Andolana originals

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌

ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ ಸಂಚಕಾರ ಎದುರಾಗಿದೆ. ಬನ್ನಿಕುಪ್ಪೆ ಗೇಟ್‌ನ ಸುಮಾರು ೫೦೦ ಮೀಟರ್ ಉದ್ದಕ್ಕೂ ರಸ್ತೆಯ ಎರಡೂ ಬದಿಯಲ್ಲಿ ಅವ್ಯಾಹತವಾಗಿ ಅವರೆ ಕಾಯಿ ವ್ಯಾಪಾರ ನಡೆಯುತ್ತಿದ್ದು, ಟ್ರಾಫಿಕ್ ಜಾಮ್ ಆಗುತ್ತಿದೆ.

ಏನಾದರೂ ಅವಘಡ ಸಂಭವಿಸಿದಲ್ಲಿ ಆಗುವ ಅನಾಹುತಕ್ಕೆ ಯಾರು ಹೊಣೆ? ಹೆದ್ದಾರಿಯಲ್ಲೇ ವಹಿವಾಟು ನಡೆಯುತ್ತಿದ್ದರೂ ಪೊಲೀಸ್, ಆರ್‌ಟಿಒ ಹಾಗೂ ಗ್ರಾ. ಪಂ. ನವರು ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಅವರೆಕಾಯಿ ಮಾರಾಟಕ್ಕಾಗಿ ಎಪಿಎಂಸಿ ವತಿಯಿಂದ ಹಲವು ವರ್ಷಗಳ ಹಿಂದೆ ಹೆದ್ದಾರಿಯ ಬದಿಯಲ್ಲೇ ಮಾರುಕಟ್ಟೆ ನಿರ್ಮಿಸಿ ದ್ದರೂ ಸ್ಥಳ ಚಿಕ್ಕದೆಂಬ ಕಾರಣಕ್ಕೆ ಅಲ್ಲಿ ಮಾರುಕಟ್ಟೆ ನಡೆಯುತ್ತಿಲ್ಲ.

ಇದು ಪ್ರತಿವರ್ಷದ ಗೋಳು. ಮಾರುಕಟ್ಟೆಯನ್ನು ಸ್ಥಳಾಂತರಿಸುತ್ತೇವೆ ಎಂದು ಬನ್ನಿಕುಪ್ಪೆ ಗ್ರಾ. ಪಂ. ಹೇಳುತ್ತಲೇ ಬಂದಿದ್ದರೂ ಈವರೆಗೂ ಆಗಿಲ್ಲ. ಆದರೆ ಮಾರಾಟಗಾರರಿಂದ ಶುಲ್ಕ ವಸೂಲಿಗಾಗಿ ಟೆಂಡರ್ ಮೂಲಕ ಲಕ್ಷ ರೂ. ಗೆ ಹರಾಜು ಹಾಕಿದೆ. ಬೆಳಿಗ್ಗೆ ೬ರಿಂದ ಮಧ್ಯಾಹ್ನ ೧ರವರೆಗೆ ರಸ್ತೆಯಲ್ಲೇ ಜೋರು ವ್ಯಾಪಾರ ನಡೆಯುತ್ತದೆ. ರಸ್ತೆ ಬದಿಯಲ್ಲೇ ವ್ಯಾಪಾರಸ್ಥರು ಮೂಟೆ ತುಂಬುವುದು, ವಾಹನಕ್ಕೆ ಏರಿಸುವುದರಿಂದ ಜಾಗ ಸಾಲದೆ ರಸ್ತೆಯಲ್ಲಿ ನಿಂತು ರೈತರು ಮಾರಾಟ ಮಾಡಬೇಕಾಗಿದೆ. ಹೆದ್ದಾರಿಯಾಗಿದ್ದರಿಂದ ನಿಮಿಷಕ್ಕೆ ನೂರಾರು ವಾಹನಗಳು ಸಂಚರಿಸುತ್ತವೆ.

