Andolana originals

ಭೋರ್ಗರೆಯುತ್ತಿರುವ ಚುಂಚನಕಟ್ಟೆ ಜಲಪಾತ

ಮೇ ತಿಂಗಳಲ್ಲೇ ತುಂಬಿ ಹರಿದ ಕಾವೇರಿ; ಜಲಪಾತ ವೀಕ್ಷಣೆಗೆ ಆಗಮಿಸುತ್ತಿರುವ ಜನರು

ಆನಂದ್ ಹೊಸೂರು

ಹೊಸೂರು: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರೈತ ಸಮುದಾಯದಲ್ಲಿ ಹರ್ಷ, ಮೇ ತಿಂಗಳಲ್ಲೇ ತುಂಬಿ ಹರಿದ ಕಾವೇರಿ, ಜಲಪಾತದ ರಮಣೀಯ ದೃಶ್ಯ ವೀಕ್ಷಿಸಲು ಬರುತ್ತಿರುವ ಪ್ರವಾಸಿಗರು, ಸೆಲ್ಫಿ ತೆಗೆಯಲು ಮುಗಿಬೀಳುತ್ತಿರುವ ಯುವ ಜನತೆ…

ಇದು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಕಂಡು ಬರುತ್ತಿರುವ ರಮಣೀಯ ದೃಶ್ಯ.

ಕೊಡಗಿನಲ್ಲಿ ಹಾಗೂ ನದಿಯ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿ ಮೈದುಂಬಿ ಹರಿಯುತ್ತಿದ್ದು, ಚುಂಚನಕಟ್ಟೆಯಲ್ಲಿ ೨೧ ಸಾವಿರ ಕ್ಯೂಸೆಕ್ಸ್‌ಗೂ ಅಧಿಕ ಪ್ರಮಾಣದ ನೀರು ಹರಿಯುತ್ತಿರುವ ಕಾರಣ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.

ಕಾವೇರಿ ನದಿಯು ತುಂಬಿ ಹರಿಯುತ್ತಿರುವ ಪರಿಣಾಮ ಈ ನದಿಯ ಕೊನೆಯ ಜಲಪಾತವಾಗಿರುವ ಚುಂಚನಕಟ್ಟೆಯ ಶ್ರೀರಾಮ ದೇವರ ದೇವಸ್ಥಾನದ ಸಮೀಪ ಇರುವ ಧನುಷ್ಕೋಟಿ ಜಲಪಾತ ಭೋರ್ಗರೆದು ಧುಮ್ಮಿಕ್ಕುವ ದೃಶ್ಯ ನೋಡಲು ಸಾವಿರಾರು ಪ್ರವಾಸಿಗರು ಆಗಮಿಸಿ ಜಲಧಾರೆಯ ವೈಭವ ಸವಿಯುತ್ತಿದ್ದಾರೆ.

ಮಳೆ ಇಲ್ಲದೆ ತನ್ನ ಸೊಬಗನ್ನು ಕಳೆದುಕೊಂಡಿದ್ದ ಈ ಜಲಪಾತದಲ್ಲಿ ಈಗ ೪೦ಕ್ಕೂ ಹೆಚ್ಚು ಅಡಿ ಎತ್ತರದಿಂದ ನದಿಯ ನೀರು ಬೀಳುತ್ತಾ, ಹಾಲಿನಂತೆ ಉಕ್ಕಿ ಹರಿಯುತ್ತಿರುವುದನ್ನು ಕಾಣಬಹುದಾಗಿದೆ.

ಕಳೆದ ವರ್ಷ ಜೂನ್ ಅಂತ್ಯದಲ್ಲಿ ತುಂಬಿ ಹರಿದಿದ್ದ ಕಾವೇರಿ ಈ ಬಾರಿ ತಿಂಗಳಿಗೂ ಮುಂಚೆಯೇ ತುಂಬಿ ಹರಿಯುತ್ತಿರುವುದು ಪ್ರಕೃತಿ ಪ್ರಿಯರಲ್ಲಿ ಸಂತಸ ಮೂಡಿಸಿದೆ. ಮೈದುಂಬಿ ಹರಿಯುತ್ತಿರುವ ಕಾವೇರಿ ನದಿಯ ಜಲಪಾತ ವೀಕ್ಷಣೆ ಮಾಡಲು ಹೆಚ್ಚಿನ ರೀತಿಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಇಲ್ಲಿ ಪ್ರತಿಷ್ಠಾಪಿಸಲಾಗಿರುವ ಆಂಜನೇಯ ಸ್ವಾಮಿ ಪ್ರತಿಮೆ ಮುಂದೆ ಸೆಲ್ಫಿ ತೆಗೆದುಕೊಳ್ಳಲು ನಾ ಮುಂದು ತಾ ಮುಂದು ಎಂಬಂತೆ ಮುಗಿಬೀಳುತ್ತಿದ್ದಾರೆ.

ಇದೇ ರೀತಿ ನದಿಯ ಕೂದಲೆಳೆ ದೂರದಲ್ಲಿ ಇರುವ ರಾಮಸಮುದ್ರ ಅಣ್ಣೆಕಟ್ಟೆ ಮತ್ತು ಚುಂಚನಕಟ್ಟೆಯಿಂದ ಸುಮಾರು ೭ ಕಿ.ಮೀ ದೂರದಲ್ಲಿರುವ ಸಕ್ಕರೆ ಗ್ರಾಮದ ಬಳಿಯ ಬಳ್ಳೂರು ಚಾಮರಾಜ ನಾಲೆಯ ಅಣೆಕಟ್ಟೆಯ ಮೇಲೆ ಕಾವೇರಿ ನದಿ ಹರಿಯುವ ದೃಶ್ಯ ನಯನ ಮನೋಹರವಾಗಿದೆ.

” ಜಲಪಾತಗಳು ಮೈದುಂಬಿ ಹರಿಯುವಾಗಲೂ ಜನರನ್ನು ಸೆಳೆಯಲು ಯಾವುದೇ ಪ್ರಚಾರ ಮಾಡದಿರುವುದು ಹಾಗೂ ಪ್ರವಾಸಿಗರಿಗೆ ವಿಚಾರ ತಿಳಿಸದಿರುವುದು ದುರಂತ.”

-ಎಚ್.ಡಿ.ಭಾಸ್ಕರ್, ಹೊಸೂರು ಗ್ರಾಮಸ್ಥರು

” ಚುಂಚನಕಟ್ಟೆ ನಮಗೆ ಬಾಲ್ಯದಿಂದಲೂ ಆಕರ್ಷಣೀಯ ಸ್ಥಳವಾಗಿದ್ದು ಜಲಪಾತ ವೀಕ್ಷಣೆಯೇ ನಮಗೆ ಒಂದು ಅದ್ಭುತ ಅನುಭವ ನೀಡುತ್ತದೆ. ಪ್ರವಾಸಿಗರಿಗೆ ಚುಂಚನಕಟ್ಟೆ ಉತ್ತಮ ಆಯ್ಕೆಯಾಗಲಿದೆ.”

-ರಮೇಶ್, ಪ್ರವಾಸಿ

ಆಂದೋಲನ ಡೆಸ್ಕ್

Recent Posts

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

50 seconds ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

5 mins ago

ಅರಣ್ಯದಲ್ಲಿ ಮಾನವನ ಹಸ್ತಕ್ಷೇಪ; ನಗರಕ್ಕೂ ಚಿರತೆ ದಾಂಗುಡಿ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಆತಂಕ ಒಂದು ವರ್ಷದಲ್ಲಿ ೨೫ ಚಿರತೆಗಳ ಸೆರೆ ಅರಣ್ಯ ಇಲಾಖೆಯಿಂದ ಜನ…

19 mins ago

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

10 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

10 hours ago