Andolana originals

ಚಾವಣಿ ಸೋರಿಕೆ, ಗಬ್ಬು ನಾರುತ್ತಿರುವ ಆವರಣ…

ದೊಡ್ಡ ಕವಲಂದೆ ನಾಡಕಚೇರಿಯಲ್ಲಿ ಸಾರ್ವಜನಿಕರಿಗೆ ಕಿರಿಕಿರಿ; ಸಮಸ್ಯೆ ಬಗೆಹರಿಸಲು ಆಗ್ರಹ

ಪಿ.ಶಿವಕುಮಾರ್

ದೊಡ್ಡ ಕವಲಂದೆ: ನಂಜನಗೂಡು ವಿಧಾನಸಭಾ ಕ್ಷೇತ್ರದ ದೊಡ್ಡ ಕವಲಂದೆ ಗ್ರಾಮದಲ್ಲಿರುವ ನಾಡಕಚೇರಿ ಅವ್ಯವಸ್ಥೆಯಿಂದ ಕೂಡಿದೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬಂದಿದೆ.

ಮುಖ್ಯವಾಗಿ ನಾಡಕಚೇರಿಗೆ ಸ್ವಂತ ಕಟ್ಟಡ ಇಲ್ಲ. ೧೫ ವರ್ಷಗಳಿಂದಲೂ ಆಸ್ಪತ್ರೆಗೆ ಸೇರಿದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಟ್ಟಡವನ್ನು ನಾಡಕಚೇರಿಗೆ ಹಸ್ತಾಂತರಿಸಿಲ್ಲ. ಈಗಲೂ ಆಸ್ಪತ್ರೆ ಹೆಸರಿನಲ್ಲಿ ನಮೂದಾಗಿದೆ.

ಕಟ್ಟಡ ನಿರ್ಮಿಸಿ ಹಲವಾರು ವರ್ಷಗಳು ಕಳೆದಿರುವ ಕಾರಣ ಕಟ್ಟಡ ದುಸ್ಥಿತಿಗೆ ತಲುಪಿದೆ. ಕಟ್ಟಡದ ಗೋಡೆಗಳು ಮತ್ತು ಚಾವಣಿ ಶಿಥಿಲಾವಸ್ಥೆಗೆ ತಲುಪಿದೆ. ಚಾವಣಿಯ ಹೆಂಚುಗಳು ಕಳಚಿ ಬೀಳುತ್ತಿದ್ದು, ಮಳೆಗಾಲದಲ್ಲಿ ಕಟ್ಟಡ ಸೋರುತ್ತಿದೆ.

ಹೋಬಳಿ ವ್ಯಾಪ್ತಿಯ ರೈತರಿಗೆ ಸಂಬಂಧಪಟ್ಟ ಸಾಕಷ್ಟು ದಾಖಲೆಗಳು ಲಭ್ಯವಿದ್ದು, ಅಭದ್ರತೆ ಕಾಡುತ್ತಿದೆ. ಒಂದು ವೇಳೆ ದಾಖಲಾತಿ ಹಾಳಾದರೆ ಯಾರು ಹೊಣೆ ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿದೆ.

ಗಬ್ಬು ನಾರುತ್ತಿರುವ ಆವರಣ: ನಾಡಕಚೇರಿ ಆವರಣ ಗಬ್ಬುನಾರುತ್ತಿದೆ. ಮಳೆಗಾಲದಲ್ಲಿ ಕೆಸರುಗದ್ದೆ ಆಗುವ ಜೊತೆಗೆ ಕಸ-ಕಡ್ಡಿಗಳ ರಾಶಿ ಎಲ್ಲೆಡೆ ಕಂಡು ಬರುತ್ತದೆ. ಕಚೇರಿಗೆ ಬರುವ ರೈತರು ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಗೃಹ, ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಇಲ್ಲವಾಗಿದೆ. ದೊಡ್ಡ ಕವಲಂದೆ ಗ್ರಾಮ ಹೋಬಳಿ ಕೇಂದ್ರವಾಗಿದ್ದು, ಅಭಿವೃದ್ಧಿ ಮಾತ್ರ ಮರೀಚಿಕೆ ಯಾಗಿದೆ.

ಕವಲಂದೆ ಸಮೀಪದ ಹೊಸೂರು ಗ್ರಾಮದ ಗೇಟ್ ಬಳಿ ವಿದ್ಯಾರ್ಥಿ ನಿಲಯಕ್ಕೆ ಸೇರಿದ ಸುಸಜ್ಜಿತವಾದ ಕಟ್ಟಡ ಖಾಲಿ ಇದೆ. ಈ ವಿದ್ಯಾರ್ಥಿನಿಲಯವು ಸ್ಥಗಿತಗೊಂಡು ಹಲವಾರು ವರ್ಷಗಳು ಕಳೆದಿದ್ದು, ಪಾಳು ಬಿದ್ದಿದೆ. ಈ ಖಾಲಿ ಕಟ್ಟಡವನ್ನಾದರೂ ನಾಡ ಕಚೇರಿಗೆ ಅಥವಾ ಬೇರೆ ಯಾವುದಾದರೂ ಸರ್ಕಾರಿ ಕಚೇರಿಗೆ ಬಳಸಿಕೊಳ್ಳಬಹುದು ಎಂಬುದು ಸ್ಥಳೀಯರ ಸಲಹೆಯಾಗಿದೆ. ಸ್ಥಳೀಯ ಶಾಸಕರು, ಸಂಸದರು ಇತ್ತ ಗಮನ ಹರಿಸಿ ದೊಡ್ಡ ಕವಲಂದೆ ನಾಡಕಚೇರಿಗೆ ನೂತನ ಕಟ್ಟಡ ಒದಗಿಸುವ ಜೊತೆಗೆ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.

” ದೊಡ್ಡ ಕವಲಂದೆ ನಾಡಕಚೇರಿಗೆ ಸ್ವಂತ ಕಟ್ಟಡ ಇಲ್ಲದಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಶೀಘ್ರದಲ್ಲಿ ಕ್ರಮ ಕೈಗೊಳ್ಳುತ್ತೇನೆ.”

-ಶಿವಕುಮಾರ್ ಕಾಸನೂರು, ತಹಸಿಲ್ದಾರ್

” ದೊಡ್ಡ ಕವಲಂದೆ ನಾಡಕಚೇರಿಗೆ ಬರುವ ರೈತರು ಮತ್ತು ಸಾರ್ವಜನಿಕರಿಗೆ ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಕೂರಲು ಆಸನಗಳ ವ್ಯವಸ್ಥೆ ಇಲ್ಲ. ಶೌಚಗೃಹ ಇಲ್ಲ. ಕುಡಿಯಲು ನೀರು ಇಲ್ಲ. ಮೇಲಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೌಲಭ್ಯ ಒದಗಿಸಬೇಕು.”

-ಸಿದ್ದಲಿಂಗಪ್ಪ, ಕವಲಂದೆ ಗ್ರಾಪಂ ಸದಸ್ಯರು, ಹರಗನಪುರ

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

5 mins ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

22 mins ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

38 mins ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

48 mins ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

2 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

2 hours ago