Andolana originals

ಮಾಂದಲಪಟ್ಟಿಯಲ್ಲಿ ಮುಂದುವರಿದ ರಸ್ತೆ ದುರಸ್ತಿ ಕಾರ್ಯ

ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ

ನವೀನ್ ಡಿಸೋಜ

ಮಡಿಕೇರಿ : ಕೊಡಗಿನ ಪ್ರಸಿದ್ಧ ಪ್ರವಾಸಿತಾಣ ಮಾಂದಲಪಟ್ಟಿಯಲ್ಲಿ ರಸ್ತೆ ದುರಸ್ತಿ ಕೆಲಸ ಮುಂದುವರಿದಿದ್ದು, ಪ್ರವಾಸಿಗರಿಗೆ ಪ್ರವೇಶ ಸಿಗುವುದು ಇನ್ನಷ್ಟು ತಡವಾಗಲಿದೆ.

ಮಡಿಕೇರಿಯ ಮಾಂದಲಪಟ್ಟಿ ಪ್ರವಾಸಿ ತಾಣಕ್ಕೆ ಒಂದು ತಿಂಗಳಿನಿಂದ ತಾತ್ಕಾಲಿಕವಾಗಿ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾ ಗಿದ್ದು, ರಸ್ತೆ ದುರಸ್ತಿ ಕಾಮಗಾರಿ ನಡೆಸಲಾಗುತ್ತಿದೆ. ಕಾಮಗಾರಿ ಮುಗಿಯಲು ಇನ್ನೂ 10 ರಿಂದ 15 ದಿನಗಳ ಕಾಲಾವಕಾಶ ಬೇಕಾಗಲಿದ್ದು, ಅಲ್ಲಿಯವರೆಗೆ ಮುಗಿಲುಪೇಟೆ ಬಂದ್ ಆಗಿರಲಿದೆ.

ಫೆ.16ರಿಂದ ಮಾಂದಲಪಟ್ಟಿ ಒಳಗಿನ ರಸ್ತೆ ದುರಸ್ತಿ ಮತ್ತು ಕಲ್ಲು ಹಾಸು ಅಳವಡಿಕೆಗಾಗಿ ಪ್ರವಾಸಿಗರಿಗೆ ಪ್ರವೇಶವನು ನಿರ್ಬಂಧಿಸಲಾಗಿದೆ. ಫೆ.28ಕ್ಕೆ ಕೆಲಸ ಮುಗಿಸಬೇಕೆಂದು ಅಂದಾಜಿಸಿ ಅಲ್ಲಿಯವರೆಗೆ ಪ್ರವೇಶವನ್ನು ನಿರ್ಬಂಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿತ್ತು. ಆದರೆ ಕಾಮಗಾರಿ ಆರಂಭವಾಗಿ ಒಂದು ತಿಂಗಳಾಗಿದ್ದು, ಇನ್ನೂ ಮುಗಿಯದ ಹಿನ್ನೆಲೆಯಲ್ಲಿ ನಿರ್ಬಂಧವನ್ನು ಮುಂದುವರಿಸಲಾಗಿದೆ. ಕೆಲಸ ಮುಗಿ ಯುವುದು ಇನ್ನೂ ತಡವಾಗಲಿದ್ದು ಏಪ್ರಿಲ್ ಮೊದಲ ವಾರವೂ ಮುಗಿಲುಪೇಟೆ ಪ್ರವೇಶ ದುರ್ಲಭವಾಗಲಿದೆ.

ಮಾಂದಲಪಟ್ಟಿ ಪ್ರವಾಸಿತಾಣಕ್ಕೆ ಕೊಡಗಿಗೆ ಬರುವ ಬಹುತೇಕ ಪ್ರಕೃತಿ ಪ್ರಿಯರು ಭೇಟಿ ನೀಡಲು ಬಯಸುತ್ತಾರೆ. ಆದರೆ ಈಗ ಈ ತಾಣ ಬಂದ್ ಆಗಿರುವುದು ಪ್ರವಾಸೋದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಇದೀಗ ಮಕ್ಕಳಿಗೆ ಪರೀಕ್ಷೆಯ ಸಮಯವಾಗಿದ್ದು, ಟೂರಿಸಂಗೆ ಇದು ಅನ್ ಸೀಜನ್, ಈ ತಿಂಗಳ ಅಂತ್ಯಕ್ಕೆ ಪರೀಕ್ಷೆಗಳು ಬಹುತೇಕ ಮುಕ್ತಾಯವಾಗಲಿದ್ದು, ಬೇಸಿಗೆ ಪ್ರವಾಸೋದ್ಯಮ ಮತ್ತೆ ತೆರೆದು ಕೊಳ್ಳಲಿದೆ. ಈ ಸಮಯಕ್ಕೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣದ ಆಕರ್ಷಣೆಯೇ ಜನರು ನೋಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಪ್ರವಾಸಿಗರು ಕೊಡಗಿಗೆ ಬರಲು ಹಿಂದೇಟು ಹಾಕುವ ಸಾಧ್ಯತೆ ಇದೆ.

