ಪ್ರಶಾಂತ್ ಎಸ್.
ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ವಾಹನ ಚಲಾಯಿಸುತ್ತಿದ್ದರೆ, ಮತ್ತೊಂದೆಡೆ ರಸ್ತೆಗಳನ್ನು ಅಗೆಯುತ್ತಿರುವುದರಿಂದ ನಿವಾಸಿಗಳ ಬದುಕು ದುಸ್ತರವಾಗಿದೆ. ಪೈಪ್ಲೈನ್ ಅಳವಡಿಕೆಗಾಗಿ ರಸ್ತೆ ಅಗೆದು ಹಾಗೆಯೇ ಬಿಡಲಾಗಿದೆ.
ಎಲ್ಲೆಂದರಲ್ಲಿ ಬೃಹತ್ ಗುಂಡಿಗಳು ನಿರ್ಮಾಣ ವಾಗಿದ್ದು, ಯಾವುದೇ ಸುರಕ್ಷತಾ ಕ್ರಮದ ಫಲಕವೂ ಇಲ್ಲ. ಕಾಮಗಾರಿಯ ಬಗ್ಗೆ ಮಾಹಿತಿ ನೀಡುವ ಒಂದೇ ಒಂದೂ ಸೂಚನಾ ಫಲಕವನ್ನೂ ಇಲ್ಲಿ ಅಳವಡಿಸಿಲ್ಲ. ಇದು ಸಾರ್ವಜನಿಕರ ಆಕ್ರೋ ಶಕ್ಕೆ ಕಾರಣವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಣ್ಣು ಹಾಕಿ ಅವಾಂತರ : ರಸ್ತೆ ಗುಂಡಿಗಳನ್ನು ಮಣ್ಣಿನಿಂದ ಮುಚ್ಚುವ ಪಂಚಾಯಿತಿ ಕಾರ್ಯ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ವಾರಕ್ಕೊಮ್ಮೆ ಗುಂಡಿಯನ್ನು ಮಣ್ಣಿನಿಂದ ಮುಚ್ಚಲು ಭಾರೀ ಹಣ ವ್ಯಯಿಸಲಾಗುತ್ತಿದೆ.
ಟ್ರಾಕ್ಟರ್, ಜೆಸಿಬಿಗಳ ಮೂಲಕ ರಾಶಿ ರಾಶಿ ಮಣ್ಣನ್ನು ತಂದು ರಸ್ತೆಗೆ ಸುರಿಯಲಾಗುತ್ತಿದೆ. ಇದರಿಂದ ಕೇವಲ ಮಣ್ಣು ಮಾತ್ರವಲ್ಲದೆ ಅದರೊಂದಿಗೆ ಕಲ್ಲುಗಳೂ ಸೇರಿ ದ್ವಿಚಕ್ರ ವಾಹನ ಸವಾರರು ಬೀಳುವ ಅಪಾಯವನ್ನು ತಂದೊಡ್ಡಿದೆ. ಈ ಮಧ್ಯೆ ಕೆಲವು ಕಾಮಗಾರಿಗೆ ತೋಡಿದ್ದ ಗುಂಡಿಗಳನ್ನು ಸರಿಯಾಗಿ ಮುಚ್ಚದಿರುವುದರಿಂದ ಅಲ್ಲಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ. ವಾತಾವರಣದ ವೈಪರೀತ್ಯದಿಂದ ಮಳೆಯೇ ನಾದರೂ ಬಂದರೆ ಈ ರಸ್ತೆಯಲ್ಲಿನ ಭಾರಿ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುವುದರಿಂದ ವಾಹನ ಸವಾರರು, ಸಾರ್ವಜನಿಕರು, ಅದರಲ್ಲೂ ಹಿರಿಯ ನಾಗರಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದೆ.
” ಶಿವಪುರ, ಚಾಮುಂಡೇಶ್ವರಿ ಬಡಾವಣೆ ರಸ್ತೆಗಳಲ್ಲಿ ಓಡಾಡುವುದೇ ಕಷ್ಟವಾಗಿದೆ. ಕೇಬಲ್, ವಿದ್ಯುತ್ ತಂತಿ, ಯುಜಿಡಿ, ನೀರಿನ ಸಂಪರ್ಕ ಸರಿಪಡಿಸಲು ರಸ್ತೆಯನ್ನು ಕಿತ್ತು ಹಾಕಲಾಗಿದೆ. ಈಗ ರಸ್ತೆಯನ್ನು ಅಭಿವೃದ್ಧಿಪಡಿಸದೇ ಹಾಗೆಯೇ ಬಿಡಲಾಗಿದ್ದು, ವಾಹನ ಸವಾರರಿಗೆ ನಿತ್ಯ ತೊಂದರೆಯಾಗಿದೆ.”
ಶಿವರಾಜು, ಚಾಮುಂಡೇಶ್ವರಿ ಬಡಾವಣೆ
” ಗುಂಡಿ ಮುಚ್ಚದಿರುವ ಬಗ್ಗೆ ಈಗಷ್ಟೇ ತಿಳಿದಿದೆ. ತಕ್ಷಣ ಪಂಚಾಯಿತಿ ಸಿಬ್ಬಂದಿಗಳಿಗೆ ಮಾಹಿತಿ ನೀಡಿ ಗುಂಡಿ ಮುಚ್ಚುವಂತೆ ಸೂಚನೆ ನೀಡಲಾಗುವುದು. ಜೊತೆಗೆ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು.”
ಸುರೇಶ್, ಮುಖ್ಯಾಧಿಕಾರಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…