Andolana originals

ರಸ್ತೆಗಳು ಗುಂಡಿಮಯ; ಸಂಚಾರ ಅಯೋಮಯ

ಪ್ರಶಾಂತ್ ಎಸ್.

ಮೈಸೂರು: ನಗರದ ಸುಗಮ ಸಂಚಾರಕ್ಕಾಗಿ ನಿರ್ಮಿಸಿದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತುಂಬಾ ತೊಡಕಾಗಿದೆ.

ಗಂಗೋತ್ರಿ ಹುಡ್ಕೋ ಬಡಾವಣೆ, ತೊಣಚಿಕೊಪ್ಪಲು ಸೇರಿದಂತೆ ಪ್ರಮುಖ ರಸ್ತೆಗಳು ಹಾಗೂ ಅಡ್ಡ ರಸ್ತೆಗಳು ಗುಂಡಿಮಯವಾಗಿವೆ. ರಸ್ತೆ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ.

ಬೈಕ್ ಸವಾರರಿಗೆ ಸಂಕಷ್ಟ: ರಸ್ತೆಯಲ್ಲಿರುವ ಗುಂಡಿಗಳು ಬೈಕ್, ಕಾರು ಹಾಗೂ ಪಾದಚಾರಿಗಳಿಗೂ ಮೃತ್ಯು ಕೂಪಗಳಾಗಿವೆ. ಗುಂಡಿಗಳಲ್ಲಿ ಬಿದ್ದ ಕೆಲ ಬೈಕ್ ಸವಾರರು ಕೈ ಕಾಲು ಮುರಿದುಕೊಂಡಿದ್ದರೆ, ಇನ್ನೂ ಕೆಲವರು ಗಂಭೀರ ಗಾಯಗಳಿಂದ ಆಸ್ಪತ್ರೆ ಸೇರಿದ್ದಾರೆ. ಇನ್ನು ನುರಿತ ಸವಾರರು ಎಂದುಕೊಂಡಿರುವ ಕೆಲವರಂತೂ ಒಮ್ಮೊಮ್ಮೆ ಅನಿರೀಕ್ಷಿತವಾಗಿ ಎದುರಾಗುವ ಗುಂಡಿ ತಪ್ಪಿಸಲು ಹೋಗಿ ಬಿದ್ದಿದ್ದಾರೆ. ಇನ್ನೂ ಕೆಲವೆಡೆ ಹಿಂಬದಿಯಿಂದ ಬರುವ ವಾಹನ ಗಳು ಡಿಕ್ಕಿಯಾಗಿ ಆಗಾಗ್ಗೆ ಅಪಘಾತಗಳಾಗುವುದು ಇಲ್ಲಿ ಸಾಮಾನ್ಯವಾಗಿದೆ.

ಮಣ್ಣು ಹಾಕಿ ಅವಾಂತರ: ಗುಂಡಿ ಬಿದ್ದ ರಸ್ತೆಗಳಿಗೆ ಟ್ರಾಕ್ಟರ್, ಜೆಸಿಬಿಗಳ ಮೂಲಕ ಮಣ್ಣು ಮುಚ್ಚಿ ಕೈತೊಳೆದುಕೊಳ್ಳಲಾಗುತ್ತಿದೆ. ಇದರಿಂದಾಗಿ ಮಳೆಗಾಲ ದಲ್ಲಿ ಕೆಸರುಮಯವಾದರೆ, ಬೇಸಿಗೆ ಕಾಲದಲ್ಲಿ ರಸ್ತೆಗಳು ದೂಳು ಮಯವಾಗಿರುತ್ತವೆ. ಈ ರಸ್ತೆಗಳಲ್ಲಿ ಬೈಕ್, ಕಾರು, ಲಾರಿಗಳು ಸಂಚರಿಸಿದರಂತೂ ಸಾರ್ವಜನಿಕರಿಗೆ ದೂಳಿನ ಸ್ನಾನವೇ ಗತಿಯಾಗುತ್ತಿದೆ.

ಸಮಸ್ಯೆಗೆ ಮುಕ್ತಿ ಯಾವಾಗ?: ನಗರದ ಮುಖ್ಯರಸ್ತೆಯಲ್ಲಿ ಹಲವು ಕಾರಣಗಳಿಂದ ತೋಡಿರುವ ಹಾಗೂ ಕಳಪೆ ಕಾಮಗಾರಿಗಳಿಂದಾಗಿ ಬಿದ್ದ ಗುಂಡಿಗಳು ಸವಾರರಿಗೆ ತಲೆನೋವು ತರಿಸಿವೆ. ಗುಂಡಿಮಯ ರಸ್ತೆಗಳು ಟ್ರಾಫಿಕ್ ಜಾಮ್‌ಗೂ ಕಾರಣವಾಗಿವೆ. ಹೀಗಾಗಿ ಈ ರಸ್ತೆಗಳನ್ನು ದುರಸ್ತಿಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

” ಪ್ರತಿದಿನ ಓಡಾಡುವ ರಸ್ತೆಯನ್ನು ಸರಿಪಡಿಸಿ ಎಂದರೆ ಮಣ್ಣು ಹಾಕಿದ್ದಾರೆ. ಇದರಿಂದ ಬೈಕ್ ಸವಾರರು ಅಪಘಾತಕ್ಕೆ ಒಳಗಾಗುತ್ತಿದ್ದಾರೆ. ರಾತ್ರಿ ವೇಳೆಯಂತೂ ಕೆಲಸ ಮುಗಿಸಿಕೊಂಡು ಬರುವಾಗ ಜೀವ ಕೈಯಲ್ಲಿ ಹಿಡಿದು ಕೊಂಡು ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಈ ಸಮಸ್ಯೆಯನ್ನು ಪಾಲಿಕೆ ಬಗೆಹರಿಸಿಕೊಡಬೇಕು.”

-ಪ್ರವೀಣ್, ಸ್ಥಳೀಯರು

” ಮೈಸೂರಿನ ಬಹುತೇಕ ರಸ್ತೆಗಳು ಗುಂಡಿಬಿದ್ದು ಹಾಳಾಗಿವೆ. ನಗರಪಾಲಿಕೆ ಯಾವುದೇ ದುರಸ್ತಿ ಕಾಮಗಾರಿ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದೆ. ಇದು ಸರಿಯಾದ ಕ್ರಮವಲ್ಲ, ಅಽಕಾರಿಗಳು ಕೇವಲ ನಿಯಮ, ಸಬೂಬು ಹೇಳುತ್ತಿದ್ದಾರೆ. ಶಾಸಕರು ಚುನಾವಣೆಯಲ್ಲಿ ಗೆದ್ದ ನಂತರ ಜನಸಂಪರ್ಕ ಕಳೆದುಕೊಂಡು ಅಭಿವೃದ್ಧಿ ಮರೆತಿದ್ದಾರೆ.”

-ಶ್ರೀಧರ್ ನಾಯಕ್, ಸ್ಥಳೀಯರು

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

6 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

6 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

7 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

8 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

9 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

9 hours ago