Andolana originals

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್.

ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ವಾಹನ ಚಲಾಯಿಸುತ್ತಿದ್ದರೆ, ಮತ್ತೊಂದೆಡೆ ರಸ್ತೆಗಳನ್ನು ಅಗೆಯುತ್ತಿರುವುದರಿಂದ ನಿವಾಸಿಗಳ ಬದುಕು ದುಸ್ತರವಾಗಿದೆ. ಪೈಪ್ಲೈನ್ ಅಳವಡಿಕೆಗಾಗಿ ರಸ್ತೆ ಅಗೆದು ಹಾಗೆಯೇ ಬಿಡಲಾಗಿದೆ.

ಎಲ್ಲೆಂದರಲ್ಲಿ ಬೃಹತ್ ಗುಂಡಿಗಳು ನಿರ್ಮಾಣ ವಾಗಿದ್ದು, ಯಾವುದೇ ಸುರಕ್ಷತಾ ಕ್ರಮದ ಫಲಕವೂ ಇಲ್ಲ. ಕಾಮಗಾರಿಯ ಬಗ್ಗೆ ಮಾಹಿತಿ ನೀಡುವ ಒಂದೇ ಒಂದೂ ಸೂಚನಾ ಫಲಕವನ್ನೂ ಇಲ್ಲಿ ಅಳವಡಿಸಿಲ್ಲ. ಇದು ಸಾರ್ವಜನಿಕರ ಆಕ್ರೋ ಶಕ್ಕೆ ಕಾರಣವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಣ್ಣು ಹಾಕಿ ಅವಾಂತರ : ರಸ್ತೆ ಗುಂಡಿಗಳನ್ನು ಮಣ್ಣಿನಿಂದ ಮುಚ್ಚುವ ಪಂಚಾಯಿತಿ ಕಾರ್ಯ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ವಾರಕ್ಕೊಮ್ಮೆ ಗುಂಡಿಯನ್ನು ಮಣ್ಣಿನಿಂದ ಮುಚ್ಚಲು ಭಾರೀ ಹಣ ವ್ಯಯಿಸಲಾಗುತ್ತಿದೆ.

ಟ್ರಾಕ್ಟರ್, ಜೆಸಿಬಿಗಳ ಮೂಲಕ ರಾಶಿ ರಾಶಿ ಮಣ್ಣನ್ನು ತಂದು ರಸ್ತೆಗೆ ಸುರಿಯಲಾಗುತ್ತಿದೆ. ಇದರಿಂದ ಕೇವಲ ಮಣ್ಣು ಮಾತ್ರವಲ್ಲದೆ ಅದರೊಂದಿಗೆ ಕಲ್ಲುಗಳೂ ಸೇರಿ ದ್ವಿಚಕ್ರ ವಾಹನ ಸವಾರರು ಬೀಳುವ ಅಪಾಯವನ್ನು ತಂದೊಡ್ಡಿದೆ. ಈ ಮಧ್ಯೆ ಕೆಲವು ಕಾಮಗಾರಿಗೆ ತೋಡಿದ್ದ ಗುಂಡಿಗಳನ್ನು ಸರಿಯಾಗಿ ಮುಚ್ಚದಿರುವುದರಿಂದ ಅಲ್ಲಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ. ವಾತಾವರಣದ ವೈಪರೀತ್ಯದಿಂದ ಮಳೆಯೇ ನಾದರೂ ಬಂದರೆ ಈ ರಸ್ತೆಯಲ್ಲಿನ ಭಾರಿ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುವುದರಿಂದ ವಾಹನ ಸವಾರರು, ಸಾರ್ವಜನಿಕರು, ಅದರಲ್ಲೂ ಹಿರಿಯ ನಾಗರಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದೆ.

” ಶಿವಪುರ, ಚಾಮುಂಡೇಶ್ವರಿ ಬಡಾವಣೆ ರಸ್ತೆಗಳಲ್ಲಿ ಓಡಾಡುವುದೇ ಕಷ್ಟವಾಗಿದೆ. ಕೇಬಲ್, ವಿದ್ಯುತ್ ತಂತಿ, ಯುಜಿಡಿ, ನೀರಿನ ಸಂಪರ್ಕ ಸರಿಪಡಿಸಲು ರಸ್ತೆಯನ್ನು ಕಿತ್ತು ಹಾಕಲಾಗಿದೆ. ಈಗ ರಸ್ತೆಯನ್ನು ಅಭಿವೃದ್ಧಿಪಡಿಸದೇ ಹಾಗೆಯೇ ಬಿಡಲಾಗಿದ್ದು, ವಾಹನ ಸವಾರರಿಗೆ ನಿತ್ಯ ತೊಂದರೆಯಾಗಿದೆ.”
ಶಿವರಾಜು, ಚಾಮುಂಡೇಶ್ವರಿ ಬಡಾವಣೆ

” ಗುಂಡಿ ಮುಚ್ಚದಿರುವ ಬಗ್ಗೆ ಈಗಷ್ಟೇ ತಿಳಿದಿದೆ. ತಕ್ಷಣ ಪಂಚಾಯಿತಿ ಸಿಬ್ಬಂದಿಗಳಿಗೆ ಮಾಹಿತಿ ನೀಡಿ ಗುಂಡಿ ಮುಚ್ಚುವಂತೆ ಸೂಚನೆ ನೀಡಲಾಗುವುದು. ಜೊತೆಗೆ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು.”
ಸುರೇಶ್, ಮುಖ್ಯಾಧಿಕಾರಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago