Andolana originals

ರಸ್ತೆ ಬದಿ ಮಾಂಸ ಮಾರುಕಟ್ಟೆಯಲ್ಲಿ ಶುಚಿತ್ವ ಇಲ್ಲದೆ ಕಿರಿಕಿರಿ

ತಿ.ನರಸೀಪುರ: ಪುರಸಭೆಯಿಂದ ನಿರ್ಮಿಸಿರುವ ಮಳಿಗೆಗಳಿಗೆ ಸ್ಥಳಾಂತರಿಸಲು ಒತ್ತಾಯ

ಎಂ.ನಾರಾಯಣ

ತಿ.ನರಸೀಪುರ: ಸ್ವಚ್ಛತೆ ಮರೀಚಿಕೆಯಾಗಿರುವ ಪಟ್ಟಣದ ಮಾಂಸ ಮಾರುಕಟ್ಟೆಯಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ತೀವ್ರ ತೊಂದರೆ ಅನುಭವಿಸುತ್ತಿದ್ದು ಮಾರುಕಟ್ಟೆಯನ್ನು ಸ್ಥಳಾಂತರ ಮಾಡಬೇಕೆಂಬ ಕೂಗು ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ಪಟ್ಟಣದ ಹೃದಯಭಾಗದಲ್ಲಿರುವ ಲಿಂಕ್ ರಸ್ತೆಗೆ ಹೊಂದಿಕೊಂಡಂತೆ ಇರುವ ಮಾಂಸದ ಮಾರುಕಟ್ಟೆಯಲ್ಲಿ ಶುಚಿತ್ವ ಇಲ್ಲದೇ ಗದ್ದು ನಾರುತ್ತಿದೆ. ವಿನಾಯಕ ಕಾಲೋನಿಗೆ ರಸ್ತೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ಪಕ್ಕದಲ್ಲೇ ಪೆಟ್ಟಿಗೆ ಅಂಗಡಿಗಳಲ್ಲಿ ಮಾಂಸ ಮಾರಾಟ ಮಾಡುತ್ತಿದ್ದು ಸಾರ್ವಜನಿಕರು, ಶಾಲಾ ಮಕ್ಕಳು, ಕಾಲೋನಿಯ ಸಾರ್ವಜನಿಕರು ತೀವ್ರ ತೊಂದರೆಗೆ ಒಳಗಾಗಿದ್ದಾರೆ.

ಮಂಗಳವಾರ, ಶುಕ್ರವಾರ ಹಾಗೂ ಭಾನುವಾರ ಮಾಂಸ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವುದರಿಂದ ದ್ವಿಚಕ್ರ ವಾಹನಗಳನ್ನು ರಸ್ತೆ ಬದಿಯಲ್ಲೇ ನಿಲ್ಲಿಸುವುದರಿಂದ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗಿದೆ.

ಅಲ್ಲದೇ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿನಾಯಕ ಕಾಲೋನಿಯಲ್ಲಿದ್ದು, ಸಂಚರಿಸುವಾಗ ಕಿರಿಕಿರಿ ಅನುಭವಿಸಬೇಕಾಗಿದೆ.

ಮಾಂಸ ಮಾರುಕಟ್ಟೆಯಲ್ಲಿ ಶುಚಿತ್ವದ ಕೊರತೆ ಉಂಟಾಗಿದ್ದು ಮೇಕೆ ಮರಿಗಳನ್ನು ಅಲ್ಲೇ ಕತ್ತರಿಸಿ ಅದರ ತ್ಯಾಜ್ಯಗಳನ್ನು ಹಾಗೂ ಶುಚಿಗೊಳಿಸಿದ ನೀರನ್ನು ರಸ್ತೆಗೆ ಸುರಿಯುತ್ತಿರುವುದರಿಂದ ಸಾರ್ವಜನಿಕರಿಗೆ ಓಡಾಡಲು ಕಿರಿಕಿರಿಯಾಗಿದೆ. ಅಲ್ಲದೆ, ಮೇಕೆಗಳನ್ನು ಕತ್ತರಿಸಿ ಕಂಡ ಕಂಡಲ್ಲಿ ತ್ಯಾಜ್ಯ ಸುರಿಯುತ್ತಿರುವುದರಿಂದ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.

