Andolana originals

ರಸ್ತೆ ಕಾಮಗಾರಿ ವಿಳಂಬ; ದೂಳು ಕುಡಿಯುವುದು ಅನಿವಾರ್ಯ

ಮಂಜು ಕೋಟೆ

ಸಾಗರೆ-ಬಿದರಹಳ್ಳಿ, ಬೀರಂಬಳ್ಳಿ-ಎನ್.ಬೇಗೂರು ರಸ್ತೆಗಳಲ್ಲಿ ಸಂಚರಿಸುವವರಿಗೆ ಅನಾರೋಗ್ಯ 

ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯ ಸಮೀಪದ ಮತ್ತು ಗಡಿಭಾಗದ ಮುಖ್ಯರಸ್ತೆಗಳ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರು, ಪ್ರಯಾಣಿಕರು ಅನಾರೋಗ್ಯಕ್ಕೀಡಾಗಿ ತೊಂದರೆ ಅನುಭವಿಸುತ್ತಿದ್ದಾರೆ.

ತಾಲ್ಲೂಕಿನ ಸಾಗರೆ-ಬಿದರಹಳ್ಳಿ ಮತ್ತು ಬೀರಂಬಳ್ಳಿ-ಎನ್.ಬೇಗೂರು ರಸ್ತೆಗಳು ಹದಗೆಟ್ಟಿದ್ದು, ಈ ರಸ್ತೆಯಲ್ಲಿ ಏಳುವ ದೂಳಿನಿಂದಾಗಿ ಸಂಚರಿಸುವವರ, ಸ್ಥಳೀಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.

೨ ತಿಂಗಳುಗಳ ಹಿಂದೆ ರಸ್ತೆ ದುರಸ್ತಿ ಕಾಮಗಾರಿಗೆ ಶಾಸಕರಾದ ಅನಿಲ್ ಚಿಕ್ಕಮಾದು ಅವರು ಭೂಮಿ ಪೂಜೆ ನೆರವೇರಿಸಿದ್ದರು. ನಂತರ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಾಮಗಾರಿ ನಡೆಸಲು ರಸ್ತೆಯನ್ನು ಅಗೆದು ಹಾಕಿದ್ದಾರೆ. ಆದರೆ, ರಸ್ತೆ ದುರಸ್ತಿ ಕಾಮಗಾರಿಯನ್ನು ವೇಗವಾಗಿ ನಡೆಸದೆ ಮತ್ತು ರಸ್ತೆಗಳಿಗೆ ನೀರು ಸಿಂಪಡಿಸದೆ ಗುತ್ತಿಗೆದಾರರು ನಿರ್ಲಕ್ಷಿಸುತ್ತಿರುವುದರಿಂದ ಪ್ರತಿನಿತ್ಯ ಓಡಾಡುತ್ತಿ ರುವ ವಾಹನಗಳ ಸವಾರರು ಮತ್ತು ಸಾರ್ವಜನಿ ಕರು ದೂಳಿನಿಂದ ನರಕ ಯಾತನೆ ಪಡುತ್ತಿದ್ದಾರೆ.