ಇತ್ತೀಚೆಗೆ ಮಾಂದಲಪಟ್ಟಿಗೆ ಆಗಮಿಸಿದ್ದ ಪ್ರವಾಸಿಗರಿಂದ ಜೀಪು ಚಾಲಕನೋರ್ವ ಹೆಚ್ಚಿನ ಹಣ ಪಡೆದ ಘಟನೆ ಬೆಳಕಿಗೆ ಬಂದ ನಂತರ ನಡೆದ ಬೆಳವಣಿಗೆಗಳಲ್ಲಿ ಅಲ್ಲಿನ ರಸ್ತೆ ದುರಸ್ತಿ ಪಡಿಸುವುದೂ ಒಂದಾಗಿದೆ. ಸದ್ಯ ಪ್ರಗತಿ ಯಲ್ಲಿರುವ ಕಾಮಗಾರಿ ಮುಕ್ತಾಯವಾದರೂ, ಮಾಂದಲಪಟ್ಟಿಗೆ ಪ್ರವೇಶ ಸಮಯ ಬದಲಾಗುವ ಸಾಧ್ಯತೆ ಇದೆ. ಪ್ರವಾಸಿಗರ ಅನುಕೂಲಕ್ಕಾಗಿ ಇಲ್ಲಿ ಇಂತಹ ಬದಲಾವಣೆಗಳ ಅಗತ್ಯವೂ ಇದೆ. ಆದರೆ ಮಾಂದಲಪಟ್ಟಿ ಬಂದ್ ಆಗಿರುವುದರಿಂದ ನ್ಯಾಯಯುತವಾಗಿ ಜೀಪ್ ಬಾಡಿಗೆ ಕೆಲಸ ಮಾಡುತ್ತಿದ್ದ ನೂರಾರು ಜೀಪ್ ಚಾಲಕರಿಗೆ ತೊಂದರೆಯಾಗಿದೆ.

ನಂದಿ ಮೊಟ್ಟೆ, ಮಾಂದಲಪಟ್ಟಿ ಮುಂಭಾಗದಲ್ಲಿ ಪ್ರವಾಸಿಗರಿಲ್ಲದೇ ಬಿಕೋ ಎನ್ನುತ್ತಿದೆ. ಇನ್ನೇನು ಪ್ರವಾಸಿಗರು ಬಂದು ಪ್ರವಾಸೋದ್ಯಮ ಮತ್ತೆ ಲಯಕ್ಕೆ ಮರಳ ಬೇಕೆನ್ನುವಷ್ಟರಲ್ಲಿ ಮಾಂದಲಪಟ್ಟಿಗೆ ಪ್ರವೇಶ ನಿರ್ಬಂಧ ಮುಂದುವರಿದಿರುವುದು ಜೀಪು ಚಾಲಕರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಲಿದೆ.

ದುರಸ್ತಿ ಕಾರ್ಯ ತಡವಾಗುತ್ತಿರುವುದೇಕೆ?
ಮಾಂದಲಪಟ್ಟಿಯಲ್ಲಿ ಈಗಿರುವ ಕಚ್ಚಾ ರಸ್ತೆಯಲ್ಲಿನ ಬೃಹತ್ ಕಲ್ಲುಗಳನ್ನು ತೆಗೆದು ಕಲ್ಲುಹಾಸು ಅಳವಡಿಸಬೇಕಿದೆ. ಅರಣ್ಯ ಮತ್ತು ಸೂಕ್ಷ್ಮ ಪ್ರದೇಶವಾಗಿರುವುದರಿಂದ ದೊಡ್ಡ ಯಂತ್ರಗಳನ್ನು ಬಳಸಿ ಕೆಲಸ ಮಾಡುವುದು ಅಸಾಧ್ಯ. ಬಹುತೇಕ ಕೆಲಸ ಕಾರ್ಮಿಕರಿಂದಲೇ ಆಗಬೇಕಿದೆ. ಈಗಿನ್ನೂ ರಸ್ತೆಯ ನಡುವಿನ ಕಾಡು ಕಲ್ಲುಗಳ ತೆರವು ಕೆಲಸ ನಡೆಯುತ್ತಿದ್ದು, ಇನ್ನಷ್ಟೇ ಕಲ್ಲು ಹಾಸು ಹಾಕಬೇಕಿದೆ. ಮ್ಯಾನುವಲ್ ಆಗಿಯೇ ಕೆಲಸ ಮಾಡುತ್ತಿರುವುದರಿಂದ ಕಾಮಗಾರಿ ತಡವಾಗುತ್ತಿದೆ. ಕೆಲಸ ಪೂರ್ಣಗೊಳ್ಳಲು ಇನೂ 10-15 ದಿನಗಳಾದರೂ ಬೇಕಾಗಲಿದೆ.

ಇದು ಮಕ್ಕಳಿಗೆ ಪರೀಕ್ಷೆ ಸಮಯ, ಪ್ರವಾಸಿಗರ ಆಗಮನ ಕಡಿಮೆ ಇರುವ ಹಿನ್ನೆಲೆಯಲ್ಲಿ ಈಗ ಕಾಮಗಾರಿ ನಡೆಸಲು ಯೋಜಿಸಲಾಯಿತು. ಅದರಂತೆ ಕೆಲಸ ನಡೆಯುತ್ತಿದೆ. ಬಹುತೇಕ ಮ್ಯಾನುವಲ್ ಕೆಲಸ ಆಗಬೇಕಿರುವುದರಿಂದ ತಡವಾಗುತ್ತಿದೆ. ಇನೂ 10 ರಿಂದ 15 ದಿನಗಳಲ್ಲಿ ಕಾಮಗಾರಿ ಮುಗಿಯುವ ನಿರೀಕ್ಷೆಯಿದ್ದು, ಕಾಮಗಾರಿ ಮುಗಿದ ಕೂಡಲೇ ಪ್ರವಾಸಿಗರ ಪ್ರವೇಶಕ್ಕೆ ಮುಕ್ತಗೊಳಿಸಲಾಗುವುದು.
-ಅಭಿಷೇಕ್, ಡಿಸಿಎಫ್, ಮಡಿಕೇರಿ ಅರಣ್ಯ ವಲಯ

ಆಂದೋಲನ ಡೆಸ್ಕ್

Recent Posts

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

7 mins ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

38 mins ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

56 mins ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

2 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

4 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

6 hours ago