Andolana originals

ರಸ್ತೆ ಕಾಮಗಾರಿ ವಿಳಂಬ; ದೂಳು ಕುಡಿಯುವುದು ಅನಿವಾರ್ಯ

ಮಂಜು ಕೋಟೆ

ಸಾಗರೆ-ಬಿದರಹಳ್ಳಿ, ಬೀರಂಬಳ್ಳಿ-ಎನ್.ಬೇಗೂರು ರಸ್ತೆಗಳಲ್ಲಿ ಸಂಚರಿಸುವವರಿಗೆ ಅನಾರೋಗ್ಯ 

ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯ ಸಮೀಪದ ಮತ್ತು ಗಡಿಭಾಗದ ಮುಖ್ಯರಸ್ತೆಗಳ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರು, ಪ್ರಯಾಣಿಕರು ಅನಾರೋಗ್ಯಕ್ಕೀಡಾಗಿ ತೊಂದರೆ ಅನುಭವಿಸುತ್ತಿದ್ದಾರೆ.

ತಾಲ್ಲೂಕಿನ ಸಾಗರೆ-ಬಿದರಹಳ್ಳಿ ಮತ್ತು ಬೀರಂಬಳ್ಳಿ-ಎನ್.ಬೇಗೂರು ರಸ್ತೆಗಳು ಹದಗೆಟ್ಟಿದ್ದು, ಈ ರಸ್ತೆಯಲ್ಲಿ ಏಳುವ ದೂಳಿನಿಂದಾಗಿ ಸಂಚರಿಸುವವರ, ಸ್ಥಳೀಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.

೨ ತಿಂಗಳುಗಳ ಹಿಂದೆ ರಸ್ತೆ ದುರಸ್ತಿ ಕಾಮಗಾರಿಗೆ ಶಾಸಕರಾದ ಅನಿಲ್ ಚಿಕ್ಕಮಾದು ಅವರು ಭೂಮಿ ಪೂಜೆ ನೆರವೇರಿಸಿದ್ದರು. ನಂತರ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಾಮಗಾರಿ ನಡೆಸಲು ರಸ್ತೆಯನ್ನು ಅಗೆದು ಹಾಕಿದ್ದಾರೆ. ಆದರೆ, ರಸ್ತೆ ದುರಸ್ತಿ ಕಾಮಗಾರಿಯನ್ನು ವೇಗವಾಗಿ ನಡೆಸದೆ ಮತ್ತು ರಸ್ತೆಗಳಿಗೆ ನೀರು ಸಿಂಪಡಿಸದೆ ಗುತ್ತಿಗೆದಾರರು ನಿರ್ಲಕ್ಷಿಸುತ್ತಿರುವುದರಿಂದ ಪ್ರತಿನಿತ್ಯ ಓಡಾಡುತ್ತಿ ರುವ ವಾಹನಗಳ ಸವಾರರು ಮತ್ತು ಸಾರ್ವಜನಿ ಕರು ದೂಳಿನಿಂದ ನರಕ ಯಾತನೆ ಪಡುತ್ತಿದ್ದಾರೆ.