ಇದಲ್ಲದೆ ಈ ರಸ್ತೆಯ ಮೂಲಕ ಕಬಿನಿ ಜಲಾಶಯಕ್ಕೆ ಹಾಗೂ ಭೀಮನ ಕೊಲ್ಲಿ ಮಾದೇಶ್ವರ ದೇವಸ್ಥಾನಕ್ಕೆ, ಅನೇಕ ರೆಸಾರ್ಟ್‌ಗಳಿಗೆ ಪ್ರತಿನಿತ್ಯ ನೂರಾರು ಜನ ಸಂಚರಿಸುತ್ತಾರೆ. ಜೊತೆಗೆ ರೈತರು, ವಿದ್ಯಾರ್ಥಿಗಳು, ವೃದ್ಧರು, ರೋಗಿಗಳು ಈ ರಸ್ತೆಯ ಮೂಲಕ ತಾಲ್ಲೂಕು ಕೇಂದ್ರವಾದ ಕೋಟೆ ಪಟ್ಟಣಕ್ಕೆ ಆಗಮಿಸುತ್ತಾರೆ. ಅವರೆಲ್ಲರೂ ದೂಳಿನಸಮಸ್ಯೆಯಿಂದ ಪರದಾಡುವಂತಾಗಿದ್ದು, ಅಧಿಕಾರಿಗಳು ಗುತ್ತಿಗೆದಾರರು, ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮತ್ತೊಂದು ಕಡೆ ಮೈಸೂರು-ಮಾನಂದವಾಡಿ ಹೆದ್ದಾರಿಯ ಅರಣ್ಯದೊಳಗೆ ನಡೆಸಲಾಗುತ್ತಿರುವ ರಸ್ತೆ ಕಾಮಗಾರಿ ಹಲವು ತಿಂಗಳುಗಳಿಂದ ನಿಂತು ಹೋಗಿದ್ದು ಇಲ್ಲೂ ಕೂಡ ದೂಳುಮಯವಾಗಿದ್ದು, ರಾಜ್ಯ, ಹೊರರಾಜ್ಯದ ಪ್ರಯಾಣಿಕರು, ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ನಮ್ಮ ರಾಜ್ಯದ ರಸ್ತೆ ಅವ್ಯವಸ್ಥೆ ಬಗ್ಗೆ ಹೊರರಾಜ್ಯದವರು ಕೀಳಾಗಿ ಮಾತನಾಡುತ್ತಿರುವುದು ಕಂಡುಬಂದಿದೆ.

ಶಾಸಕ ಅನಿಲ್ ಚಿಕ್ಕಮಾದು ಅವರು ತಾಲ್ಲೂಕಿನ ಅಭಿವೃದ್ಧಿಗೆ ಕೋಟ್ಯಂತರ ರೂ. ಅನುದಾನ ತಂದರೂ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಸಮರ್ಪಕವಾಗಿ ಕೆಲಸ ನಿರ್ವಹಿ ಸದೇ ಇರುವು ದರಿಂದ ಇಂತಹ ಅನೇಕ ಸಮಸ್ಯೆಗಳು ಎದುರಾಗುತ್ತಿರುವುದು ವಿಪರ್ಯಾಸ.

” ಕಾಡಂಚಿನ ಗ್ರಾಮದಲ್ಲಿ ಬದುಕುತ್ತಿರುವ ನಾವು ಈ ಭಾಗದ ರಸ್ತೆ ಅವ್ಯವಸ್ಥೆಯಿಂದಾಗಿ ಕಳೆದ ಎರಡು ತಿಂಗಳುಗಳಿಂದ ನರಕಯಾತನೆ ಅನುಭವಿಸುತ್ತಿದ್ದೇವೆ. ಅಧಿಕಾರಿಗಳು, ಶಾಸಕರು ಇತ್ತ ಗಮನಹರಿಸಿ ಈ ಭಾಗದಲ್ಲೂ ಮನುಷ್ಯರೇ ವಾಸಿಸುತ್ತಿದ್ದಾರೆ ಎಂದು ಪರಿಗಣಿಸಬೇಕು.”

-ಬೈರೇಗೌಡ, ಜಕ್ಕಳ್ಳಿಮಾಳ

” ಬಿದರಳ್ಳಿ, ಮೂರ್‌ಬಂದ್ ಎಂಎಂ ರಸ್ತೆ ಕಾಮಗಾರಿ ಪ್ರಾರಂಭಿಸಲಾಗಿದೆ. ನೀರನ್ನು ಸಿಂಪಡಿಸಿಕೊಂಡು ಕೆಲಸ ನಡೆಸಬೇಕೆಂದು ಸೂಚಿಸಲಾಗಿದ್ದು, ನಾನೇ ಖುದ್ದು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ. ಶೀಘ್ರದಲ್ಲಿ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ಆದೇಶಿಸುತ್ತೇನೆ. ಸಮಸ್ಯೆಗಳು ಉದ್ಭವಿಸದಂತೆ ಕ್ರಮ ಕೈಗೊಳ್ಳುತ್ತೇನೆ.”

-ರಮೇಶ್, ಎಇಇ, ಲೋಕೋಪಯೋಗಿ ಇಲಾಖೆ

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

7 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

7 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

8 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

9 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

12 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

13 hours ago