ಕನಿಷ್ಠ ೧೦ ನಿಮಿಷಕ್ಕೆ ಒಮ್ಮೆಯಾದರೂ ವಾಹನಗಳ ದಟ್ಟಣೆ ಆಗುತ್ತಿದೆ. ಇದರಿಂದ ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್ ವಾಹನಗಳಿಗೂ ಅಡಚಣೆಯಾಗುತ್ತಿದೆ. ಸಣ್ಣ-ಪುಟ್ಟ ಅಪಘಾತಗಳೂ ನಡೆಯುತ್ತಿವೆ. ಬನ್ನಿಕುಪ್ಪೆ ಸುತ್ತಮುತ್ತಲಿನ ೫೦ಕ್ಕೂ ಹೆಚ್ಚು ಗ್ರಾಮಗಳ ರೈತರು ಅವರೆಕಾಯಿ ಮೂಟೆಯನ್ನು ತಮ್ಮ ಬೈಕ್‌ಗಳಲ್ಲೇ ಇಲ್ಲಿನ ಮಾರುಕಟ್ಟೆಗೆ ತಂದು ರಸ್ತೆಯಲ್ಲೇ ವ್ಯಾಪಾರ ಕುದುರಿಸುತ್ತಾರೆ. ಒಮ್ಮೊಮ್ಮೆ ಮೂಟೆ ಹೊತ್ತ ೫೦೦ಕ್ಕೂ ಹೆಚ್ಚು ಬೈಕ್ ಗಳು ಇಡೀ ರಸ್ತೆಯನ್ನೇ ಆವರಿಸಿಕೊಂಡಿರುತ್ತವೆ. ಅಲ್ಲದೆ ಅವರೆಕಾಯಿಯನ್ನು ಖರೀದಿಸುವ ಭರದಲ್ಲಿ ಓಡಾಡುವ ಪ್ರಯಾಣಿಕರು ಕೂಡ ರಸ್ತೆಯಲ್ಲೇ ವಾಹನ ನಿಲ್ಲಿಸುತ್ತಾರೆ. ಅವರೆಕಾಯಿ ಯೊಂದಿಗೆ ಇತರೆ ತರಕಾರಿಗಳ ವ್ಯಾಪಾರ ಕೂಡ ಇಲ್ಲಿ ನಡೆಯುತ್ತದೆ. ಹೀಗಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ.

ಅಕ್ಕ-ಪಕ್ಕದ ಗ್ರಾಮಗಳಿಂದ ರೈತರು ಬೈಕ್‌ಗಳಲ್ಲಿ ಅವರೆಕಾಯಿ ಮೂಟೆ ತಂದು, ರಸ್ತೆಯಲ್ಲೇ ವ್ಯಾಪಾರ ಮಾಡುತ್ತಾರೆ. ಇದು ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ. -ಸಂತೋಷ್, ರೈತ, ದೊಡ್ಡೇಗೌಡನ ಕೊಪ್ಪಲು.

ಬನ್ನಿಕುಪ್ಪೆ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾರುಕಟ್ಟೆ ನಿರ್ಮಿಸಿದ್ದರೂ ಜಾಗ ಸಾಲುತ್ತಿಲ್ಲ. ಬೇರೆಡೆ ಸ್ಥಳವೂ ಇಲ್ಲ. ಹೀಗಾಗಿ ಹೆದ್ದಾರಿಯಲ್ಲೇ ಅವರೆ ಆವಕ ಅನಿವಾರ್ಯವಾಗಿ ನಡೆಯುತ್ತಿದ್ದು, ಸಂಚಾರ ನಿಯಂತ್ರಣಕ್ಕಾಗಿ ಪೊಲೀಸರನ್ನು ಕೋರಲಾಗಿದೆ. ಮುಂದೆ ಜಾಗ ಸಿಕ್ಕಲ್ಲಿ ಅವರೆಕಾಯಿ ಮಾರಾಟಕ್ಕಾಗಿ ಮಾರುಕಟ್ಟೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. -ಜಿ. ಡಿ. ಹರೀಶ್ ಗೌಡ, ಶಾಸಕ

andolana

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

4 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

4 hours ago