ಮಳಿಗೆಗಳಿಗೆ ಹೋಗಲು ನಿರಾಕರಣೆ: ಪುರಸಭೆ ವತಿಯಿಂದ ಅನೇಕ ವರ್ಷಗಳ ಹಿಂದೆಯೇ ತರಕಾರಿ ಮಾರುಕಟ್ಟೆಗಾಗಿ 70 ಲಕ್ಷ ರೂ.ವೆಚ್ಚದಲ್ಲಿ 32 ಮಳಿಗೆಗಳನ್ನು ನಿರ್ಮಿಸಲಾಗಿದ್ದು, ತರಕಾರಿ ಮಾರಾಟಗಾರರು ಮೂಲ ಸೌಕರ್ಯ ಇಲ್ಲದ ನೆಪ ಹೇಳಿ ಮಳಿಗೆಗಳಿಗೆ ಹೋಗಲು ನಿರಾಕರಿಸು ತಿರುವುದರಿಂದ ಮಳಿಗೆಗಳು ನಿರುಪಯುಕ್ತ ವಾಗಿವೆ. ಈಗ ಪುರಸಭೆಯವರು ಮಾಂಸ ಮಾರಾಟಗಾರರನ್ನು ಹೋಗುವಂತೆ ಹೇಳುತ್ತಿದ್ದರೂ ಅವರೂ ಕೂಡ ಮೂಲಸೌಕರ್ಯದ ನೆಪ ಹೇಳುತ್ತಿದ್ದಾರೆ. ತರಕಾರಿ ಮಾರಾಟಗಾರರು ಹಾಗೂ ಮಾರಾಟಗಾರರು ಮಳಿಗೆಗಳಿಗೆ ಹೋಗಲು ನಿರಾಕರಿಸುತ್ತಿರುವುದರಿಂದ 10 ವರ್ಷಗಳ ಹಿಂದೆ 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಳಿಗೆ ನಿರುಪಯುಕ್ತವಾಗಿದೆ.

10 ವರ್ಷಗಳ ಹಿಂದೆ 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ತರಕಾರಿ ಮಾರುಕಟ್ಟೆ ಮಳಿಗೆ ನಿರುಪಯುಕ್ತವಾಗಿದ್ದು, ಪುರಸಭೆಗೆ ಲಕ್ಷಾಂತರ ರೂ.ಗಳ ಆದಾಯ ನಷ್ಟವಾಗಿದೆ. ಅಲ್ಲದೆ, ಮಳಿಗೆಗಳು ಅನೈತಿಕ ಚಟುವಟಿಕೆಗಳ ತಾಣವಾಗಿವೆ. ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡುವಂತಿರುವ ತರಕಾರಿ ಮಾರುಕಟ್ಟೆಯನ್ನು ಸ್ಥಳಾಂತರಿಸಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಿ ಪುರಸಭೆಗೆ ಆಗುತ್ತಿರುವ ಆರ್ಥಿಕ ನಷ್ಟವನ್ನು ತಪ್ಪಿಸುವ ನಿಟ್ಟಿನಲ್ಲಿ ಪುರಸಭೆ ಅಧಿಕಾರಿಗಳು
ಮುಂದಾಗಬೇಕಿದೆ.
-ರಾಜೇಶ್ವರಿ ರಾಘವೇಂದ್ರ, ಪುರಸಭೆ ಸದಸ್ಯೆ

ಸೌಲಭ್ಯ ಕಲ್ಪಿಸಿದ ನಂತರ ಸ್ಥಳಾಂತರ
ತರಕಾರಿ ಮಾರುಕಟ್ಟೆಗಾಗಿ ನಿರ್ಮಿಸಲಾದ ಮಳಿಗೆಗಳು ಸಮರ್ಪಕವಾಗಿ ನಿರ್ಮಾಣವಾಗಿಲ್ಲ. ಈಗ ಮಟನ್ ಮಾರ್ಕೆಟ್‌ಗೆ ಟೆಂಡರ್ ಕರೆಯಲಾಗಿದೆ. ತರಕಾರಿ ಮಾರುಕಟ್ಟೆ ಮಾಡುವ ಉದ್ದೇಶದಿಂದ ನಿರ್ಮಿಸಲಾದ ಮಳಿಗೆಗಳಿಗೆ ಮಾಂಸ ಮಾರಾಟಗಾರರನ್ನು ಸ್ಥಳಾಂತರಿಸಲು ಅವರಿಗೆ ಸಮರ್ಪಕವಾದ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕಾಗುತ್ತದೆ. ಇದಕ್ಕಾಗಿ 10 ಲಕ್ಷ ರೂ.ಗಳನ್ನು ಮೀಸಲಿರಿಸಲಾಗಿದೆ. ಈಗಲೇ ಮಾಂಸ ಮಾರಾಟಗಾರರನ್ನು ಸ್ಥಳಾಂತರಿಸಿದರೆ ಮತ್ತೆ ಸಮಸ್ಯೆ ಎದುರಾಗುವುದರಿಂದ ಮಾಂಸ ಮಾರಾಟಕ್ಕೆ ಬೇಕಾದ ಅನುಕೂಲತೆಗಳಾದ ಗೋಡೆಗೆ ಟೈಲ್ಸ್, ಸಮರ್ಪಕ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್ ಸೌಲಭ್ಯ ಕಲ್ಪಿಸಿ, ಆಧುನಿಕವಾಗಿ ಮಾರ್ಪಡಿಸಿ ನಂತರ ಅವರನ್ನು ಸ್ಥಳಾಂತರಿಸಲಾಗುತ್ತದೆ.
ಬಿ.ಕೆ.ವಸಂತ ಕುಮಾರಿ, ಪುರಸಭೆ ಮುಖ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

13 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

13 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

15 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

15 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

15 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

15 hours ago