Andolana originals

ಚಾವಣಿ ಸೋರಿಕೆ, ಗಬ್ಬು ನಾರುತ್ತಿರುವ ಆವರಣ…

ದೊಡ್ಡ ಕವಲಂದೆ ನಾಡಕಚೇರಿಯಲ್ಲಿ ಸಾರ್ವಜನಿಕರಿಗೆ ಕಿರಿಕಿರಿ; ಸಮಸ್ಯೆ ಬಗೆಹರಿಸಲು ಆಗ್ರಹ

ಪಿ.ಶಿವಕುಮಾರ್

ದೊಡ್ಡ ಕವಲಂದೆ: ನಂಜನಗೂಡು ವಿಧಾನಸಭಾ ಕ್ಷೇತ್ರದ ದೊಡ್ಡ ಕವಲಂದೆ ಗ್ರಾಮದಲ್ಲಿರುವ ನಾಡಕಚೇರಿ ಅವ್ಯವಸ್ಥೆಯಿಂದ ಕೂಡಿದೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬಂದಿದೆ.

ಮುಖ್ಯವಾಗಿ ನಾಡಕಚೇರಿಗೆ ಸ್ವಂತ ಕಟ್ಟಡ ಇಲ್ಲ. ೧೫ ವರ್ಷಗಳಿಂದಲೂ ಆಸ್ಪತ್ರೆಗೆ ಸೇರಿದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಟ್ಟಡವನ್ನು ನಾಡಕಚೇರಿಗೆ ಹಸ್ತಾಂತರಿಸಿಲ್ಲ. ಈಗಲೂ ಆಸ್ಪತ್ರೆ ಹೆಸರಿನಲ್ಲಿ ನಮೂದಾಗಿದೆ.

ಕಟ್ಟಡ ನಿರ್ಮಿಸಿ ಹಲವಾರು ವರ್ಷಗಳು ಕಳೆದಿರುವ ಕಾರಣ ಕಟ್ಟಡ ದುಸ್ಥಿತಿಗೆ ತಲುಪಿದೆ. ಕಟ್ಟಡದ ಗೋಡೆಗಳು ಮತ್ತು ಚಾವಣಿ ಶಿಥಿಲಾವಸ್ಥೆಗೆ ತಲುಪಿದೆ. ಚಾವಣಿಯ ಹೆಂಚುಗಳು ಕಳಚಿ ಬೀಳುತ್ತಿದ್ದು, ಮಳೆಗಾಲದಲ್ಲಿ ಕಟ್ಟಡ ಸೋರುತ್ತಿದೆ.

ಹೋಬಳಿ ವ್ಯಾಪ್ತಿಯ ರೈತರಿಗೆ ಸಂಬಂಧಪಟ್ಟ ಸಾಕಷ್ಟು ದಾಖಲೆಗಳು ಲಭ್ಯವಿದ್ದು, ಅಭದ್ರತೆ ಕಾಡುತ್ತಿದೆ. ಒಂದು ವೇಳೆ ದಾಖಲಾತಿ ಹಾಳಾದರೆ ಯಾರು ಹೊಣೆ ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿದೆ.

ಗಬ್ಬು ನಾರುತ್ತಿರುವ ಆವರಣ: ನಾಡಕಚೇರಿ ಆವರಣ ಗಬ್ಬುನಾರುತ್ತಿದೆ. ಮಳೆಗಾಲದಲ್ಲಿ ಕೆಸರುಗದ್ದೆ ಆಗುವ ಜೊತೆಗೆ ಕಸ-ಕಡ್ಡಿಗಳ ರಾಶಿ ಎಲ್ಲೆಡೆ ಕಂಡು ಬರುತ್ತದೆ. ಕಚೇರಿಗೆ ಬರುವ ರೈತರು ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಗೃಹ, ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಇಲ್ಲವಾಗಿದೆ. ದೊಡ್ಡ ಕವಲಂದೆ ಗ್ರಾಮ ಹೋಬಳಿ ಕೇಂದ್ರವಾಗಿದ್ದು, ಅಭಿವೃದ್ಧಿ ಮಾತ್ರ ಮರೀಚಿಕೆ ಯಾಗಿದೆ.

ಕವಲಂದೆ ಸಮೀಪದ ಹೊಸೂರು ಗ್ರಾಮದ ಗೇಟ್ ಬಳಿ ವಿದ್ಯಾರ್ಥಿ ನಿಲಯಕ್ಕೆ ಸೇರಿದ ಸುಸಜ್ಜಿತವಾದ ಕಟ್ಟಡ ಖಾಲಿ ಇದೆ. ಈ ವಿದ್ಯಾರ್ಥಿನಿಲಯವು ಸ್ಥಗಿತಗೊಂಡು ಹಲವಾರು ವರ್ಷಗಳು ಕಳೆದಿದ್ದು, ಪಾಳು ಬಿದ್ದಿದೆ. ಈ ಖಾಲಿ ಕಟ್ಟಡವನ್ನಾದರೂ ನಾಡ ಕಚೇರಿಗೆ ಅಥವಾ ಬೇರೆ ಯಾವುದಾದರೂ ಸರ್ಕಾರಿ ಕಚೇರಿಗೆ ಬಳಸಿಕೊಳ್ಳಬಹುದು ಎಂಬುದು ಸ್ಥಳೀಯರ ಸಲಹೆಯಾಗಿದೆ. ಸ್ಥಳೀಯ ಶಾಸಕರು, ಸಂಸದರು ಇತ್ತ ಗಮನ ಹರಿಸಿ ದೊಡ್ಡ ಕವಲಂದೆ ನಾಡಕಚೇರಿಗೆ ನೂತನ ಕಟ್ಟಡ ಒದಗಿಸುವ ಜೊತೆಗೆ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.

” ದೊಡ್ಡ ಕವಲಂದೆ ನಾಡಕಚೇರಿಗೆ ಸ್ವಂತ ಕಟ್ಟಡ ಇಲ್ಲದಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಶೀಘ್ರದಲ್ಲಿ ಕ್ರಮ ಕೈಗೊಳ್ಳುತ್ತೇನೆ.”

-ಶಿವಕುಮಾರ್ ಕಾಸನೂರು, ತಹಸಿಲ್ದಾರ್

” ದೊಡ್ಡ ಕವಲಂದೆ ನಾಡಕಚೇರಿಗೆ ಬರುವ ರೈತರು ಮತ್ತು ಸಾರ್ವಜನಿಕರಿಗೆ ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಕೂರಲು ಆಸನಗಳ ವ್ಯವಸ್ಥೆ ಇಲ್ಲ. ಶೌಚಗೃಹ ಇಲ್ಲ. ಕುಡಿಯಲು ನೀರು ಇಲ್ಲ. ಮೇಲಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೌಲಭ್ಯ ಒದಗಿಸಬೇಕು.”

-ಸಿದ್ದಲಿಂಗಪ್ಪ, ಕವಲಂದೆ ಗ್ರಾಪಂ ಸದಸ್ಯರು, ಹರಗನಪುರ

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

2 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

3 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

4 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

4 hours ago