ಇದಲ್ಲದೆ ಈ ರಸ್ತೆಯ ಮೂಲಕ ಕಬಿನಿ ಜಲಾಶಯಕ್ಕೆ ಹಾಗೂ ಭೀಮನ ಕೊಲ್ಲಿ ಮಾದೇಶ್ವರ ದೇವಸ್ಥಾನಕ್ಕೆ, ಅನೇಕ ರೆಸಾರ್ಟ್‌ಗಳಿಗೆ ಪ್ರತಿನಿತ್ಯ ನೂರಾರು ಜನ ಸಂಚರಿಸುತ್ತಾರೆ. ಜೊತೆಗೆ ರೈತರು, ವಿದ್ಯಾರ್ಥಿಗಳು, ವೃದ್ಧರು, ರೋಗಿಗಳು ಈ ರಸ್ತೆಯ ಮೂಲಕ ತಾಲ್ಲೂಕು ಕೇಂದ್ರವಾದ ಕೋಟೆ ಪಟ್ಟಣಕ್ಕೆ ಆಗಮಿಸುತ್ತಾರೆ. ಅವರೆಲ್ಲರೂ ದೂಳಿನಸಮಸ್ಯೆಯಿಂದ ಪರದಾಡುವಂತಾಗಿದ್ದು, ಅಧಿಕಾರಿಗಳು ಗುತ್ತಿಗೆದಾರರು, ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮತ್ತೊಂದು ಕಡೆ ಮೈಸೂರು-ಮಾನಂದವಾಡಿ ಹೆದ್ದಾರಿಯ ಅರಣ್ಯದೊಳಗೆ ನಡೆಸಲಾಗುತ್ತಿರುವ ರಸ್ತೆ ಕಾಮಗಾರಿ ಹಲವು ತಿಂಗಳುಗಳಿಂದ ನಿಂತು ಹೋಗಿದ್ದು ಇಲ್ಲೂ ಕೂಡ ದೂಳುಮಯವಾಗಿದ್ದು, ರಾಜ್ಯ, ಹೊರರಾಜ್ಯದ ಪ್ರಯಾಣಿಕರು, ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ನಮ್ಮ ರಾಜ್ಯದ ರಸ್ತೆ ಅವ್ಯವಸ್ಥೆ ಬಗ್ಗೆ ಹೊರರಾಜ್ಯದವರು ಕೀಳಾಗಿ ಮಾತನಾಡುತ್ತಿರುವುದು ಕಂಡುಬಂದಿದೆ.

ಶಾಸಕ ಅನಿಲ್ ಚಿಕ್ಕಮಾದು ಅವರು ತಾಲ್ಲೂಕಿನ ಅಭಿವೃದ್ಧಿಗೆ ಕೋಟ್ಯಂತರ ರೂ. ಅನುದಾನ ತಂದರೂ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಸಮರ್ಪಕವಾಗಿ ಕೆಲಸ ನಿರ್ವಹಿ ಸದೇ ಇರುವು ದರಿಂದ ಇಂತಹ ಅನೇಕ ಸಮಸ್ಯೆಗಳು ಎದುರಾಗುತ್ತಿರುವುದು ವಿಪರ್ಯಾಸ.

” ಕಾಡಂಚಿನ ಗ್ರಾಮದಲ್ಲಿ ಬದುಕುತ್ತಿರುವ ನಾವು ಈ ಭಾಗದ ರಸ್ತೆ ಅವ್ಯವಸ್ಥೆಯಿಂದಾಗಿ ಕಳೆದ ಎರಡು ತಿಂಗಳುಗಳಿಂದ ನರಕಯಾತನೆ ಅನುಭವಿಸುತ್ತಿದ್ದೇವೆ. ಅಧಿಕಾರಿಗಳು, ಶಾಸಕರು ಇತ್ತ ಗಮನಹರಿಸಿ ಈ ಭಾಗದಲ್ಲೂ ಮನುಷ್ಯರೇ ವಾಸಿಸುತ್ತಿದ್ದಾರೆ ಎಂದು ಪರಿಗಣಿಸಬೇಕು.”

-ಬೈರೇಗೌಡ, ಜಕ್ಕಳ್ಳಿಮಾಳ

” ಬಿದರಳ್ಳಿ, ಮೂರ್‌ಬಂದ್ ಎಂಎಂ ರಸ್ತೆ ಕಾಮಗಾರಿ ಪ್ರಾರಂಭಿಸಲಾಗಿದೆ. ನೀರನ್ನು ಸಿಂಪಡಿಸಿಕೊಂಡು ಕೆಲಸ ನಡೆಸಬೇಕೆಂದು ಸೂಚಿಸಲಾಗಿದ್ದು, ನಾನೇ ಖುದ್ದು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ. ಶೀಘ್ರದಲ್ಲಿ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ಆದೇಶಿಸುತ್ತೇನೆ. ಸಮಸ್ಯೆಗಳು ಉದ್ಭವಿಸದಂತೆ ಕ್ರಮ ಕೈಗೊಳ್ಳುತ್ತೇನೆ.”

-ರಮೇಶ್, ಎಇಇ, ಲೋಕೋಪಯೋಗಿ ಇಲಾಖೆ

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

1 hour ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

5 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

7 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

9 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

13 hours ago