾಗಿದೆ.

ಪಟ್ಟಣದ ಆಯಿಲ್ ಮಿಲ್ ರಸ್ತೆ ಕಳೆದ ಹಲವಾರು ವರ್ಷಗಳಿಂದ ದುರಸ್ತಿ ಕಾಣದೆ ಜನ ಆಕ್ರೋಶ ವ್ಯಕ್ತಪಡಿಸುತ್ತಲೇ ಸಂಚರಿಸುವಂತಾಗಿದೆ.

ಅದರಲ್ಲೂ ಮಳೆ ಬಿದ್ದರೆ ಈ ರಸ್ತೆ ಕೆಸರುಗದ್ದೆಯಂತಾಗುತ್ತದೆ. ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದಿರುವ ನಿದರ್ಶನಗಳಿವೆ. ರಸ್ತೆಯಲ್ಲಿ ಗುಂಡಿಗಳು ಬಿದ್ದು ವಾಹನ ಸಂಚಾರಕ್ಕೆ
ಅಡಚಣೆಯಾಗಿದೆ.

ಕೊಳ್ಳೇಗಾಲದ ಮಾರ್ಗವಾಗಿ ಪಟ್ಟಣಕ್ಕೆ ಬರುವ ಶಾಲಾ ಮಕ್ಕಳ ವಾಹನಗಳು, ಅಕ್ಕಿ ಗಿರಣಿಗೆ ಬರುವ ಟೆಂಪೊ, ಲಾರಿ ಹಾಗೂ ತಾಲ್ಲೂಕು ಕಚೇರಿ, ನಂಜನಗೂಡು ಮಾರ್ಗಗಳಿಗೆ ತೆರಳುವ ನೂರಾರು ವಾಹನಗಳು ಸಂಚರಿಸುವ ಜೊತೆಗೆ ಪ್ರತಿನಿತ್ಯ ಸಾಕಷ್ಟು ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತವೆ. ಕಾಲ್ನಡಿಗೆಯಲ್ಲಿ ಸಂಚರಿಸುವ ಜನ ಕೆಸರನ್ನೇ ತುಳಿದುಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಪುರಸಭೆಯ ಹಲವಾರು ಸಭೆಗಳಲ್ಲಿ ಈ ಬಗ್ಗೆ ಅನೇಕ ಬಾರಿ ಚರ್ಚೆಯಾಗಿದ್ದರೂ ಕಾಮಗಾರಿ ಮಾತ್ರ ಪ್ರಾರಂಭವಾಗದಿರುವುದು ವಿಷಾದನೀಯ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನವರು ಪುರಸಭೆಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲು ಸೂಚನೆ
ನೀಡಬೇಕೆಂಬುದು ಸ್ಥಳೀಯರ ಒತ್ತಾಯವಾಗಿದೆ.

ತಿ.ನರಸೀಪುರ ಪಟ್ಟಣದ ಆಯಿಲ್ ಮಿಲ್ ರಸ್ತೆ ಹಲವಾರು ವರ್ಷಗಳಿಂದ ಹದಗೆಟ್ಟಿದ್ದು, ಮಳೆ ಬಿದ್ದರೆ ಸಂಚರಿಸುವುದೇ ಕಷ್ಟಕರವಾಗಿದೆ. ಪಟ್ಟಣದ ಹಲವಾರು ರಸ್ತೆಗಳು ಕಾಂಕ್ರೀಟ್ ರಸ್ತೆಗಳಾಗಿವೆ. ಆದರೆ ಈ ರಸ್ತೆ ಮಾತ್ರ ಕಾಂಕ್ರೀಟ್ ಇರಲಿ, ಡಾಂಬರೂ ಕೂಡ ಕಾಣದಿರುವುದು ವಿಪರ್ಯಾಸ.

-ಮಹೇಶ್, ಸ್ಥಳೀಯ ನಿವಾಸಿ

ರಸ್ತೆ ಸಂಪೂರ್ಣ ಹಾಳಾಗಿದ್ದು, ಜನಪ್ರತಿನಿಧಿಗಳಾಗಲಿ, ಸ್ಥಳೀಯ ಪುರಸಭಾ ಸದಸ್ಯರಾಗಲಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಲು ಮುಂದಾಗಿಲ್ಲ. ಸಚಿವ ಡಾ.ಹೆಚ್. ಸಿ. ಮಹದೇವಪ್ಪನವರು ಈ ರಸ್ತೆಯ ಮಾರ್ಗವಾಗಿ ಸಂಚರಿಸುವಾಗ ಅವರಿಗೆ ಮನವಿ ಮಾಡಿ ಐದಾರು ತಿಂಗಳು ಕಳೆದರೂ ಕಾಮಗಾರಿ ಮಾತ್ರ ಆರಂಭವಾಗಿಲ್ಲ.

-ರವೀಂದ್ರ, ಪಟ್ಟಣ ನಿವಾಸಿ

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪನವರು ಪುರಸಭೆಗೆ 5 ಕೋಟಿ ರೂ. ಅನುದಾನ ನೀಡಿದ್ದು, ಅದರಲ್ಲಿ 85 ಲಕ್ಷ ರೂ. ವೆಚ್ಚದಲ್ಲಿ ಆಯಿಲ್ ಮಿಲ್ ರಸ್ತೆಯ ಕಾಮಗಾರಿ ನಡೆಸಲು ಅನುಮೋದನೆ ಪಡೆಯಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ.

-ನಾಗರಾಜು, ಇಂಜಿನಿಯರ್, ಪುರಸಭೆ, ತಿ.ನರಸೀಪುರ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago